AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ

Kichcha Sudeep: ಈ ರೀತಿ ದಾಂಧಲೆ ಮಾಡಿದ್ದು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಹಾಕಿದ್ದಾರೆ.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ
ಸುದೀಪ್ ಹಾಗೂ ಅಹೋರಾತ್ರ
ರಾಜೇಶ್ ದುಗ್ಗುಮನೆ
|

Updated on:Mar 20, 2021 | 7:51 PM

Share

ಕಿಚ್ಚ ಸುದೀಪ್​ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. 

ಇಂದು ಫೇಸ್​ಬುಕ್​ನಲ್ಲಿ ಅಹೋರಾತ್ರ ಲೈವ್​ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ ಸುದೀಪ್​ ಅಭಿಮಾನಿಗಳದ್ದೇ ಕೆಲಸ. ಅವರು ನನ್ನನ್ನು ಕೊಲ್ಲಲು ಬಂದಿದ್ದರು. ಕಿಚ್ಚ ಸುದೀಪ್​ ಈಗಲೇ ಅರೆಸ್ಟ್​ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಿಚ್ಚ ಸುದೀಪ್​ ರಮ್ಮಿ ಗೇಮ್​ನ ರಾಯಭಾರಿ ಆಗಿದ್ದರು. ಇದಕ್ಕೆ ಅಹೋರಾತ್ರ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಕಿಚ್ಚ ಅವರನ್ನು ಅಹೋರಾತ್ರ ನಿರಂತರವಾಗಿ ಟೀಕಿಸಿದ್ದರು.  ಸುದೀಪ್​ ಮಾಡಿದ್ದು ಸರಿಯಲ್ಲ. ಅನೇಕರು ಆನ್​ಲೈನ್​ ಜೂಜಿನಿಂದ ಮನೆ ಮಠ ಕಳೆದುಕೊಂಡಿದ್ದಾರೆ. ಹೀಗಾಗಿ, ಅವರು ಇದರ ರಾಯಭಾರಿ ಆಗಿರುವುದು ಸರಿಯಲ್ಲ ಎಂದು ಹೇಳಿದ್ದರು. ಇಷ್ಟೇ ಅಲ್ಲ ಸುದೀಪ್​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಅಹೋರಾತ್ರ ಅವರ ನಡೆಗೆ ಕಿಚ್ಚನ ಅಭಿಮಾನಿಗಳು ಸಿಟ್ಟಾಗಿದ್ದರು. ಅಷ್ಟೇ ಅಲ್ಲ, ಇದು ಮುಂದುವರೆದರೆ ಸರಿ ಇರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಈ ವಿಚಾರದಲ್ಲಿ ಲೈವ್​ ಬಂದು ಮಾತನಾಡಿದ್ದ ಅಹೋರಾತ್ರ, ಕಿಚ್ಚನ ಅಭಿಮಾನಿಗಳು ನನಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಸತತವಾಗಿ ಸುದೀಪ್​ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಸುದೀಪ್​ ಅಭಿಮಾನಿಗಳು ಅಹೋರಾತ್ರ ಅವರ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂಬುದು ಅಹೋರಾತ್ರ ಅವರ ಆರೋಪ. ಸದ್ಯ ಈ ವಿಚಾರ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆಯಂತೆ.

ಕಿಚ್ಚ ಸುದೀಪ್​ ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರು ಈ ಘಟನೆ ಬಗ್ಗೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?

Published On - 7:10 pm, Sat, 20 March 21

Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!