AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudeep: ‘ಬೆದರಿಕೆ ಪತ್ರ ಬರೆದಿದ್ದು ಚಿತ್ರರಂಗದವರು’: ಶಾಕಿಂಗ್​ ವಿಚಾರ ಬಯಲು ಮಾಡಿದ ಕಿಚ್ಚ ಸುದೀಪ್​

Kichcha Sudeep Threat Letter: ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದಾರೆ.

Sudeep: ‘ಬೆದರಿಕೆ ಪತ್ರ ಬರೆದಿದ್ದು ಚಿತ್ರರಂಗದವರು’: ಶಾಕಿಂಗ್​ ವಿಚಾರ ಬಯಲು ಮಾಡಿದ ಕಿಚ್ಚ ಸುದೀಪ್​
ಸುದೀಪ್
ಮದನ್​ ಕುಮಾರ್​
|

Updated on:Apr 05, 2023 | 1:54 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಕಿಡಿಗೇಡಿಗಳು ಬೆದರಿಕೆ ಪತ್ರ ಕಳಿಸಿರುವ ಪ್ರಕರಣ ಸಂಚಲನ ಸೃಷ್ಟಿ ಮಾಡಿದೆ. ಸುದೀಪ್​ ಅವರು ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬೆದರಿಕೆ ಪತ್ರ (Threat Letter) ಬಂದಿರುವುದರಿಂದ ಇದು ರಾಜಕೀಯದವರ ಕೈವಾಡ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಲ್ಲ ಎಂದು ಸುದೀಪ್​ ಸ್ಪಷ್ಟನೆ ನೀಡಿದ್ದಾರೆ. ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಯಾರು ಅಂತ ಗೊತ್ತಿದ್ದರೂ ಕೂಡ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದಾರೆ.

‘ಯಾರು ಪತ್ರ ಬರೆದಿದ್ದಾರೆ ಎಂಬ ವಿಚಾರ ಹೊರಗಡೆ ಬರುತ್ತದೆ. ಅದನ್ನು ನಾನು ಸುಮ್ಮನೆ ಬಿಡುವುದಿಲ್ಲ. ಕೆಲವು ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಅದಕ್ಕೆ ಬದ್ಧವಾಗಿದ್ದೇನೆ. ಎಲ್ಲ ಪಕ್ಷದಲ್ಲೂ ನನಗೆ ಆತ್ಮೀಯರು ಇದ್ದಾರೆ. ನನ್ನ ಪರ ಇರುವವರಿಗಾಗಿ ನಾವು ಕೆಲವು ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಇದನ್ನೂ ಓದಿ
Image
‘ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, ಯಾರಿಗೂ ಟಿಕೆಟ್ ಕೇಳಿಲ್ಲ’; ಸುದೀಪ್ ಸ್ಪಷ್ಟನೆ
Image
Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​
Image
‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’; ಸುದೀಪ್ ಬಿಜೆಪಿ ಸೇರ್ತಾರೆ ಎನ್ನುವ ವಿಚಾರದಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ
Image
Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

‘ಇಂಥ ಕೆಲಸ ಮಾಡುವ ಬೇರೆಯವರಿಗೂ ಇದು ಒಂದು ಪಾಠ ಆಗಬೇಕಿದೆ. ವಿಳಾಸ ಗೊತ್ತಿದೆ ಎಂದಮಾತ್ರಕ್ಕೆ ಯಾರು ಬೇಕಾದರೂ ಒಂದು ಪೋಸ್ಟ್​ ಮಾಡುತ್ತಾರೆ. ಇದಕ್ಕೂ ರಾಜಕೀಯದಲ್ಲಿ ಇರುವವರಿಗೂ ಯಾವುದೇ ಸಂಬಂಧ ಇಲ್ಲ. ಚಿತ್ರರಂಗದಲ್ಲಿ ಇರುವವರೇ ಇದನ್ನು ಮಾಡಿದ್ದಾರೆ. ಅವರು ಯಾರು ಎಂಬುದು ಕೂಡ ನನಗೆ ಗೊತ್ತು. ಆ ಬಗ್ಗೆ ನಾನು ಇವತ್ತು ಮಾತನಾಡಲ್ಲ. ಸರಿಯಾದ ದಾರಿಯಲ್ಲೇ ಅದು ಬರಲಿ. ಒಂದು ವಿಚಾರ ತಿಳಿದುಕೊಳ್ಳಿ. ನಾನು ಯಾವುದಕ್ಕೂ ಹೆದರುವವನಲ್ಲ. ಅದಂತೂ ಸತ್ಯ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​

ಪ್ರಮುಖ ರಾಜಕೀಯ ಪಕ್ಷಗಳಿಂದ ಸುದೀಪ್​ ಅವರಿಗೆ ಮಣೆ ಹಾಕುವ ಪ್ರಯತ್ನ ಕೆಲವು ತಿಂಗಳಿಂದ ನಡೆಯುತ್ತಿತ್ತು. ಆ ವಿಚಾರದಲ್ಲಿ ಸುದೀಪ್​ ಈಗ ನಿರ್ಧಾರ ತೆಗೆದುಕೊಂಡಿದ್ದಾರೆ. ‘ನನ್ನ ಜೊತೆ ಪ್ರೀತಿಯಿಂದ ಇರುವವರ ಪರವಾಗಿ ನಿಂತುಕೊಳ್ಳುಬೇಕು ಅಂದರೆ ನಾನು ನಿಂತುಕೊಳ್ಳುತ್ತೇನೆ. ಯಾವುತ್ತೋ ಒಂದು ದಿನ ಕೆಲವು ವ್ಯಕ್ತಿಗಳು ನನ್ನ ಕೈ ಹಿಡಿದಿದ್ದಾರೆ. ಅದನ್ನು ನಾನು ಮರೆಯಬಾರದು’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Wed, 5 April 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!