AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ

ಒಂದು ಕಾಲದಲ್ಲಿ ಸುದೀಪ್​ ಮತ್ತು ದರ್ಶನ್​ ಸ್ನೇಹಿತರಾಗಿದ್ದರು. ಆದರೆ ನಂತರದ ದಿನಗಳಲ್ಲಿ ಅವರು ದೂರ ಆದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗ ದರ್ಶನ್​ ಪ್ರಮುಖ ಆರೋಪಿ ಆಗಿದ್ದು, ಆ ಕುರಿತು ಸುದೀಪ್​ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ
ಕಿಚ್ಚ ಸುದೀಪ್​, ದರ್ಶನ್​
ಮದನ್​ ಕುಮಾರ್​
|

Updated on: Jun 16, 2024 | 6:40 PM

Share

ನಟ ದರ್ಶನ್​ (Darshan) ಅವರು ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಈಗ ಕಿಚ್ಚ ಸುದೀಪ್​ ಕೂಡ ಆ ಕುರಿತು ಮಾತನಾಡಿದ್ದಾರೆ. ‘ನನಗೆ ಗೊತ್ತಿರೋದು ಇಷ್ಟೇ.. ನೀವು (ಮಾಧ್ಯಮ) ಏನು ತೋರಿಸುತ್ತಿದ್ದೀರೋ ನಾವು ಅದನ್ನೇ ನೋಡಿ ವಿಚಾರ ತಿಳಿದುಕೊಳ್ಳುತ್ತಿದ್ದೇವೆ. ಅದರಲ್ಲಿ ಅರ್ಥ ಆಗಿರೋದು ಏನೆಂದರೆ, ಮಾಧ್ಯಮ ಮತ್ತು ಪೊಲೀಸ್​ ಸಿಬ್ಬಂದಿ ಬಹಳ ಪ್ರಯತ್ನ ಹಾಕಿ ಸತ್ಯಾಂಶ ಹೊರತರಲು ಸಾಕಷ್ಟು ಕೆಲಸ ಮಾಡುತ್ತಿದ್ದೀರಿ. ಅದರಲ್ಲಿ ಎರಡನೇ ಮಾತೇ ಇಲ್ಲ’ ಎಂದು ಕಿಚ್ಚ ಸುದೀಪ್ (Kichcha Sudeep) ಹೇಳಿದ್ದಾರೆ.

‘ನನಗೆ ಗೊತ್ತಿರುವ ಹಾಗೆ, ಇತ್ತೀಚಿಗೆ ನಾನು ನಿಮ್ಮ ನ್ಯೂಸ್​ನಲ್ಲಿ ನೋಡಿದ್ದು, ಸಿಎಂ ಅವರೇ ಈ ಪ್ರಕರಣದ ಬಗ್ಗೆ ಹಠ ಹಿಡಿದು ಕೂತಿದ್ದಾರೆ. ಕರ್ನಾಟಕದ ದೊಡ್ಡ ಸ್ಥಾನದಲ್ಲಿ ಇರುವ ಅವರು, ಮಾಧ್ಯಮದವರು ಹಾಗೂ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದಾಗ, ಕಾಮನ್​ ಮ್ಯಾನ್​ ಆಗಿ ನನ್ನ ಪ್ರಕಾರ ಕಲಾವಿದರ ಹೆಸರು ಬರಲ್ಲ. ನಾನು ಅವರ ಪರ, ಇವರ ಪರ ಅಂತ ಮಾತಾಡುವುದು ತಪ್ಪಾಗುತ್ತದೆ. ವಿರುದ್ಧವಾಗಿ ಮಾತನಾಡಿದರೂ ತಪ್ಪಾಗತ್ತೆ’ ಎಂದಿದ್ದಾರೆ ಸುದೀಪ್​.

‘ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ ಹೆಣ್ಮಗುಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾದ ರೇಣುಕಾ ಸ್ವಾಮಿ ಅವರು ಎಲ್ಲೋ ರಸ್ತೆಯಲ್ಲಿ ಆ ರೀತಿ ಬಿದ್ದಿದ್ದರಲ್ಲ, ಅವರಿಗೆ ನ್ಯಾಯ ಸಿಗಬೇಕು. ಹುಟ್ಟಬೇಕಾಗಿರುವ ಆ ಮಗುಗೆ ನ್ಯಾಯ ಸಿಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಹುಟ್ಟುಬೇಕು ಎಂದರೆ ಈ ಕೇಸ್​ನಲ್ಲಿ ಒಳ್ಳೆಯ ನ್ಯಾಯ ಆಗಬೇಕು’ ಎಂದಿದ್ದಾರೆ ಕಿಚ್ಚ ಸುದೀಪ್​.

ಇದನ್ನೂ ಓದಿ: ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ

‘ನಾನು ಇಷ್ಟು ಹೇಳಬಲ್ಲೆ, ಮಾಧ್ಯಮದವರು ತೋರಿಸಿದ್ದು ನಮಗೆ ಗೊತ್ತೇ ಹೊರತು ನಾನು ಸ್ಟೇಷನ್​ ಒಳಗೆ ಇಲ್ಲ. ಯಾವ ಸ್ಥಳದಲ್ಲೂ ನಾವು ಇಲ್ಲ. ಆ ಕುಟುಂಬಕ್ಕಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್​ಚಿಟ್​ ಬೇಕಾಗಿದೆ. ಕಲಾವಿದರು ತುಂಬ ಜನ ಇದ್ದಾರೆ. ಚಿತ್ರರಂಗ ಎಂದರೆ ಒಬ್ಬರು-ಇಬ್ಬರು ಅಲ್ಲ. ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ