AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ನಟ ಸುದೀಪ್ ವಿರುದ್ಧ ಸತೀಶ್ ನಿರಂತರವಾಗಿ ಟೀಕೆ ಮಾಡುತ್ತಿದ್ದು, ಇದಕ್ಕೆ ರಜತ್ ಹಾಗೂ ವಿನಯ್ ಸುದೀಪ್ ಪರವಾಗಿ ನಿಂತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಜತ್, ಸುದೀಪ್ ಬಗ್ಗೆ ಕೆಟ್ಟದಾಗಿ ಯೋಚಿಸುವ ಮೊದಲು "ಯಮ ಕಿಂಕರರನ್ನು" ದಾಟಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಜೊತೆಗಿನ ಫೋಟೋ ಹಂಚಿಕೊಂಡು, ತಾವು ಸದಾ ಕಿಚ್ಚನ ಬೆಂಬಲಕ್ಕೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ.

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್
ವಿನಯ್, ಸುದೀಪ್,ರಜತ್
ರಾಜೇಶ್ ದುಗ್ಗುಮನೆ
|

Updated on: Mar 10, 2026 | 10:46 AM

Share

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ ಯಾರ್ ಗೊತ್ತಾ’ ಹಾಡನ್ನು ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಆ ಬಳಿಕ ಸತೀಶ್ ಅವರನ್ನು ರಜತ್ ಪ್ರಶ್ನೆ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯನ್ನು ಸಹ ನೀಡಿದ್ದರು. ಅಲ್ಲದೆ, ವಿನಯ್ ಕೂಡ ರಜತ್ ಬೆಂಬಲಕ್ಕೆ ನಿಂತು, ಸತೀಶ್​​ಗೆ ಎಚ್ಚರಿಕೆ ನೀಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ರಜತ್ ಹಾಗೂ ವಿನಯ್ ಮೇಲೆ ಕೇಸ್ ಹಾಕಿದ್ದಾರೆ.

View this post on Instagram

A post shared by Rajath kishan G (@bujjjjii)

ಈ ಬೆನ್ನಲ್ಲೇ ಪೋಸ್ಟ್ ಮಾಡಿರೋ ರಜತ್ ಅವರು, ‘ನಮ್ಮ ಬಾದ್​​ಶಾ ಕಿಚ್ಚ ಸರ್ ಬಗ್ಗೆ ಮಾತಾಡೋದು ಅಲ್ಲ, ಕೆಟ್ಟದಾಗಿ ಯೋಚನೆ ಮಾಡ್ಬೇಕು ಅಂದರೂನೂ ಈ ಯಮ ಕಿಂಕರರನ ಮೊದಲು ದಾಟಬೇಕು. ವಿ ಲವ್​ ಯೂ ಸರ್’ ಎಂದು ಸುದೀಪ್ ಜೊತೆ ಇರೋ ಫೋಟೋನ ವಿನಯ್ ಹಾಗೂ ರಜತ್ ಕೊಲ್ಯಾಬರೇಷನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್

ರಜತ್ ಅವರು ಸುದೀಪ್ ಅಭಿಮಾನಿ. ಬಿಗ್ ಬಾಸ್​​​​ಗೆ ಬಂದ ಬಳಿಕ ಸುದೀಪ್ ಅವರ ಜೊತೆ ಒಳ್ಳೆಯ ನಂಟು ಬೆಳೆಯಿತು. ವಿನಯ್ ಹಾಗೂ ರಜತ್ ಮಚ್ಚಿನ ಕೇಸ್​ ಅಲ್ಲಿ ಒಳಕ್ಕೆ ಹೋದಾಗ, ಅವರನ್ನು ಬಿಡಿಸಿ ಕರೆದುಕೊಂಡು ಬಂದಿದ್ದು ಸುದೀಪ್ ಎನ್ನಲಾಗಿದೆ. ಈ ವಿಷಯವನ್ನು ರಜತ್ ಅವರು ಅನೇಕ ಬಾರಿ ಹೇಳಿದ್ದರು. ಈ ಕಾರಣದಿಂದ ಸುದೀಪ್​​​ ಬಗ್ಗೆ ಯಾರೋ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದಾಗ ಅದನ್ನು ಇವರು ವಿರೋಧಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ