AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ನಟನೆಯ ‘ಮ್ಯಾಕ್ಸ್​’ ಸಿನಿಮಾ ಹೆಸರಿನಲ್ಲಿ ಅಭಿಮಾನಿಗಳಿಂದ ಆಂಬ್ಯುಲೆನ್ಸ್ ಸೇವೆ ಆರಂಭ

‘ಸಂಜೀವಿನಿ ಜೀವ ರಕ್ಷಕ ಟ್ರಸ್ಟ್’ ಈಗಾಗಲೇ ಅನೇಕರ ಪ್ರಾಣ ಉಳಿಸುವಲ್ಲಿ ನೆರವಾಗಿದೆ. ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಈ ಟ್ರಸ್ಟ್​ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಈಗ ಸುದೀಪ್​ ನಟಿಸುತ್ತಿರುವ ‘ಮ್ಯಾಕ್ಸ್’ ಸಿನಿಮಾದ ಹೆಸರಿನಲ್ಲೇ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಿರುವುದು ವಿಶೇಷ.

ಸುದೀಪ್​ ನಟನೆಯ ‘ಮ್ಯಾಕ್ಸ್​’ ಸಿನಿಮಾ ಹೆಸರಿನಲ್ಲಿ ಅಭಿಮಾನಿಗಳಿಂದ ಆಂಬ್ಯುಲೆನ್ಸ್ ಸೇವೆ ಆರಂಭ
‘ಮ್ಯಾಕ್ಸ್‌’ ಹೆಸರಿನ ಆಂಬ್ಯುಲೆನ್ಸ್​ಗಳ ಲೋಕಾರ್ಪಣೆ ಮಾಡಿದ ಸುದೀಪ್
ಮದನ್​ ಕುಮಾರ್​
|

Updated on: Jan 19, 2024 | 9:41 PM

Share

ಕಿಚ್ಚ ಸುದೀಪ್​ (Kichcha Sudeep) ಅವರು ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳ ಮೂಲಕವೂ ಹೆಸರುವಾಸಿ ಆಗಿದ್ದಾರೆ. ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ಅನೇಕರಿಗೆ ಸಹಾಯ ಮಾಡಿ ರಿಯಲ್​ ಹೀರೋ ಎನಿಸಿಕೊಂಡಿದ್ದಾರೆ. ಅವರ ಹೆಸರಿನಲ್ಲಿರುವ ಚಾರಿಟೇಬಲ್​ ಟ್ರಸ್ಟ್​ ಮೂಲಕ ಸಹಾಯ ಹಸ್ತ ಚಾಚುವ ಕಾಯಕ ಮುಂದುವರಿದಿದೆ. ಅನಾರೋಗ್ಯದಲ್ಲಿ ಇರುವವರಿಗೆ ಆರ್ಥಿಕವಾಗಿ ನೆರವಾಗುವುದು ಮಾತ್ರವಲ್ಲದೇ ಗ್ರಾಮ, ಶಾಲೆಗಳನ್ನು ದತ್ತು ಪಡೆದು ಅವುಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸುದೀಪ್​ ಹೆಸರಿನಲ್ಲಿ ನಡೆದ ಈ ಎಲ್ಲ ಕೆಲಸಗಳಿಗೆ ಇನ್ನೊಂದು ಸೇರ್ಪಡೆ ಆಗುತ್ತಿದೆ. ಸುದೀಪ್​ ಅವರ ಅಭಿಮಾನಿಗಳು (Kichcha Sudeep Fans) ಸ್ಥಾಪಿಸಿರುವ ‘ಸಂಜೀವಿನಿ ಜೀವ ರಕ್ಷಕ ಟ್ರಸ್ಟ್’ ಮೂಲಕ ಆಂಬ್ಯುಲೆನ್ಸ್​ (Ambulance) ಸೇವೆ ಆರಂಭಿಸಲಾಗಿದೆ.

‘ಸಂಜೀವಿನಿ ಜೀವ ರಕ್ಷಕ ಟ್ರಸ್ಟ್’ ಈಗಾಗಲೇ ಸಾವಿರಾರು ಜನರ ಪ್ರಾಣ ಉಳಿಸುವಲ್ಲಿ ನೆರವಾಗಿದೆ. ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಈ ಟ್ರಸ್ಟ್​ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಈಗ ಸುದೀಪ್​ ನಟಿಸುತ್ತಿರುವ ‘ಮ್ಯಾಕ್ಸ್’ ಸಿನಿಮಾದ ಹೆಸರಿನಲ್ಲೇ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಿರುವುದು ವಿಶೇಷ. ಇಂದು (ಜನವರಿ 19) ‘ಮಾಕ್ಸ್’ ಹೆಸರಿನ ಆಂಬ್ಯುಲೆನ್ಸ್​ಗಳನ್ನು ಸುದೀಪ್ ಅವರು ಸಾವರ್ಜನಿಕರ ಸೇವೆಗೆ ಲೋಕಾರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್​ ಬಿಡುಗಡೆ ಮಾಡಿದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್

‘ಮ್ಯಾಕ್ಸ್​’ ಸಿನಿಮಾ ಬಗ್ಗೆ:

‘ವಿಕ್ರಾಂತ್​ ರೋಣ’ ಬಳಿಕ ಸುದೀಪ್​ ಅವರು ಒಪ್ಪಿಕೊಂಡ ಸಿನಿಮಾ ‘ಮ್ಯಾಕ್ಸ್​’. ಈ ಬಹುನಿರೀಕ್ಷಿತ ಸಿನಿಮಾದ ಮೊದಲ ಗ್ಲಿಂಪ್ಸ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಈ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕ್ಲೈಮ್ಯಾಕ್ಸ್ ಶೂಟಿಂಗ್​ ನಡೆಯುತ್ತಿದೆ. ಈಗಾಗಲೇ ಚಿತ್ರೀಕರಣ ಆಗಿರುವ ಭಾಗಕ್ಕೆ ಎಲ್ಲ ಕಲಾವಿದರು ಧ್ವನಿ ನೀಡಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮ್ಯಾಕ್ಸ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Max Movie: ಬೆಳ್ಳಂಬೆಳಿಗ್ಗೆ ‘ಮ್ಯಾಕ್ಸ್’ ಬಗ್ಗೆ ಅಪ್​ಡೇಟ್ ಕೊಟ್ಟ ಸುದೀಪ್​; ಎಲ್ಲಿಯವರೆಗೆ ಬಂತು ಶೂಟ್​?

‘ವಿ. ಕ್ರಿಯೇಷನ್ಸ್’ ಬ್ಯಾನರ್ ಮೂಲಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್​’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಲ್ಲಿ ಡಿಫರೆಂಟ್​ ಆದಂತಹ ಸ್ಟೋರಿ ಇರಲಿದೆ. ‘ಮ್ಯಾಕ್ಸ್‌’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಸುದೀಪ್​ ಜೊತೆ ವರಲಕ್ಷ್ಮಿ ಶರತ್‌ಕುಮಾರ್, ಕಾಮರಾಜ್, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಈ ಸಾಹಸಮಯ ಚಿತ್ರದ ಬಹುತೇಕ ಶೂಟಿಂಗ್​ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ