AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚನ ಡೆಡಿಕೇಶನ್, ‘ಬಿಲ್ಲಾ ರಂಗ ಭಾಷಾ‘ಗಾಗಿ ಬೆವರು ಸುರಿಸುತ್ತಿರುವ ಸುದೀಪ್

ಕಿಚ್ಚ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಮುಗಿಸಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ಹೊಸ ಸಿನಿಮಾಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಸ್ಟಾರ್ ನಟರಾಗಿದ್ದರೂ ಸಹ ಹೊಸಬರಂತೆ ಪ್ರತಿನಿತ್ಯ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ. ಸುದೀಪ್​ರ ಡೆಡಿಕೇಶನ್​ಗೆ ಜನ ಭೇಷ್ ಎನ್ನುತ್ತಿದ್ದಾರೆ.

ಕಿಚ್ಚನ ಡೆಡಿಕೇಶನ್, ‘ಬಿಲ್ಲಾ ರಂಗ ಭಾಷಾ‘ಗಾಗಿ ಬೆವರು ಸುರಿಸುತ್ತಿರುವ ಸುದೀಪ್
ಮಂಜುನಾಥ ಸಿ.
|

Updated on: Jul 06, 2024 | 2:55 PM

Share

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಸ್ಟಾರ್ ನಟ ಸುದೀಪ್. ಕೇವಲ ಮಾಸ್ ಸಿನಿಮಾಗಳ ಹಿಂದೆ ಬೀಳದೆ ಅಭಿನಯಕ್ಕೆ ಒತ್ತು ನೀಡುವ ಪಾತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಟಾರ್ ನಟರು ಒಂದು ಹಂತ ದಾಟಿದ ಬಳಿಕ ಕೇವಲ ತಮ್ಮ ಮ್ಯಾನರಿಸಂ, ಡೈಲಾಗ್, ಫೈಟ್​ಗಳ ಮೂಲಕವೇ ಸಿನಿಮಾ ಹಿಟ್ ಮಾಡಿಕೊಳ್ಳುತ್ತೇವೆ ಎಂಬ ಹಮ್ಮಿನಲ್ಲಿರುತ್ತಾರೆ. ಕೆಲವು ಸ್ಟಾರ್ ನಟರು ಇಂದಿಗೂ ಇದನ್ನೇ ಪಾಲಿಸಿಕೊಂಡು ಬರುತ್ತಿದ್ದಾರೆ. ಆದರೆ ಸುದೀಪ್ ಸ್ಟಾರ್ ನಟರಾಗಿದ್ದರೂ, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಿದ್ದರೂ ಸಹ ಈಗಲೂ ಸಿನಿಮಾಕ್ಕಾಗಿ ಪೂರ್ಣ ಪರಿಶ್ರಮ ಹಾಕುತ್ತಾರೆ. ಪಾತ್ರಕ್ಕಾಗಿ ಕಠಿಣ ತರಬೇತಿ ತೆಗೆದುಕೊಂಡು ತಯಾರಾಗುತ್ತಿದ್ದಾರೆ.

‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ಕಿಚ್ಚ ಸುದೀಪ್ ಇದೀಗ ತಮ್ಮ ಮುಂದಿನ ಸಿನಿಮಾ ‘ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ದೇಹಾಕಾರ ಹಾಗೂ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ.

ವರ್ಕೌಟ್ ಸುದೀಪ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸುದೀಪ್ ತಮ್ಮ ಉಬ್ಬಿದ ತೋಳುಗಳನ್ನು ಚಿತ್ರದಲ್ಲಿ ತೋರಿಸಿದ್ದಾರೆ. ಸುದೀಪ್ ಉದ್ದನೆಯ ಆದರೆ ಹೆಚ್ಚು ದಪ್ಪ ಅಲ್ಲದ ದೇಹ ಹೊಂದಿದವರು. ಇತರೆ ಕೆಲವು ನಟರಿಗೆ ಹೋಲಿಸಿದರೆ ದೇಹವನ್ನು ಹುರಿಗೊಳಿಸುವುದು ಸುದೀಪ್​ಗೆ ತುಸು ಕಷ್ಟ ಹಾಗಿದ್ದರೂ ಸಹ ಸುದೀಪ್ ಅದನ್ನೇ ಸವಾಲಾಗಿ ಸ್ವೀಕರಿಸಿ ದೇಹವನ್ನು ಹುರಿಗೊಳಿಸಿಕೊಳ್ಳುತ್ತಿದ್ದಾರೆ. ಪೈಲ್ವಾನ್ ರೀತಿಯಲ್ಲಿ ತಯಾರಾಗುತ್ತಿದ್ದಾರೆ.

ಇದನ್ನೂ ಓದಿ: ಕಿಚ್ಚನಿಗೆ ಇದು ವಿಶೇಷ ದಿನ; ನೆನಪಿಸಿಕೊಂಡ ಸುದೀಪ್

ತಮ್ಮ ವರ್ಕೌಟ್ ಚಿತ್ರವನ್ನು ಹಂಚಿಕೊಂಡಿರುವ ಸುದೀಪ್ ಹೇಳಿರುವಂತೆ, ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಇನ್ನೂ ಹೆಚ್ಚಿನ ಶ್ರಮವನ್ನು ಬೇಡುತ್ತಿದೆಯಂತೆ. ಅಲ್ಲಿಗೆ ಕೇವಲ ತೋಳು ಮಾತ್ರವಲ್ಲ ಬಹುಷಃ ಸಿಕ್ಸ್ ಪ್ಯಾಕ್ ಮಾಡಿದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ಸುದೀಪ್ ‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣವನ್ನು ಬಹುತೇಕ ಅಂತ್ಯಗೊಳಿಸಿದ್ದು, ಕೆಲವೇ ದಿನಗಳಲ್ಲಿ ಸಿನಿಮಾದ ಬಗ್ಗೆ ಅಪ್​ಡೇಟ್ ಒಂದು ಹೊರಬೀಳಲಿದೆ. ‘ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ