AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​ ನಟನೆಯ 3 ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ಇಲ್ಲಿದೆ ಸಿಹಿ ಸುದ್ದಿ..

Kichcha 46 | Sudeep New Film: ಇಷ್ಟು ದಿನ ಕಿಚ್ಚ ಸುದೀಪ್​ ಅವರು ಕ್ರಿಕೆಟ್​ನಲ್ಲಿ ಬ್ಯುಸಿ ಆಗಿದ್ದರು. ಅವರು ನಟಿಸಲಿರುವ ಮೂರು ಸಿನಿಮಾಗಳಿಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ.

Kichcha Sudeep: ಕಿಚ್ಚ ಸುದೀಪ್​ ನಟನೆಯ 3 ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ಇಲ್ಲಿದೆ ಸಿಹಿ ಸುದ್ದಿ..
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on:Apr 02, 2023 | 12:26 PM

Share

‘ಹೊಸ ಸಿನಿಮಾ ಯಾವಾಗ ಅನೌನ್ಸ್​ ಮಾಡ್ತೀರಿ ಸರ್’?-  ​‘ವಿಕ್ರಾಂತ್​ ರೋಣ’ ಬಿಡುಗಡೆ ಆದಾಗಿನಿಂದ ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಈ ಪ್ರಶ್ನೆ ಸದಾ ಎದುರಾಗುತ್ತಿತ್ತು. ಸುದೀಪ್​ ನಟನೆಯ 46ನೇ (Kichcha 46) ಚಿತ್ರದ ಕುರಿತು ಆ ಪರಿ ಕುತೂಹಲ ಸೃಷ್ಟಿ ಆಗಿದೆ. ಆದರೆ ಆ ಬಗ್ಗೆ ಅಪ್​ಡೇಟ್​ ನೀಡುವಲ್ಲಿ ಸುದೀಪ್​ ಅವರು ಅವಸರ ತೋರಿಸಿಲ್ಲ. ​‘ವಿಕ್ರಾಂತ್​ ರೋಣ’ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್​ ತೆಗೆದುಕೊಂಡರು. ಕ್ರಿಕೆಟ್​ ಆಡುತ್ತಾ ಕಾಲ ಕಳೆದರು. ಈಗ ಅಭಿಮಾನಿಗಳ ಪ್ರಶ್ನೆಗೆ ಸುದೀಪ್​ ಉತ್ತರ ನೀಡಿದ್ದಾರೆ. ಮುಂದಿನ ಮೂರು ಸಿನಿಮಾಗಳ (Sudeep Next Movie) ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳ ಕೌತುಕ ಇನ್ನಷ್ಟು ಹೆಚ್ಚಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ಗಾಗಿ ಕಿಚ್ಚ ಸುದೀಪ್​ ಒಂದು ಪತ್ರ ಬರೆದಿದ್ದಾರೆ.

ಸುದೀಪ್​ ಬರೆದ ಪತ್ರದಲ್ಲಿ ಏನಿದೆ?

‘ನೀವೆಲ್ಲರೂ ನನ್ನ ಮುಂದಿನ ಸಿನಿಮಾವನ್ನು ‘ಕಿಚ್ಚ 46’ ಎಂದು ಕರೆಯುತ್ತಿದ್ದೀರಿ. ಅದರ ಬಗ್ಗೆ ನೀವು ಟ್ವೀಟ್ಸ್​ ಮತ್ತು ಮೀಮ್ಸ್​ ಮಾಡುತ್ತಿರುವುದು ನನಗೆ ಸ್ಪೆಷಲ್​ ಎನಿಸುತ್ತದೆ. ಅದಕ್ಕಾಗಿ ಧನ್ಯವಾದಗಳು’ ಎಂದು ಸುದೀಪ್​ ಅವರು ಪತ್ರ ಆರಂಭಿಸಿದ್ದಾರೆ. ಇಷ್ಟು ದಿನ ತಾವು ಬ್ರೇಕ್​ ತೆಗೆದುಕೊಂಡಿದ್ದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದ್ದಾರೆ.

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ

ಇದೇ ನನ್ನ ಮೊದಲ ಬ್ರೇಕ್​:

‘ನಾನು ಬ್ರೇಕ್​ ತೆಗೆದುಕೊಂಡೆ. ಇದು ನನ್ನ ಮೊದಲ ಬ್ರೇಕ್​. ತುಂಬ ಶ್ರಮವಹಿಸಿ, ಬಹಳ ಸಮಯ ತೆಗೆದುಕೊಂಡು ವಿಕ್ರಾಂತ್​ ರೋಣ ಶೂಟಿಂಗ್​ ಮಾಡಿದ್ದರಿಂದ ಹಾಗೂ ಸತತವಾಗಿ ಬಿಗ್​ಬಾಸ್​ ಒಟಿಟಿ ಮತ್ತು ಟಿವಿ ಸೀಸನ್​ನಲ್ಲಿ ಪಾಲ್ಗೊಂಡಿದ್ದರಿಂದ ವಿಕ್ರಾಂತ್​ ರೋಣ ಸಿನಿಮಾ ಬಳಿಕ ಈ ಬ್ರೇಕ್​ನ ಅವಶ್ಯಕತೆ ಇತ್ತು. ನನ್ನನ್ನು ಹೆಚ್ಚು ಖುಷಿಯಾಗಿಸುವ ರೀತಿಯಲ್ಲಿ ಈ ದಿನಗಳನ್ನು ಕಳೆಯಬೇಕು ಎನಿಸಿತು. ಕ್ರಿಕೆಟ್​ನಿಂದ ನನಗೆ ರಿಲ್ಯಾಕ್ಸ್​ ಸಿಗುತ್ತದೆ. ಕೆಸಿಸಿಯಲ್ಲಿ ತೊಡಗಿಕೊಂಡು ಸಮಯ ಕಳೆದಿದ್ದು ತುಂಬ ಖುಷಿ ನೀಡಿತು’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಮೂರು ಹೊಸ ಸಿನಿಮಾಗಳ ಬಗ್ಗೆ ಅಪ್​ಡೇಟ್​:

‘ಬ್ರೇಕ್​ನಲ್ಲಿ ಹೊಸ ಸ್ಕ್ರಿಪ್ಟ್​ ಬಗ್ಗೆ ಚರ್ಚೆ ಮತ್ತು ಮೀಟಿಂಗ್​ಗಳು ಪ್ರತಿದಿನದ ಕೆಲಸ ಆಗಿತ್ತು. ಮೂರು ಸ್ಕ್ರಿಪ್ಟ್​ಗಳನ್ನು ಫೈನಲ್​ ಮಾಡಿದ್ದೇನೆ. ಅಂದರೆ, 3 ಸಿನಿಮಾಗಳನ್ನು ಆಯ್ಕೆ ಮಾಡಿದ್ದೇನೆ. ಇವುಗಳಿಗೆ ದೊಡ್ಡ ಮಟ್ಟದ ತಯಾರಿ ಬೇಕು. ಮೂರೂ ಚಿತ್ರಗಳಿಗೆ ಹೋಮ್​ವರ್ಕ್​ ನಡೆಯುತ್ತಿದೆ. ಆ ತಂಡದವರು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಅನೌನ್ಸ್​ ಮಾಡುತ್ತೇನೆ’ ಎಂದು ಸುದೀಪ್​ ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Sun, 2 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!