AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?

ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಅವರು ಸರಿಗಮಪ ಕಾರ್ಯಕ್ರಮದಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗಿದ್ದಾರೆ. ಸುದೀಪ್ ಅವರು ಕನ್ನಡ ಭಾಷೆಗೆ ಬಹಳ ಮಹತ್ವ ನೀಡುತ್ತಾರೆ. ಈಗ ಅವರ ಮಗಳ ಇಂಗ್ಲಿಷ್ ಮಾತು ಅನೇಕರನ್ನು ಬೇಸರಗೊಳಿಸಿದೆ. ಕೆಲವರು ಸಾನ್ವಿಯನ್ನು ಸಮರ್ಥಿಸಿಕೊಂಡಿದ್ದಾರೆ, ಇನ್ನೂ ಕೆಲವರು ಈ ವಿಚಾರ ಚರ್ಚೆ ಮಾಡಿದ್ದಾರೆ.

ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
ಸಾನ್ವಿ
ರಾಜೇಶ್ ದುಗ್ಗುಮನೆ
|

Updated on:Jan 06, 2025 | 11:54 AM

Share

ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ.

ಘಟನೆ ಏನು?

ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ತಂದೆಗಾಗಿ, ‘ಜಸ್ಟ್ ಮಾತ್ ಮಾತಲ್ಲಿ..’ ಹಾಡನ್ನು ಸುಮಧುರವಾಗಿ ಹಾಡಿದರು. ಈ ಹಾಡಿನ ಬಳಿಕ ಅವರು ಸಂಪೂರ್ಣವಾಗಿ ಮಾತನಾಡಿದ್ದು ಇಂಗ್ಲಿಷ್​​ನಲ್ಲಿ. ‘ಪ್ರತಿವರ್ಷ’ ಎಂಬ ಶಬ್ದ ಬಿಟ್ಟು ಅವರು ಮತ್ತೆಲ್ಲಿಯೂ ಕನ್ನಡ ಶಬ್ದ ಮಾತನಾಡಿಲ್ಲ. ಇದು ಟ್ರೋಲ್​ಗೆ ಕಾರಣವಾದ ವಿಚಾರ.

ಸುದೀಪ್ ಕನ್ನಡ ಪ್ರೀತಿ

ಕಿಚ್ಚ ಸುದೀಪ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಕನ್ನಡಕ್ಕೆ ಗೌರವ ನೀಡದ ಸಂದರ್ಭದಲ್ಲಿ ಅವರು ಇದನ್ನು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸ್ಪರ್ಧಿಗಳು ಇಂಗ್ಲಿಷ್ ಮಾತನಾಡಿದಾಗ ಅದನ್ನು ಪ್ರಶ್ನೆ ಮಾಡಬೇಕು ಮತ್ತು ಕನ್ನಡ ಬಳಕೆ ಹೆಚ್ಚುವಂತೆ ಆಗಬೇಕು ಎಂದು ಸುದೀಪ್ ಅವರು ಬಿಗ್ ಬಾಸ್ ಆಯೋಜಕರ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಪರಭಾಷಾ ಸಂದರ್ಶನಗಳಲ್ಲಿ ಯಾರಾದರೂ ‘ಕನ್ನಡ್’ ಎಂದರೆ ‘ಅದು ಕನ್ನಡ್ ಅಲ್ಲ ಕನ್ನಡ’ ಎಂದು ತಿದ್ದುವ ಕೆಲಸ ಮಾಡಿದ್ದಾರೆ. ಆದರೆ, ಕನ್ನಡ ರಿಯಾಲಿಟಿ ಶೋನಲ್ಲಿ ಮಗಳಿಗೇಕೆ ಅವರು ಕನ್ನಡ ಮಾತನಾಡುವಂತೆ ಒತ್ತಾಯಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ: ಸಮಾಜ ಸೇವೆಗೆ ಮತ್ತೊಂದು ಕೊಡುಗೆ; ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಆರಂಭ  

ಸಮರ್ಥನೆ

ಇನ್ನೂ ಕೆಲವು ಸಾನ್ವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಸುದೀಪ್ ಮಗಳು ಸಾನ್ವಿ ಇಂಗ್ಲಿಷ್​ನಲ್ಲೇ ಮಾತನಡಿರಬಹುದು, ಆದರೆ, ಅವರು ಹಾಡಿದ್ದು ಕನ್ನಡದ ಹಾಡನ್ನೇ. ಈ ಕಾರಣಕ್ಕೆ ಸಂತೋಷ ವ್ಯಕ್ತಪಡಿಸಬೇಕು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Mon, 6 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ