AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ಜಾನಿ ಮಾಸ್ಟರ್​ಗೆ ಕನ್ನಡ ಚಿತ್ರರಂಗದ ಜತೆ ಒಳ್ಳೆಯ ನಂಟಿದೆ. ಪುನೀತ್​ ನಟನೆಯ ‘ರಾಜಕುಮಾರ’, ‘ನಟಸಾರ್ವಭೌಮ’, ‘ಯುವರತ್ನ’ ಸಿನಿಮಾದ ಕೆಲ ಹಾಡುಗಳಿಗೆ ಜಾನಿ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಟಾಲಿವುಡ್​ನ ಅನೇಕ ಹಿಟ್​ ಹಾಡುಗಳಿಗೆ ಇವರದ್ದೇ ನೃತ್ಯ ನಿರ್ದೇಶನವಿದೆ. ‘

Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​
ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 25, 2022 | 5:34 PM

Share

‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ಕಿಚ್ಚ ಸುದೀಪ್ (Kichcha Sudeep)​ ಅನೇಕರ ಜತೆ ಉತ್ತಮ ಗೆಳೆತನ ಹೊಂದಿದ್ದಾರೆ. ಅವರು ಒಮ್ಮೆ ಫ್ರೆಂಡ್​ಶಿಪ್​ ಮಾಡಿದರೆ ಅವರ ಜತೆ ತುಂಬಾನೇ ಆಪ್ತವಾಗಿ ನಡೆದುಕೊಳ್ಳುತ್ತಾರೆ. ಅವರಿಗೋಸ್ಕರ ಏನೂ ಮಾಡೋಕು ರೆಡಿ ಇರುತ್ತಾರೆ. ಈ ಮೊದಲು ಕೂಡ ಇದು ಸಾಬೀತಾಗಿದೆ. ಈಗ ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ‘ವಿಕ್ರಾಂತ್​ ರೋಣ’ ಚಿತ್ರದ (Vikrant Rona Movie) ನೃತ್ಯ ನಿರ್ದೇಶಕ ಜಾನಿ ಮಾಸ್ಟರ್​ಗೆ ಸುದೀಪ್​ ಮಹಿಂದ್ರಾ ಥಾರ್ (Mahindra Thar) ಗಿಫ್ಟ್​ ನೀಡಿದ್ದಾರೆ. ಈ ಫೋಟೋ ಹಂಚಿಕೊಂಡಿರುವ ಜಾನಿ ಅವರು ಕಿಚ್ಚನಿಗೆ ಧನ್ಯವಾದ ಹೇಳಿದ್ದಾರೆ. ಈ ಪೋಸ್ಟ್​ ನೋಡಿದ ಅಭಿಮಾನಿಗಳು ಕಿಚ್ಚ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

ಜಾನಿ ಮಾಸ್ಟರ್​ಗೆ ಕನ್ನಡ ಚಿತ್ರರಂಗದ ಜತೆ ಒಳ್ಳೆಯ ನಂಟಿದೆ. ಪುನೀತ್​ ನಟನೆಯ ‘ರಾಜಕುಮಾರ’, ‘ನಟಸಾರ್ವಭೌಮ’, ‘ಯುವರತ್ನ’ ಸಿನಿಮಾದ ಕೆಲ ಹಾಡುಗಳಿಗೆ ಜಾನಿ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಟಾಲಿವುಡ್​ನ ಅನೇಕ ಹಿಟ್​ ಹಾಡುಗಳಿಗೆ ಇವರದ್ದೇ ನೃತ್ಯ ನಿರ್ದೇಶನವಿದೆ. ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿನ ಹಾಡಿಗೆ ಜಾನಿ ಅವರು ಡ್ಯಾನ್ಸ್​ ಕೋರಿಯೋಗ್ರಫಿ ಮಾಡಿದ್ದಾರೆ. ವಿಶೇಷ ಎಂದರೆ, ಸುದೀಪ್​ ಅವರು ಜಾನಿಗೆ ಪ್ರೀತಿಯಿಂದ ಕಾರು ಗಿಫ್ಟ್ ಮಾಡಿದ್ದಾರೆ.

‘ಕಿಚ್ಚ ಸುದೀಪ್ ನಿಮ್ಮ ಉಡುಗೊರೆಗಾಗಿ ಧನ್ಯವಾದಗಳು. ನೀವು ನನ್ನನ್ನು ನೋಡಿಕೊಳ್ಳುವ ರೀತಿ ನಿಜಕ್ಕೂ ಖುಷಿ ನೀಡಿದೆ. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ. ನನ್ನ ಜೀವನದಲ್ಲಿ ನೀವು ಇರುವುದಕ್ಕೆ ಖುಷಿ ಇದೆ’ ಎಂದು ಬರೆದುಕೊಂಡಿದ್ದಾರೆ ಜಾನಿ. ಮಹಿಂದ್ರಾ ಥಾರ್​​ಅನ್ನು ಸುದೀಪ್​ ಗಿಫ್ಟ್​ ಆಗಿ ನೀಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ.  ಈ ಮೊದಲಿನ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಫೆ.24ರಂದು ‘ವಿಕ್ರಾಂತ್​ ರೋಣ’ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಸಿನಿಮಾ ರಿಲೀಸ್ ಆಗಿಲ್ಲ. ಶೀಘ್ರವೇ ರಿಲೀಸ್ ದಿನಾಂಕ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ಗಳು ಗಮನ ಸೆಳೆದಿವೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​

ಪುನೀತ್​​ ಬಯೋಗ್ರಫಿ ‘ನೀನೆ ರಾಜಕುಮಾರ’ ರಿಲೀಸ್ ಮಾಡಿದ ಕಿಚ್ಚ ಸುದೀಪ್​ ಹೇಳಿದ್ದೇನು?

Published On - 5:13 pm, Fri, 25 March 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ