‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ

ಒಂದು ಕಾಲದಲ್ಲಿ ಸುದೀಪ್​ ಮತ್ತು ದರ್ಶನ್​ ಸ್ನೇಹಿತರಾಗಿದ್ದರು. ಆದರೆ ನಂತರದ ದಿನಗಳಲ್ಲಿ ಅವರು ದೂರ ಆದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗ ದರ್ಶನ್​ ಪ್ರಮುಖ ಆರೋಪಿ ಆಗಿದ್ದು, ಆ ಕುರಿತು ಸುದೀಪ್​ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ
ಕಿಚ್ಚ ಸುದೀಪ್​, ದರ್ಶನ್​
Follow us
|

Updated on: Jun 16, 2024 | 6:40 PM

ನಟ ದರ್ಶನ್​ (Darshan) ಅವರು ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಈಗ ಕಿಚ್ಚ ಸುದೀಪ್​ ಕೂಡ ಆ ಕುರಿತು ಮಾತನಾಡಿದ್ದಾರೆ. ‘ನನಗೆ ಗೊತ್ತಿರೋದು ಇಷ್ಟೇ.. ನೀವು (ಮಾಧ್ಯಮ) ಏನು ತೋರಿಸುತ್ತಿದ್ದೀರೋ ನಾವು ಅದನ್ನೇ ನೋಡಿ ವಿಚಾರ ತಿಳಿದುಕೊಳ್ಳುತ್ತಿದ್ದೇವೆ. ಅದರಲ್ಲಿ ಅರ್ಥ ಆಗಿರೋದು ಏನೆಂದರೆ, ಮಾಧ್ಯಮ ಮತ್ತು ಪೊಲೀಸ್​ ಸಿಬ್ಬಂದಿ ಬಹಳ ಪ್ರಯತ್ನ ಹಾಕಿ ಸತ್ಯಾಂಶ ಹೊರತರಲು ಸಾಕಷ್ಟು ಕೆಲಸ ಮಾಡುತ್ತಿದ್ದೀರಿ. ಅದರಲ್ಲಿ ಎರಡನೇ ಮಾತೇ ಇಲ್ಲ’ ಎಂದು ಕಿಚ್ಚ ಸುದೀಪ್ (Kichcha Sudeep) ಹೇಳಿದ್ದಾರೆ.

‘ನನಗೆ ಗೊತ್ತಿರುವ ಹಾಗೆ, ಇತ್ತೀಚಿಗೆ ನಾನು ನಿಮ್ಮ ನ್ಯೂಸ್​ನಲ್ಲಿ ನೋಡಿದ್ದು, ಸಿಎಂ ಅವರೇ ಈ ಪ್ರಕರಣದ ಬಗ್ಗೆ ಹಠ ಹಿಡಿದು ಕೂತಿದ್ದಾರೆ. ಕರ್ನಾಟಕದ ದೊಡ್ಡ ಸ್ಥಾನದಲ್ಲಿ ಇರುವ ಅವರು, ಮಾಧ್ಯಮದವರು ಹಾಗೂ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದಾಗ, ಕಾಮನ್​ ಮ್ಯಾನ್​ ಆಗಿ ನನ್ನ ಪ್ರಕಾರ ಕಲಾವಿದರ ಹೆಸರು ಬರಲ್ಲ. ನಾನು ಅವರ ಪರ, ಇವರ ಪರ ಅಂತ ಮಾತಾಡುವುದು ತಪ್ಪಾಗುತ್ತದೆ. ವಿರುದ್ಧವಾಗಿ ಮಾತನಾಡಿದರೂ ತಪ್ಪಾಗತ್ತೆ’ ಎಂದಿದ್ದಾರೆ ಸುದೀಪ್​.

‘ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ ಹೆಣ್ಮಗುಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾದ ರೇಣುಕಾ ಸ್ವಾಮಿ ಅವರು ಎಲ್ಲೋ ರಸ್ತೆಯಲ್ಲಿ ಆ ರೀತಿ ಬಿದ್ದಿದ್ದರಲ್ಲ, ಅವರಿಗೆ ನ್ಯಾಯ ಸಿಗಬೇಕು. ಹುಟ್ಟಬೇಕಾಗಿರುವ ಆ ಮಗುಗೆ ನ್ಯಾಯ ಸಿಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಹುಟ್ಟುಬೇಕು ಎಂದರೆ ಈ ಕೇಸ್​ನಲ್ಲಿ ಒಳ್ಳೆಯ ನ್ಯಾಯ ಆಗಬೇಕು’ ಎಂದಿದ್ದಾರೆ ಕಿಚ್ಚ ಸುದೀಪ್​.

ಇದನ್ನೂ ಓದಿ: ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ

‘ನಾನು ಇಷ್ಟು ಹೇಳಬಲ್ಲೆ, ಮಾಧ್ಯಮದವರು ತೋರಿಸಿದ್ದು ನಮಗೆ ಗೊತ್ತೇ ಹೊರತು ನಾನು ಸ್ಟೇಷನ್​ ಒಳಗೆ ಇಲ್ಲ. ಯಾವ ಸ್ಥಳದಲ್ಲೂ ನಾವು ಇಲ್ಲ. ಆ ಕುಟುಂಬಕ್ಕಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್​ಚಿಟ್​ ಬೇಕಾಗಿದೆ. ಕಲಾವಿದರು ತುಂಬ ಜನ ಇದ್ದಾರೆ. ಚಿತ್ರರಂಗ ಎಂದರೆ ಒಬ್ಬರು-ಇಬ್ಬರು ಅಲ್ಲ. ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ