AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಸಮೀಪ ಬೇಡ’; ಬರ್ತ್​ಡೇ ಆಚರಣೆಯ ಸ್ಥಳದ, ಸಮಯದ ಬಗ್ಗೆ ಮಾಹಿತಿ ಕೊಟ್ಟ ಸುದೀಪ್

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್​ಗೆ ಮೂಡಿತ್ತು. ಅವರು ಬರ್ತ್​ಡೇ ಬಗ್ಗೆ, ಸಿನಿಮಾ ಬಗ್ಗೆ ಮಾಹಿತಿ ನೀಡಿದೆ.

‘ಮನೆ ಸಮೀಪ ಬೇಡ’; ಬರ್ತ್​ಡೇ ಆಚರಣೆಯ ಸ್ಥಳದ, ಸಮಯದ ಬಗ್ಗೆ ಮಾಹಿತಿ ಕೊಟ್ಟ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 31, 2024 | 11:26 AM

Share

ಕಿಚ್ಚ ಸುದೀಪ್ ಅವರಿಗೆ ಸೆಪ್ಟೆಂಬರ್ 2 ಜನ್ಮದಿನ. ಅವರ ಬರ್ತ್​ಡೇ ಆಚರಣೆಗೆ ಫ್ಯಾನ್ಸ್ ಕಾದಿದ್ದಾರೆ. ಈ ಬಾರಿ ಅವರು ಮನೆಯ ಸಮೀಪ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಜನ ಬರುವುದರಿಂದ ತೊಂದರೆ ಆಗುತ್ತದೆ ಎಂದು ಅಕ್ಕ-ಪಕ್ಕದ ಮನೆಯವರು ದೂರಿದ್ದರು. ಈ ಕಾರಣಕ್ಕೆ ಬೇರೆ ಕಡೆ ಬರ್ತ್​ಡೇ ಆಚರಣೆ ಮಾಡಲು ಸುದೀಪ್ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಷ್ಠಿ ಮಾಹಿತಿ ನೀಡಿದ್ದಾರೆ.

‘ಕಳೆದ ತಿಂಗಳು ಬರ್ತ್​ಡೇ ಸಂದರ್ಭದಲ್ಲಿ ಸಾಕಷ್ಟು ಗೊಂದಲ ಆಯ್ತು. ಅಕ್ಕ-ಪಕ್ಕದ ಮನೆಯವರು ರಿಕ್ವೆಸ್ಟ್ ಮಾಡಿದ್ದರು. ಮನೆಯ ಬಳಿ ಆಚರಣೆ ಬೇಡ. ಜಯನಗರದಲ್ಲಿರುವ ಟೆಲಿಫೋನ್​ ಎಕ್ಸ್​ಚೇಂಜ್ ಎದುರು MES ಗ್ರೌಂಡ್ ಇದೆ. ಬೆಳಿಗ್ಗೆ 10 ಗಂಟೆಯಿಂದ 12ವರೆಗೆ ಇರುತ್ತೇನೆ. ಬರುವ ಸ್ನೇಹಿತರು ಅಲ್ಲಿ ಭೇಟಿ ಮಾಡುತ್ತೇನೆ. ಇದಾದಮೇಲೂ ಮನೆಯವರ ಬಳಿ ಬರುತ್ತಾರೆ. ಆದರೆ, ಅಲ್ಲಿ ಒಪ್ಪಿಗೆ ಇಲ್ಲ. ಎಂಇಎಸ್ ಗ್ರೌಂಡ್​ನಲ್ಲೂ ಪ್ರೋಟೋಕಾಲ್​ ಇದೆ’ ಎಂದಿದ್ದಾರೆ ಸುದೀಪ್.

‘ಕಳೆದ ಬಾರಿ ಬ್ಯಾರಿಕೇಡ್ ಒಡೆದು ಫ್ಯಾನ್ಸ್ ಬಂದಿದ್ದರು. ಅನೇಕರಿಗೆ ಭೇಟಿ ಸಾಧ್ಯವಾಗಿರಲಿಲ್ಲ. ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಾರಿ ಶಾಸಕ ಸಿಕೆ ರಾಮಮೂರ್ತಿ ಅವರು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ’ ಎಂದು ಕೇಳಿದ್ದಾರೆ ಸುದೀಪ್. ‘ಕೇಕ್ ತರಬೇಡಿ. ಕಟ್ ಮಾಡಿದಮೇಲೆ ಅದರಷ್ಟು ಅನಾಥ ಮತ್ತೊಬ್ಬರು ಇಲ್ಲ. ಆತರಹ ಸಂಭ್ರಮ ಬೇಡ. ಆ ಹಣದಲ್ಲಿ ಯಾರಿಗಾದರೂ ಊಟ ಹಾಕಿ’ ಎಂದು ಕೋರಿದ್ದಾರೆ ಅವರು.

ಇದನ್ನೂ ಓದಿ: ಕಿಚ್ಚ ಸುದೀಪ್ ಬರ್ತ್​​ಡೇ ಅನೂಪ್ ಭಂಡಾರಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್

‘ನಿರ್ಮಾಪಕರು, ನಿರ್ದೇಶಕರು ಇದ್ದಾರೆ. ಅವರು ನಿರ್ಧಾರ ಮಾಡುತ್ತಾರೆ. ಇಷ್ಟು ವರ್ಷ ಒಂದೇ ಸಿನಿಮಾ ಮಾಡಿಕೊಂಡು ಬರ್ತಾ ಇದ್ದೆ. 2-3 ಸಿನಿಮಾ ಒಟ್ಟಿಗೆ ಮಾಡ್ತೀನಿ. ನನಗೂ ಬೇಗ ಬರಬೇಕು ಎಂದಿದೆ. ಶೀಘ್ರವೇ ರಿಲೀಸ್ ಮಾಡುತ್ತೇವೆ. ಸಿನಿಮಾ ಕೆಲಸ ಕೊನೆಯ ಹಂತದಲ್ಲಿದೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು