Sudeep: ‘ಬೆದರಿಕೆ ಪತ್ರ ಬರೆದಿದ್ದು ಚಿತ್ರರಂಗದವರು’: ಶಾಕಿಂಗ್​ ವಿಚಾರ ಬಯಲು ಮಾಡಿದ ಕಿಚ್ಚ ಸುದೀಪ್​

Kichcha Sudeep Threat Letter: ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದಾರೆ.

Sudeep: ‘ಬೆದರಿಕೆ ಪತ್ರ ಬರೆದಿದ್ದು ಚಿತ್ರರಂಗದವರು’: ಶಾಕಿಂಗ್​ ವಿಚಾರ ಬಯಲು ಮಾಡಿದ ಕಿಚ್ಚ ಸುದೀಪ್​
ಸುದೀಪ್
Follow us
|

Updated on:Apr 05, 2023 | 1:54 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಕಿಡಿಗೇಡಿಗಳು ಬೆದರಿಕೆ ಪತ್ರ ಕಳಿಸಿರುವ ಪ್ರಕರಣ ಸಂಚಲನ ಸೃಷ್ಟಿ ಮಾಡಿದೆ. ಸುದೀಪ್​ ಅವರು ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬೆದರಿಕೆ ಪತ್ರ (Threat Letter) ಬಂದಿರುವುದರಿಂದ ಇದು ರಾಜಕೀಯದವರ ಕೈವಾಡ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಲ್ಲ ಎಂದು ಸುದೀಪ್​ ಸ್ಪಷ್ಟನೆ ನೀಡಿದ್ದಾರೆ. ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಯಾರು ಅಂತ ಗೊತ್ತಿದ್ದರೂ ಕೂಡ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದಾರೆ.

‘ಯಾರು ಪತ್ರ ಬರೆದಿದ್ದಾರೆ ಎಂಬ ವಿಚಾರ ಹೊರಗಡೆ ಬರುತ್ತದೆ. ಅದನ್ನು ನಾನು ಸುಮ್ಮನೆ ಬಿಡುವುದಿಲ್ಲ. ಕೆಲವು ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಅದಕ್ಕೆ ಬದ್ಧವಾಗಿದ್ದೇನೆ. ಎಲ್ಲ ಪಕ್ಷದಲ್ಲೂ ನನಗೆ ಆತ್ಮೀಯರು ಇದ್ದಾರೆ. ನನ್ನ ಪರ ಇರುವವರಿಗಾಗಿ ನಾವು ಕೆಲವು ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಇದನ್ನೂ ಓದಿ
Image
‘ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, ಯಾರಿಗೂ ಟಿಕೆಟ್ ಕೇಳಿಲ್ಲ’; ಸುದೀಪ್ ಸ್ಪಷ್ಟನೆ
Image
Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​
Image
‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’; ಸುದೀಪ್ ಬಿಜೆಪಿ ಸೇರ್ತಾರೆ ಎನ್ನುವ ವಿಚಾರದಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ
Image
Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

‘ಇಂಥ ಕೆಲಸ ಮಾಡುವ ಬೇರೆಯವರಿಗೂ ಇದು ಒಂದು ಪಾಠ ಆಗಬೇಕಿದೆ. ವಿಳಾಸ ಗೊತ್ತಿದೆ ಎಂದಮಾತ್ರಕ್ಕೆ ಯಾರು ಬೇಕಾದರೂ ಒಂದು ಪೋಸ್ಟ್​ ಮಾಡುತ್ತಾರೆ. ಇದಕ್ಕೂ ರಾಜಕೀಯದಲ್ಲಿ ಇರುವವರಿಗೂ ಯಾವುದೇ ಸಂಬಂಧ ಇಲ್ಲ. ಚಿತ್ರರಂಗದಲ್ಲಿ ಇರುವವರೇ ಇದನ್ನು ಮಾಡಿದ್ದಾರೆ. ಅವರು ಯಾರು ಎಂಬುದು ಕೂಡ ನನಗೆ ಗೊತ್ತು. ಆ ಬಗ್ಗೆ ನಾನು ಇವತ್ತು ಮಾತನಾಡಲ್ಲ. ಸರಿಯಾದ ದಾರಿಯಲ್ಲೇ ಅದು ಬರಲಿ. ಒಂದು ವಿಚಾರ ತಿಳಿದುಕೊಳ್ಳಿ. ನಾನು ಯಾವುದಕ್ಕೂ ಹೆದರುವವನಲ್ಲ. ಅದಂತೂ ಸತ್ಯ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​

ಪ್ರಮುಖ ರಾಜಕೀಯ ಪಕ್ಷಗಳಿಂದ ಸುದೀಪ್​ ಅವರಿಗೆ ಮಣೆ ಹಾಕುವ ಪ್ರಯತ್ನ ಕೆಲವು ತಿಂಗಳಿಂದ ನಡೆಯುತ್ತಿತ್ತು. ಆ ವಿಚಾರದಲ್ಲಿ ಸುದೀಪ್​ ಈಗ ನಿರ್ಧಾರ ತೆಗೆದುಕೊಂಡಿದ್ದಾರೆ. ‘ನನ್ನ ಜೊತೆ ಪ್ರೀತಿಯಿಂದ ಇರುವವರ ಪರವಾಗಿ ನಿಂತುಕೊಳ್ಳುಬೇಕು ಅಂದರೆ ನಾನು ನಿಂತುಕೊಳ್ಳುತ್ತೇನೆ. ಯಾವುತ್ತೋ ಒಂದು ದಿನ ಕೆಲವು ವ್ಯಕ್ತಿಗಳು ನನ್ನ ಕೈ ಹಿಡಿದಿದ್ದಾರೆ. ಅದನ್ನು ನಾನು ಮರೆಯಬಾರದು’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Wed, 5 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ