Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಅನಾರೋಗ್ಯದ ವೇಳೆ ಮಾಡಿಕೊಂಡಿದ್ದ ಹರಕೆ ತೀರಿಸಿದ ಫ್ಯಾನ್ಸ್​; ಮಲೆ ಮಹದೇಶ್ವರನ ಬೆಟ್ಟದಲ್ಲಿ ಉರುಳು ಸೇವೆ

ಕಿಚ್ಚ ಸುದೀಪ್​ ಬೇಗ ಗುಣಮುಖರಾದರೆ ಉರುಳು ಸೇವೆ ಮಾಡುವುದಾಗಿ ಹಲವು ಅಭಿಮಾನಿಗಳು ಹರಕೆ ಮಾಡಿಕೊಂಡಿದ್ದರು. ಮಂಗಳವಾರ (ನ.9) ಆ ಹರಕೆಯನ್ನು ತೀರಿಸಿದ್ದಾರೆ. ಮಲೆ ಮಹದೇಶ್ವರನ ಬೆಟ್ಟದಲ್ಲಿ ಅಭಿಮಾನಿಗಳು ಉರುಳು ಸೇವೆ ಮಾಡಿದ್ದಾರೆ.

ಸುದೀಪ್​ ಅನಾರೋಗ್ಯದ ವೇಳೆ ಮಾಡಿಕೊಂಡಿದ್ದ ಹರಕೆ ತೀರಿಸಿದ ಫ್ಯಾನ್ಸ್​; ಮಲೆ ಮಹದೇಶ್ವರನ ಬೆಟ್ಟದಲ್ಲಿ ಉರುಳು ಸೇವೆ
ಮಲೆ ಮಹದೇಶ್ವರನ ಬೆಟ್ಟದಲ್ಲಿ ಉರುಳು ಸೇವೆ
Follow us
TV9 Web
| Updated By: ಮದನ್​ ಕುಮಾರ್​

Updated on: Nov 10, 2021 | 7:59 AM

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ದೊಡ್ಡದು. ಫ್ಯಾನ್ಸ್​ ಬಗ್ಗೆ ಸುದೀಪ್​ ಅಪಾರ ಕಾಳಜಿ ತೋರಿಸುತ್ತಾರೆ. ಅನಾರೋಗ್ಯದಲ್ಲಿದ್ದ ಎಷ್ಟೋ ಕುಟುಂಬಗಳಿಗೆ ಕಿಚ್ಚ ಸುದೀಪ್​ ಚಾರಿಟೇಬಲ್​ ಸೊಸೈಟಿ ವತಿಯಿಂದ ಸಹಾಯ ಆಗಿದೆ. ಅದೇ ರೀತಿ ಸುದೀಪ್​ ಆರೋಗ್ಯಕ್ಕಾಗಿ ಅಭಿಮಾನಿಗಳು ಕೂಡ ಪ್ರತಿ ದಿನ ದೇವರಲ್ಲಿ ಪ್ರಾರ್ಥಿಸುತ್ತಾರೆ. ಕೆಲವೇ ತಿಂಗಳ ಹಿಂದೆ ಸುದೀಪ್​ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ಆ ಸಂದರ್ಭದಲ್ಲಿ ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್​ ಹರಕೆ ಕಟ್ಟಿಕೊಂಡಿದ್ದರು. ಈಗ ಅದನ್ನು ತೀರಿಸಲಾಗಿದೆ.

ತಮ್ಮ ನೆಚ್ಚಿನ ಹೀರೋ ಬೇಗ ಗುಣಮುಖರಾದರೆ ಉರುಳು ಸೇವೆ ಮಾಡುವುದಾಗಿ ಹಲವು ಅಭಿಮಾನಿಗಳು ಹರಕೆ ಮಾಡಿಕೊಂಡಿದ್ದರು. ಮಂಗಳವಾರ (ನ.9) ಆ ಹರಕೆಯನ್ನು ತೀರಿಸಿದ್ದಾರೆ. ಮಲೆ ಮಹದೇಶ್ವರನ ಬೆಟ್ಟದಲ್ಲಿ ಅಭಿಮಾನಿಗಳು ಉರುಳುಸೇವೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ಅದನ್ನು ಕಂಡು ಕಿಚ್ಚ ಸುದೀಪ್​ ಧನ್ಯವಾದ ಅರ್ಪಿಸಿದ್ದಾರೆ. ಜನರ ಅಭಿಮಾನಕ್ಕೆ ಅವರು ಮನಸೋತಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಇದನ್ನು ಕೆಲವರು ಬೇರೆ ರೀತಿಯ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ‘ಸುದೀಪ್​ ಅವರೇ, ನಾನು ನಿಮ್ಮ ವ್ಯಕ್ತಿತ್ವವನ್ನು ಆರಾಧಿಸುತ್ತೇನೆ. ಆದರೆ ಅಭಿಮಾನಿಗಳಲ್ಲಿ ಇರುವ ಈ ರೀತಿಯ ಮೂಢನಂಬಿಕೆಯನ್ನು ನೀವು ಪ್ರೋತ್ಸಾಹಿಸಬಾರದು’ ಎಂದು ವ್ಯಕ್ತಿಯೊಬ್ಬರು ಕಮೆಂಟ್​ ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ನಿರೂಪಣೆ ಮಾಡುತ್ತಿರುವಾಗ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಅವರು ಕೆಲವು ವಾರಗಳ ಕಾಲ ನಿರೂಪಣೆ ಮಾಡಲು ಸಾಧ್ಯವಾಗಿರಲಿಲ್ಲ. ಇಷ್ಟು ವರ್ಷಗಳ ಬಿಗ್​ ಬಾಸ್​ ಜರ್ನಿಯಲ್ಲಿ ಸುದೀಪ್ ಯಾವತ್ತೂ ಹೀಗೆ ಗೈರಾಗಿರಲಿಲ್ಲ. ಈ ಬಾರಿ ಏನೋ ಸೀರಿಯಸ್​ ಆಗಿದೆ ಎಂದು ಅಭಿಮಾನಿಗಳಿಗೆ ಸಂಶಯ ಮೂಡಿತ್ತು. ಹಾಗಾಗಿ ಕಿಚ್ಚನಿಗೋಸ್ಕರ ಅನೇಕರು ಹರಕೆ ಕಟ್ಟಿಕೊಂಡಿದ್ದರು.

ಸುದೀಪ್​ ಅವರಿಗೆ ಕೊರೊನಾ ವೈರಸ್​ ತಗುಲಿತ್ತು ಎಂದು ನಂತರ ತಿಳಿಯಿತು. ಆ ವೇಳೆಗಾಗಲೇ ಅವರು ಚೇತರಿಸಿಕೊಂಡಿದ್ದರು. ಹಲವು ದಿನಗಳ ಗ್ಯಾಪ್​ ಬಳಿಕ ಅವರು ಮತ್ತೆ ಬಿಗ್​ ಬಾಸ್​ ವೇದಿಕೆಗೆ ಮರಳಿದ್ದರು. ಆಗ ಎಲ್ಲ ಸ್ಪರ್ಧಿಗಳು ನಿಟ್ಟುಸಿರು ಬಿಟ್ಟಿದ್ದರು.

ಸಿನಿಮಾಗಳ ವಿಚಾರಕ್ಕೆ ಬರೋದಾದರೆ, ‘ಕೋಟಿಗೊಬ್ಬ 3’ ಚಿತ್ರ ತೆರೆಕಂಡು ಯಶಸ್ವಿ ಆಗಿದೆ. ಈಗ ಸುದೀಪ್​ ಅಭಿಮಾನಿಗಳ ಕಣ್ಣು ‘ವಿಕ್ರಾಂತ್​ ರೋಣ’ ಚಿತ್ರದ ಮೇಲಿದೆ. ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಸುದೀಪ್​ ಜೊತೆ ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್​ಗೆ ಸುದೀಪ್​ ನುಡಿ ನಮನ; ಅಂತ್ಯಕ್ರಿಯೆ ವೇಳೆ ಮಕ್ಕಳ ಬಗ್ಗೆ ಯೋಚಿಸಿ ಕಣ್ಣೀರಿಟ್ಟ ಕಿಚ್ಚ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​