AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಸಮೀಪ ಬೇಡ’; ಬರ್ತ್​ಡೇ ಆಚರಣೆಯ ಸ್ಥಳದ, ಸಮಯದ ಬಗ್ಗೆ ಮಾಹಿತಿ ಕೊಟ್ಟ ಸುದೀಪ್

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್​ಗೆ ಮೂಡಿತ್ತು. ಅವರು ಬರ್ತ್​ಡೇ ಬಗ್ಗೆ, ಸಿನಿಮಾ ಬಗ್ಗೆ ಮಾಹಿತಿ ನೀಡಿದೆ.

‘ಮನೆ ಸಮೀಪ ಬೇಡ’; ಬರ್ತ್​ಡೇ ಆಚರಣೆಯ ಸ್ಥಳದ, ಸಮಯದ ಬಗ್ಗೆ ಮಾಹಿತಿ ಕೊಟ್ಟ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 31, 2024 | 11:26 AM

Share

ಕಿಚ್ಚ ಸುದೀಪ್ ಅವರಿಗೆ ಸೆಪ್ಟೆಂಬರ್ 2 ಜನ್ಮದಿನ. ಅವರ ಬರ್ತ್​ಡೇ ಆಚರಣೆಗೆ ಫ್ಯಾನ್ಸ್ ಕಾದಿದ್ದಾರೆ. ಈ ಬಾರಿ ಅವರು ಮನೆಯ ಸಮೀಪ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಜನ ಬರುವುದರಿಂದ ತೊಂದರೆ ಆಗುತ್ತದೆ ಎಂದು ಅಕ್ಕ-ಪಕ್ಕದ ಮನೆಯವರು ದೂರಿದ್ದರು. ಈ ಕಾರಣಕ್ಕೆ ಬೇರೆ ಕಡೆ ಬರ್ತ್​ಡೇ ಆಚರಣೆ ಮಾಡಲು ಸುದೀಪ್ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಷ್ಠಿ ಮಾಹಿತಿ ನೀಡಿದ್ದಾರೆ.

‘ಕಳೆದ ತಿಂಗಳು ಬರ್ತ್​ಡೇ ಸಂದರ್ಭದಲ್ಲಿ ಸಾಕಷ್ಟು ಗೊಂದಲ ಆಯ್ತು. ಅಕ್ಕ-ಪಕ್ಕದ ಮನೆಯವರು ರಿಕ್ವೆಸ್ಟ್ ಮಾಡಿದ್ದರು. ಮನೆಯ ಬಳಿ ಆಚರಣೆ ಬೇಡ. ಜಯನಗರದಲ್ಲಿರುವ ಟೆಲಿಫೋನ್​ ಎಕ್ಸ್​ಚೇಂಜ್ ಎದುರು MES ಗ್ರೌಂಡ್ ಇದೆ. ಬೆಳಿಗ್ಗೆ 10 ಗಂಟೆಯಿಂದ 12ವರೆಗೆ ಇರುತ್ತೇನೆ. ಬರುವ ಸ್ನೇಹಿತರು ಅಲ್ಲಿ ಭೇಟಿ ಮಾಡುತ್ತೇನೆ. ಇದಾದಮೇಲೂ ಮನೆಯವರ ಬಳಿ ಬರುತ್ತಾರೆ. ಆದರೆ, ಅಲ್ಲಿ ಒಪ್ಪಿಗೆ ಇಲ್ಲ. ಎಂಇಎಸ್ ಗ್ರೌಂಡ್​ನಲ್ಲೂ ಪ್ರೋಟೋಕಾಲ್​ ಇದೆ’ ಎಂದಿದ್ದಾರೆ ಸುದೀಪ್.

‘ಕಳೆದ ಬಾರಿ ಬ್ಯಾರಿಕೇಡ್ ಒಡೆದು ಫ್ಯಾನ್ಸ್ ಬಂದಿದ್ದರು. ಅನೇಕರಿಗೆ ಭೇಟಿ ಸಾಧ್ಯವಾಗಿರಲಿಲ್ಲ. ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಾರಿ ಶಾಸಕ ಸಿಕೆ ರಾಮಮೂರ್ತಿ ಅವರು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ’ ಎಂದು ಕೇಳಿದ್ದಾರೆ ಸುದೀಪ್. ‘ಕೇಕ್ ತರಬೇಡಿ. ಕಟ್ ಮಾಡಿದಮೇಲೆ ಅದರಷ್ಟು ಅನಾಥ ಮತ್ತೊಬ್ಬರು ಇಲ್ಲ. ಆತರಹ ಸಂಭ್ರಮ ಬೇಡ. ಆ ಹಣದಲ್ಲಿ ಯಾರಿಗಾದರೂ ಊಟ ಹಾಕಿ’ ಎಂದು ಕೋರಿದ್ದಾರೆ ಅವರು.

ಇದನ್ನೂ ಓದಿ: ಕಿಚ್ಚ ಸುದೀಪ್ ಬರ್ತ್​​ಡೇ ಅನೂಪ್ ಭಂಡಾರಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್

‘ನಿರ್ಮಾಪಕರು, ನಿರ್ದೇಶಕರು ಇದ್ದಾರೆ. ಅವರು ನಿರ್ಧಾರ ಮಾಡುತ್ತಾರೆ. ಇಷ್ಟು ವರ್ಷ ಒಂದೇ ಸಿನಿಮಾ ಮಾಡಿಕೊಂಡು ಬರ್ತಾ ಇದ್ದೆ. 2-3 ಸಿನಿಮಾ ಒಟ್ಟಿಗೆ ಮಾಡ್ತೀನಿ. ನನಗೂ ಬೇಗ ಬರಬೇಕು ಎಂದಿದೆ. ಶೀಘ್ರವೇ ರಿಲೀಸ್ ಮಾಡುತ್ತೇವೆ. ಸಿನಿಮಾ ಕೆಲಸ ಕೊನೆಯ ಹಂತದಲ್ಲಿದೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ