AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಕ್ರವರ್ತಿ’ ಬದಲು ‘ಚತ್ರವರ್ತಿ’ ಎಂದು ತಪ್ಪು ಬರೆದಿದ್ಯಾರು? ರಿವೀಲ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಆದರೆ, ಚಿತ್ರದ ಟೈಟಲ್​ಕಾರ್ಡ್​ನಲ್ಲಿ ಚಕ್ರವರ್ತಿಯ ಬದಲು ಚತ್ರವರ್ತಿ ಎಂದು ತಪ್ಪಾಗಿ ಬರೆಯಲಾಗಿತ್ತು. ಈ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದು, ತಪ್ಪು ಸಣ್ಣದು ಎಂದೂ, ಚಿತ್ರದ ಯಶಸ್ಸೇ ಮುಖ್ಯ ಎಂದೂ ಹೇಳಿದ್ದಾರೆ. ನಿರ್ದೇಶಕರು ಕನ್ನಡದವರಲ್ಲದ ಕಾರಣ ಅವರಿಗೆ ಗೊತ್ತಾಗಿಲ್ಲ ಎಂದಿದ್ದಾರೆ.

‘ಚಕ್ರವರ್ತಿ’ ಬದಲು ‘ಚತ್ರವರ್ತಿ’ ಎಂದು ತಪ್ಪು ಬರೆದಿದ್ಯಾರು? ರಿವೀಲ್ ಮಾಡಿದ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 31, 2024 | 7:34 AM

Share

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾದ ಗಳಿಕೆ 30 ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ. ಈ ಸಿನಿಮಾ ರಿಲೀಸ್ ಆದ ಸಂದರ್ಭದಲ್ಲಿ ಚಿತ್ರತಂಡ ಮಾಡಿದ ಒಂದು ದೊಡ್ಡ ಎಡವಟ್ಟು ಕಣ್ಣಿಗೆ ಕಾಣಿಸಿತ್ತು. ‘ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್’ ಎಂದು ಬರೆಯುವಾಗ ತಪ್ಪು ನಡೆದಿತ್ತು. ಚಕ್ರವರ್ತಿ ಬದಲು ಚತ್ರವರ್ತಿ ಎಂದು ಬರೆಯಲಾಗಿತ್ತು. ಈ ಬಗ್ಗೆ ಸುದೀಪ್ ಮೌನ ಮುರಿದಿದ್ದಾರೆ.

‘ಮ್ಯಾಕ್ಸ್’ ಸಿನಿಮಾದ ಥ್ಯಾಂಕ್ಸ್ ಮೀಟ್​ನಲ್ಲಿ ಸಿನಿಮಾದ ನಿರ್ದೇಶಕ ವಿಜಯ್ ಕಾರ್ತಿಕೇಯನ್ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಅವರು ‘ಕ್ಷಮಿಸಿ.. ಕ್ಷಮಿಸಿ..’ ಎಂದು ಕೇಳಿಕೊಂಡರು. ಆಗ ಸುದೀಪ್ ಅವರು ಮೈಕ್ ತೆಗೆದುಕೊಂಡು ಮಾತನಾಡಿದರು. ‘ತುಂಬಾ ಕೊರತೆ ಇರುವ ನನ್ನನ್ನು ನನ್ನ ತಾಯಿಯೇ ಕ್ಷಮಿಸಿ ಬೆಳೆಸಿದ್ದಾರೆ. ಕ್ಷಮೆ ಅನ್ನೋದು ತಾಯಿಯ ಗುಣ. ಟೈಟಲ್ ಕಾರ್ಡ್​ನಲ್ಲಿರೋ ತಪ್ಪನ್ನು ಮೊದಲು ನೋಡಿದಿರಿ. ಆ ಬಳಿಕ ಅವರು ನನ್ನ ಜೊತೆ ಕೊಟ್ಟ ಸಿನಿಮಾನ ನೋಡಿದಿರಿ. ಸಿನಿಮಾದ ಎದುರು ಈ ತಪ್ಪು ಸಣ್ಣದು’ ಎಂದರು ಸುದೀಪ್. ‘ಹೆಸರಲ್ಲೇನಿದೆ? ನನಗೆ ಹುಚ್ಚ ಎಂದೂ ಕರೆಯುತ್ತಾರೆ. ನಿರ್ದೇಶಕರು ಕನ್ನಡದವರಲ್ಲ, ಅವರಿಗೆ ಗೊತ್ತಾಗಿಲ್ಲ. ಅವರಿಗೆ ಕನ್ನಡ ಓದೋಕೆ ಬರಲ್ಲ. ಟೈಪ್ ಮಾಡಿ ಕಳುಹಿಸಿದವರ ತಪ್ಪು. ಇದು ಅಪ್ಪಟ ಕನ್ನಡದವರೇ ಮಾಡಿದ ತಪ್ಪು’ ಎಂದರು ಸುದೀಪ್.

ಇದನ್ನೂ ಓದಿ: ‘ಮ್ಯಾಕ್ಸ್’ ಕಲೆಕ್ಷನ್ ಎಷ್ಟು? ನಿರ್ಮಾಪಕನಾಗಿ ಕಿಚ್ಚ ಸುದೀಪ್ ಹೇಳಿದ್ದೇನು?

‘ಸಿನಿಮಾ ರಿಲೀಸ್​ಗೆ ನಾಲ್ಕೈದು ದಿನ ಇದ್ದಾಗ ಟ್ರೇಲರ್ ಬಂತು. ಕೊನೆಯ ಹಂತದಲ್ಲಿ ನಾವು ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದೆವು. ಸಿನಿಮಾ ಟೈಟಲ್ ಕಾರ್ಡ್ ಬಗ್ಗೆ ಗಮನ ಹರಿಸೋಕೆ ಆಗಲೇ ಇಲ್ಲ. ಸಿನಿಮಾ ರಿಲೀಸ್ ಆದ ಬಳಿಕ ನನಗೆ ಸ್ಕ್ರೀನ್​ಶಾಟ್​ಗಳು ಬಂತು. ನನಗೆ ಆ ಬಗ್ಗೆ ಬೇಸರ ಆಗಿಲ್ಲ. ನಾನು ಅದನ್ನು ಕೇರ್ ಮಾಡೇ ಇಲ್ಲ. ಸಿನಿಮಾ ಸಕ್ಸಸ್​ ಮುಖ್ಯ. ಹೆಸರಲ್ಲೇನಿದೆ ಬದನೆಕಾಯಿ’ ಎಂದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Tue, 31 December 24

ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು