AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ

Kichcha Sudeep: ಈ ರೀತಿ ದಾಂಧಲೆ ಮಾಡಿದ್ದು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಹಾಕಿದ್ದಾರೆ.

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ
ಸುದೀಪ್ ಹಾಗೂ ಅಹೋರಾತ್ರ
ರಾಜೇಶ್ ದುಗ್ಗುಮನೆ
|

Updated on:Mar 20, 2021 | 7:51 PM

Share

ಕಿಚ್ಚ ಸುದೀಪ್​ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. 

ಇಂದು ಫೇಸ್​ಬುಕ್​ನಲ್ಲಿ ಅಹೋರಾತ್ರ ಲೈವ್​ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ ಸುದೀಪ್​ ಅಭಿಮಾನಿಗಳದ್ದೇ ಕೆಲಸ. ಅವರು ನನ್ನನ್ನು ಕೊಲ್ಲಲು ಬಂದಿದ್ದರು. ಕಿಚ್ಚ ಸುದೀಪ್​ ಈಗಲೇ ಅರೆಸ್ಟ್​ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಿಚ್ಚ ಸುದೀಪ್​ ರಮ್ಮಿ ಗೇಮ್​ನ ರಾಯಭಾರಿ ಆಗಿದ್ದರು. ಇದಕ್ಕೆ ಅಹೋರಾತ್ರ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಕಿಚ್ಚ ಅವರನ್ನು ಅಹೋರಾತ್ರ ನಿರಂತರವಾಗಿ ಟೀಕಿಸಿದ್ದರು.  ಸುದೀಪ್​ ಮಾಡಿದ್ದು ಸರಿಯಲ್ಲ. ಅನೇಕರು ಆನ್​ಲೈನ್​ ಜೂಜಿನಿಂದ ಮನೆ ಮಠ ಕಳೆದುಕೊಂಡಿದ್ದಾರೆ. ಹೀಗಾಗಿ, ಅವರು ಇದರ ರಾಯಭಾರಿ ಆಗಿರುವುದು ಸರಿಯಲ್ಲ ಎಂದು ಹೇಳಿದ್ದರು. ಇಷ್ಟೇ ಅಲ್ಲ ಸುದೀಪ್​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಅಹೋರಾತ್ರ ಅವರ ನಡೆಗೆ ಕಿಚ್ಚನ ಅಭಿಮಾನಿಗಳು ಸಿಟ್ಟಾಗಿದ್ದರು. ಅಷ್ಟೇ ಅಲ್ಲ, ಇದು ಮುಂದುವರೆದರೆ ಸರಿ ಇರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಈ ವಿಚಾರದಲ್ಲಿ ಲೈವ್​ ಬಂದು ಮಾತನಾಡಿದ್ದ ಅಹೋರಾತ್ರ, ಕಿಚ್ಚನ ಅಭಿಮಾನಿಗಳು ನನಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಸತತವಾಗಿ ಸುದೀಪ್​ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಸುದೀಪ್​ ಅಭಿಮಾನಿಗಳು ಅಹೋರಾತ್ರ ಅವರ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂಬುದು ಅಹೋರಾತ್ರ ಅವರ ಆರೋಪ. ಸದ್ಯ ಈ ವಿಚಾರ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆಯಂತೆ.

ಕಿಚ್ಚ ಸುದೀಪ್​ ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರು ಈ ಘಟನೆ ಬಗ್ಗೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?

Published On - 7:10 pm, Sat, 20 March 21

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!