Kichcha Sudeep: ಕಿಚ್ಚ ಸುದೀಪ್​ ನಟನೆಯ 3 ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ಇಲ್ಲಿದೆ ಸಿಹಿ ಸುದ್ದಿ..

Kichcha 46 | Sudeep New Film: ಇಷ್ಟು ದಿನ ಕಿಚ್ಚ ಸುದೀಪ್​ ಅವರು ಕ್ರಿಕೆಟ್​ನಲ್ಲಿ ಬ್ಯುಸಿ ಆಗಿದ್ದರು. ಅವರು ನಟಿಸಲಿರುವ ಮೂರು ಸಿನಿಮಾಗಳಿಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ.

Kichcha Sudeep: ಕಿಚ್ಚ ಸುದೀಪ್​ ನಟನೆಯ 3 ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ಇಲ್ಲಿದೆ ಸಿಹಿ ಸುದ್ದಿ..
ಕಿಚ್ಚ ಸುದೀಪ್
Follow us
|

Updated on:Apr 02, 2023 | 12:26 PM

‘ಹೊಸ ಸಿನಿಮಾ ಯಾವಾಗ ಅನೌನ್ಸ್​ ಮಾಡ್ತೀರಿ ಸರ್’?-  ​‘ವಿಕ್ರಾಂತ್​ ರೋಣ’ ಬಿಡುಗಡೆ ಆದಾಗಿನಿಂದ ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಈ ಪ್ರಶ್ನೆ ಸದಾ ಎದುರಾಗುತ್ತಿತ್ತು. ಸುದೀಪ್​ ನಟನೆಯ 46ನೇ (Kichcha 46) ಚಿತ್ರದ ಕುರಿತು ಆ ಪರಿ ಕುತೂಹಲ ಸೃಷ್ಟಿ ಆಗಿದೆ. ಆದರೆ ಆ ಬಗ್ಗೆ ಅಪ್​ಡೇಟ್​ ನೀಡುವಲ್ಲಿ ಸುದೀಪ್​ ಅವರು ಅವಸರ ತೋರಿಸಿಲ್ಲ. ​‘ವಿಕ್ರಾಂತ್​ ರೋಣ’ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್​ ತೆಗೆದುಕೊಂಡರು. ಕ್ರಿಕೆಟ್​ ಆಡುತ್ತಾ ಕಾಲ ಕಳೆದರು. ಈಗ ಅಭಿಮಾನಿಗಳ ಪ್ರಶ್ನೆಗೆ ಸುದೀಪ್​ ಉತ್ತರ ನೀಡಿದ್ದಾರೆ. ಮುಂದಿನ ಮೂರು ಸಿನಿಮಾಗಳ (Sudeep Next Movie) ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳ ಕೌತುಕ ಇನ್ನಷ್ಟು ಹೆಚ್ಚಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ಗಾಗಿ ಕಿಚ್ಚ ಸುದೀಪ್​ ಒಂದು ಪತ್ರ ಬರೆದಿದ್ದಾರೆ.

ಸುದೀಪ್​ ಬರೆದ ಪತ್ರದಲ್ಲಿ ಏನಿದೆ?

‘ನೀವೆಲ್ಲರೂ ನನ್ನ ಮುಂದಿನ ಸಿನಿಮಾವನ್ನು ‘ಕಿಚ್ಚ 46’ ಎಂದು ಕರೆಯುತ್ತಿದ್ದೀರಿ. ಅದರ ಬಗ್ಗೆ ನೀವು ಟ್ವೀಟ್ಸ್​ ಮತ್ತು ಮೀಮ್ಸ್​ ಮಾಡುತ್ತಿರುವುದು ನನಗೆ ಸ್ಪೆಷಲ್​ ಎನಿಸುತ್ತದೆ. ಅದಕ್ಕಾಗಿ ಧನ್ಯವಾದಗಳು’ ಎಂದು ಸುದೀಪ್​ ಅವರು ಪತ್ರ ಆರಂಭಿಸಿದ್ದಾರೆ. ಇಷ್ಟು ದಿನ ತಾವು ಬ್ರೇಕ್​ ತೆಗೆದುಕೊಂಡಿದ್ದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದ್ದಾರೆ.

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ

ಇದೇ ನನ್ನ ಮೊದಲ ಬ್ರೇಕ್​:

‘ನಾನು ಬ್ರೇಕ್​ ತೆಗೆದುಕೊಂಡೆ. ಇದು ನನ್ನ ಮೊದಲ ಬ್ರೇಕ್​. ತುಂಬ ಶ್ರಮವಹಿಸಿ, ಬಹಳ ಸಮಯ ತೆಗೆದುಕೊಂಡು ವಿಕ್ರಾಂತ್​ ರೋಣ ಶೂಟಿಂಗ್​ ಮಾಡಿದ್ದರಿಂದ ಹಾಗೂ ಸತತವಾಗಿ ಬಿಗ್​ಬಾಸ್​ ಒಟಿಟಿ ಮತ್ತು ಟಿವಿ ಸೀಸನ್​ನಲ್ಲಿ ಪಾಲ್ಗೊಂಡಿದ್ದರಿಂದ ವಿಕ್ರಾಂತ್​ ರೋಣ ಸಿನಿಮಾ ಬಳಿಕ ಈ ಬ್ರೇಕ್​ನ ಅವಶ್ಯಕತೆ ಇತ್ತು. ನನ್ನನ್ನು ಹೆಚ್ಚು ಖುಷಿಯಾಗಿಸುವ ರೀತಿಯಲ್ಲಿ ಈ ದಿನಗಳನ್ನು ಕಳೆಯಬೇಕು ಎನಿಸಿತು. ಕ್ರಿಕೆಟ್​ನಿಂದ ನನಗೆ ರಿಲ್ಯಾಕ್ಸ್​ ಸಿಗುತ್ತದೆ. ಕೆಸಿಸಿಯಲ್ಲಿ ತೊಡಗಿಕೊಂಡು ಸಮಯ ಕಳೆದಿದ್ದು ತುಂಬ ಖುಷಿ ನೀಡಿತು’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಮೂರು ಹೊಸ ಸಿನಿಮಾಗಳ ಬಗ್ಗೆ ಅಪ್​ಡೇಟ್​:

‘ಬ್ರೇಕ್​ನಲ್ಲಿ ಹೊಸ ಸ್ಕ್ರಿಪ್ಟ್​ ಬಗ್ಗೆ ಚರ್ಚೆ ಮತ್ತು ಮೀಟಿಂಗ್​ಗಳು ಪ್ರತಿದಿನದ ಕೆಲಸ ಆಗಿತ್ತು. ಮೂರು ಸ್ಕ್ರಿಪ್ಟ್​ಗಳನ್ನು ಫೈನಲ್​ ಮಾಡಿದ್ದೇನೆ. ಅಂದರೆ, 3 ಸಿನಿಮಾಗಳನ್ನು ಆಯ್ಕೆ ಮಾಡಿದ್ದೇನೆ. ಇವುಗಳಿಗೆ ದೊಡ್ಡ ಮಟ್ಟದ ತಯಾರಿ ಬೇಕು. ಮೂರೂ ಚಿತ್ರಗಳಿಗೆ ಹೋಮ್​ವರ್ಕ್​ ನಡೆಯುತ್ತಿದೆ. ಆ ತಂಡದವರು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಅನೌನ್ಸ್​ ಮಾಡುತ್ತೇನೆ’ ಎಂದು ಸುದೀಪ್​ ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Sun, 2 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ