AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudeep: ರಕ್ತದಲ್ಲಿ ಸುದೀಪ್ ಅವರ ಚಿತ್ರ ಬಿಡಿಸಿ ಹುಚ್ಚು ಅಭಿಮಾನಿ ತೋರಿದ ಫ್ಯಾನ್; ಕಿಚ್ಚನ ಪ್ರತಿಕ್ರಿಯೆ ಏನು?

ಸುದೀಪ್ ಅವರನ್ನು ಹಿಂಬಾಲಿಸುವ ಕೋಟ್ಯಂತರ ಮಂದಿ ಇದ್ದಾರೆ. ಅದೇ ರೀತಿ ಅನೇಕರು ಅವರ ಮೇಲೆ ಇರುವ ಅಭಿಮಾನಿವನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

Sudeep: ರಕ್ತದಲ್ಲಿ ಸುದೀಪ್ ಅವರ ಚಿತ್ರ ಬಿಡಿಸಿ ಹುಚ್ಚು ಅಭಿಮಾನಿ ತೋರಿದ ಫ್ಯಾನ್; ಕಿಚ್ಚನ ಪ್ರತಿಕ್ರಿಯೆ ಏನು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jul 28, 2023 | 11:25 AM

Share

ತಮ್ಮ ನೆಚ್ಚಿನ ನಟನ ಮೇಲೆ ಅಭಿಮಾನಿಗಳು ಕೆಲವೊಮ್ಮೆ ಹುಚ್ಚು ಪ್ರೀತಿ ತೋರುತ್ತಾರೆ. ಈ ಪ್ರೀತಿ ಕೆಲವೊಮ್ಮೆ ಮಿತಿಮೀರುವುದೂ ಉಂಟು. ಈಗ ಸುದೀಪ್ ಅವರ ಅಭಿಮಾನಿಯೊಬ್ಬರು ಇದೇ ರೀತಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ತಮ್ಮದೇ ರಕ್ತದಲ್ಲಿ ಸುದೀಪ್ (Sudeep) ಅವರ ಚಿತ್ರವನ್ನು ಬಿಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಇದನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ರಕ್ತ ಅಮೂಲ್ಯವಾದುದು, ಅದನ್ನು ದಾನ ಮಾಡಿ ಎಂದು ಕೋರಿದ್ದಾರೆ.

ಕಿಚ್ಚ ಸುದೀಪ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮೆಚ್ಚುಗೆ ಪಡೆದಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸುದೀಪ್ ಗುರುತಿಸಿಕೊಂಡಿದ್ದಾರೆ. ಅವರನ್ನು ಹಿಂಬಾಲಿಸುವ ಕೋಟ್ಯಂತರ ಮಂದಿ ಇದ್ದಾರೆ. ಅದೇ ರೀತಿ ಅನೇಕರು ಅವರ ಮೇಲೆ ಇರುವ ಅಭಿಮಾನಿವನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

ಶಿವಮೊಗ್ಗದ ವೈಷ್ಣವಿ ಅವರು ತಮ್ಮದೇ ರಕ್ತದಲ್ಲಿ ಸುದೀಪ್ ಅವರ ಫೋಟೋನ ಬಿಡಿಸಿದ್ದಾರೆ. ಈ ವಿಡಿಯೋನ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಸುದೀಪ್ ಅವರು ಕೂಡ ಇದನ್ನು ರೀಟ್ವೀಟ್ ಮಾಡಿಕೊಂಡಿದ್ದು, ಕೈ ಮುಗಿಯುವ ಎಮೋಜಿ ಹಾಕಿದ್ದಾರೆ.

ಈ ರೀತಿ ರಕ್ತದಲ್ಲಿ ಚಿತ್ರ ಬಿಡಿಸಿ ಅಭಿಮಾನ ತೋರುವುದು ಅನೇಕರಿಗೆ ಇಷ್ಟ ಆಗುವುದಿಲ್ಲ. ರಕ್ತ ಅತ್ಯಮೂಲ್ಯವಾದುದ್ದು. ಅದನ್ನು ಈ ರೀತಿ ಅಭಿಮಾನ ತೋರಿಸಲು ಬಳಕೆ ಮಾಡುವುದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಈ ರೀತಿ ಅಭಿಮಾನ ತೋರಿದ ಫ್ಯಾನ್ಸ್​ಗೆ ಕೆಲ ಸ್ಟಾರ್​ಗಳು ತಿಳಿ ಹೇಳಿದ್ದಿದೆ.

ಇದನ್ನೂ ಓದಿ: ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?

ಸುದೀಪ್ ಅವರು ಸದ್ಯ ‘ಕೆ46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಆಗಸ್ಟ್ ತಿಂಗಳಲ್ಲಿ ಆರಂಭ ಆಗಲಿದೆ. ಸತತ 50 ದಿನಕ್ಕೂ ಹೆಚ್ಚು ದಿನಗಳ ಕಾಲ ಈ ಶೂಟ್ ನಡೆಯಲಿದೆ ಎನ್ನಲಾಗಿದೆ. ಇದಲ್ಲದೆ, ಇನ್ನೂ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

(ವಿ.ಸೂ: ಪ್ರೀತಿ, ಅಭಿಮಾನ ಮನದಲ್ಲಿರಲಿ. ಅಭಿಮಾನ ವ್ಯಕ್ತಪಡಿಸಲು ಇನ್ನೂ ಹಲವು ಮಾರ್ಗವಿದೆ. ನಿಮಗೆ ಹಾನಿಮಾಡಿಕೊಂಡು ಅಭಿಮಾನ ಹೊರಹಾಕದಿರಿ ಎಂಬುದು ನಮ್ಮ ಕಳಕಳಿ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Fri, 28 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್