AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ

Kichcha Sudeep: ಈ ರೀತಿ ದಾಂಧಲೆ ಮಾಡಿದ್ದು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಹಾಕಿದ್ದಾರೆ.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ
ಸುದೀಪ್ ಹಾಗೂ ಅಹೋರಾತ್ರ
ರಾಜೇಶ್ ದುಗ್ಗುಮನೆ
|

Updated on:Mar 20, 2021 | 7:51 PM

Share

ಕಿಚ್ಚ ಸುದೀಪ್​ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. 

ಇಂದು ಫೇಸ್​ಬುಕ್​ನಲ್ಲಿ ಅಹೋರಾತ್ರ ಲೈವ್​ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ ಸುದೀಪ್​ ಅಭಿಮಾನಿಗಳದ್ದೇ ಕೆಲಸ. ಅವರು ನನ್ನನ್ನು ಕೊಲ್ಲಲು ಬಂದಿದ್ದರು. ಕಿಚ್ಚ ಸುದೀಪ್​ ಈಗಲೇ ಅರೆಸ್ಟ್​ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಿಚ್ಚ ಸುದೀಪ್​ ರಮ್ಮಿ ಗೇಮ್​ನ ರಾಯಭಾರಿ ಆಗಿದ್ದರು. ಇದಕ್ಕೆ ಅಹೋರಾತ್ರ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಕಿಚ್ಚ ಅವರನ್ನು ಅಹೋರಾತ್ರ ನಿರಂತರವಾಗಿ ಟೀಕಿಸಿದ್ದರು.  ಸುದೀಪ್​ ಮಾಡಿದ್ದು ಸರಿಯಲ್ಲ. ಅನೇಕರು ಆನ್​ಲೈನ್​ ಜೂಜಿನಿಂದ ಮನೆ ಮಠ ಕಳೆದುಕೊಂಡಿದ್ದಾರೆ. ಹೀಗಾಗಿ, ಅವರು ಇದರ ರಾಯಭಾರಿ ಆಗಿರುವುದು ಸರಿಯಲ್ಲ ಎಂದು ಹೇಳಿದ್ದರು. ಇಷ್ಟೇ ಅಲ್ಲ ಸುದೀಪ್​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಅಹೋರಾತ್ರ ಅವರ ನಡೆಗೆ ಕಿಚ್ಚನ ಅಭಿಮಾನಿಗಳು ಸಿಟ್ಟಾಗಿದ್ದರು. ಅಷ್ಟೇ ಅಲ್ಲ, ಇದು ಮುಂದುವರೆದರೆ ಸರಿ ಇರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಈ ವಿಚಾರದಲ್ಲಿ ಲೈವ್​ ಬಂದು ಮಾತನಾಡಿದ್ದ ಅಹೋರಾತ್ರ, ಕಿಚ್ಚನ ಅಭಿಮಾನಿಗಳು ನನಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಸತತವಾಗಿ ಸುದೀಪ್​ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಸುದೀಪ್​ ಅಭಿಮಾನಿಗಳು ಅಹೋರಾತ್ರ ಅವರ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂಬುದು ಅಹೋರಾತ್ರ ಅವರ ಆರೋಪ. ಸದ್ಯ ಈ ವಿಚಾರ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆಯಂತೆ.

ಕಿಚ್ಚ ಸುದೀಪ್​ ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರು ಈ ಘಟನೆ ಬಗ್ಗೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?

Published On - 7:10 pm, Sat, 20 March 21

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್