Sudeep: ರಕ್ತದಲ್ಲಿ ಸುದೀಪ್ ಅವರ ಚಿತ್ರ ಬಿಡಿಸಿ ಹುಚ್ಚು ಅಭಿಮಾನಿ ತೋರಿದ ಫ್ಯಾನ್; ಕಿಚ್ಚನ ಪ್ರತಿಕ್ರಿಯೆ ಏನು?

ಸುದೀಪ್ ಅವರನ್ನು ಹಿಂಬಾಲಿಸುವ ಕೋಟ್ಯಂತರ ಮಂದಿ ಇದ್ದಾರೆ. ಅದೇ ರೀತಿ ಅನೇಕರು ಅವರ ಮೇಲೆ ಇರುವ ಅಭಿಮಾನಿವನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

Sudeep: ರಕ್ತದಲ್ಲಿ ಸುದೀಪ್ ಅವರ ಚಿತ್ರ ಬಿಡಿಸಿ ಹುಚ್ಚು ಅಭಿಮಾನಿ ತೋರಿದ ಫ್ಯಾನ್; ಕಿಚ್ಚನ ಪ್ರತಿಕ್ರಿಯೆ ಏನು?
ಸುದೀಪ್
Follow us
|

Updated on:Jul 28, 2023 | 11:25 AM

ತಮ್ಮ ನೆಚ್ಚಿನ ನಟನ ಮೇಲೆ ಅಭಿಮಾನಿಗಳು ಕೆಲವೊಮ್ಮೆ ಹುಚ್ಚು ಪ್ರೀತಿ ತೋರುತ್ತಾರೆ. ಈ ಪ್ರೀತಿ ಕೆಲವೊಮ್ಮೆ ಮಿತಿಮೀರುವುದೂ ಉಂಟು. ಈಗ ಸುದೀಪ್ ಅವರ ಅಭಿಮಾನಿಯೊಬ್ಬರು ಇದೇ ರೀತಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ತಮ್ಮದೇ ರಕ್ತದಲ್ಲಿ ಸುದೀಪ್ (Sudeep) ಅವರ ಚಿತ್ರವನ್ನು ಬಿಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಇದನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ರಕ್ತ ಅಮೂಲ್ಯವಾದುದು, ಅದನ್ನು ದಾನ ಮಾಡಿ ಎಂದು ಕೋರಿದ್ದಾರೆ.

ಕಿಚ್ಚ ಸುದೀಪ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮೆಚ್ಚುಗೆ ಪಡೆದಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸುದೀಪ್ ಗುರುತಿಸಿಕೊಂಡಿದ್ದಾರೆ. ಅವರನ್ನು ಹಿಂಬಾಲಿಸುವ ಕೋಟ್ಯಂತರ ಮಂದಿ ಇದ್ದಾರೆ. ಅದೇ ರೀತಿ ಅನೇಕರು ಅವರ ಮೇಲೆ ಇರುವ ಅಭಿಮಾನಿವನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

ಶಿವಮೊಗ್ಗದ ವೈಷ್ಣವಿ ಅವರು ತಮ್ಮದೇ ರಕ್ತದಲ್ಲಿ ಸುದೀಪ್ ಅವರ ಫೋಟೋನ ಬಿಡಿಸಿದ್ದಾರೆ. ಈ ವಿಡಿಯೋನ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಸುದೀಪ್ ಅವರು ಕೂಡ ಇದನ್ನು ರೀಟ್ವೀಟ್ ಮಾಡಿಕೊಂಡಿದ್ದು, ಕೈ ಮುಗಿಯುವ ಎಮೋಜಿ ಹಾಕಿದ್ದಾರೆ.

ಈ ರೀತಿ ರಕ್ತದಲ್ಲಿ ಚಿತ್ರ ಬಿಡಿಸಿ ಅಭಿಮಾನ ತೋರುವುದು ಅನೇಕರಿಗೆ ಇಷ್ಟ ಆಗುವುದಿಲ್ಲ. ರಕ್ತ ಅತ್ಯಮೂಲ್ಯವಾದುದ್ದು. ಅದನ್ನು ಈ ರೀತಿ ಅಭಿಮಾನ ತೋರಿಸಲು ಬಳಕೆ ಮಾಡುವುದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಈ ರೀತಿ ಅಭಿಮಾನ ತೋರಿದ ಫ್ಯಾನ್ಸ್​ಗೆ ಕೆಲ ಸ್ಟಾರ್​ಗಳು ತಿಳಿ ಹೇಳಿದ್ದಿದೆ.

ಇದನ್ನೂ ಓದಿ: ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?

ಸುದೀಪ್ ಅವರು ಸದ್ಯ ‘ಕೆ46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಆಗಸ್ಟ್ ತಿಂಗಳಲ್ಲಿ ಆರಂಭ ಆಗಲಿದೆ. ಸತತ 50 ದಿನಕ್ಕೂ ಹೆಚ್ಚು ದಿನಗಳ ಕಾಲ ಈ ಶೂಟ್ ನಡೆಯಲಿದೆ ಎನ್ನಲಾಗಿದೆ. ಇದಲ್ಲದೆ, ಇನ್ನೂ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

(ವಿ.ಸೂ: ಪ್ರೀತಿ, ಅಭಿಮಾನ ಮನದಲ್ಲಿರಲಿ. ಅಭಿಮಾನ ವ್ಯಕ್ತಪಡಿಸಲು ಇನ್ನೂ ಹಲವು ಮಾರ್ಗವಿದೆ. ನಿಮಗೆ ಹಾನಿಮಾಡಿಕೊಂಡು ಅಭಿಮಾನ ಹೊರಹಾಕದಿರಿ ಎಂಬುದು ನಮ್ಮ ಕಳಕಳಿ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Fri, 28 July 23

ತಾಜಾ ಸುದ್ದಿ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ