AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​

Vikrant Rona: ಸುದೀಪ್​ ಅವರ ಮಾತುಗಳಿಂದಾಗಿ ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​
ಅನೂಪ್​ ಭಂಡಾರಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 01, 2021 | 8:30 AM

Share

ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾದ ಕೆಲಸಗಳು ವಿಳಂಬ ಆಗಿವೆ. ಹಾಗಾದರೆ ವಿಕ್ರಾಂತ್​ ರೋಣ ಈಗ ಯಾವ ಹಂತದಲ್ಲಿದೆ? ಅದಕ್ಕೆ ಸ್ವತಃ ಸುದೀಪ್​ ಉತ್ತರ ನೀಡಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. 3ಡಿ ವರ್ಷನ್​ನಲ್ಲೂ ‘ವಿಕ್ರಾಂತ್​ ರೋಣ’ ಸಿದ್ಧವಾಗುತ್ತಿದೆ. ಅದರ ಕೆಲವು ದೃಶ್ಯಗಳನ್ನು ನೋಡಿ ಸುದೀಪ್​ ಖುಷಿಪಟ್ಟಿದ್ದಾರೆ.

ಬಹುತೇಕ ಶೂಟಿಂಗ್​ ಮುಗಿಸಿಕೊಂಡಿರುವ ವಿಕ್ರಾಂತ್​ ರೋಣ ತಂಡ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಲಾಕ್​ಡೌನ್​ ಸಡಿಲ ಆಗುತ್ತಿದ್ದಂತೆಯೇ ಸುದೀಪ್​ ಕೂಡ ಡಬ್ಬಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹಾಡುಗಳ ಚಿತ್ರೀಕರಣ ಮಾಡುವುದು ಬಾಕಿ ಇದೆ. ಈ ಬಗ್ಗೆ ಅವರು ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

‘ವಿಕ್ರಾಂತ್​ ರೋಣ ಚಿತ್ರಕ್ಕಾಗಿ ನಾನು ಧ್ವನಿ ನೀಡುವ ಕೆಲಸ ಪೂರ್ಣಗೊಳಿಸಿದ್ದೇನೆ. ಇದೊಂದು ಅದ್ಭುತ ಅನುಭವ. ಹೊಸ ಬಗೆಯಲ್ಲಿ ಪಾತ್ರವನ್ನು ಕಟ್ಟಿಕೊಡುತ್ತಿದ್ದೇವೆ. 3ಡಿ ವರ್ಷನ್​ನ ಕೆಲವು ಸ್ಯಾಂಪಲ್​ಗಳನ್ನು ನೋಡಿದೆ. ವಿಕ್ರಾಂತ್​ ರೋಣನ ಪ್ರಪಂಚಕ್ಕೆ ಜೀವ ಬರುವುದನ್ನು ನೋಡಿ ಥ್ರಿಲ್​ ಆಗುತ್ತದೆ. ಹಾಡುಗಳ ಶೂಟಿಂಗ್​ಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಕಿಚ್ಚ ಹೇಳಿದ್ದಾರೆ.

ಸುದೀಪ್​ ಅವರ ಈ ಮಾತುಗಳಿಂದಾಗಿ ಅಭಿಮಾನಿಗಳಿಗೆ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬರುತ್ತಿದೆ. ಸುದೀಪ್ ಜೊತೆ ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ನಟಿಸುತ್ತಿದ್ದಾರೆ. ಶಾಲಿನಿ ಮಂಜುನಾಥ್​ ಹಾಗೂ ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಮೊದಲು ಫ್ಯಾಂಟಮ್​ ಎಂದಿದ್ದ ಚಿತ್ರದ ಶೀರ್ಷಿಕೆಯನ್ನು ವಿಕ್ರಾಂತ್​ ರೋಣ ಎಂದು ಬದಲಿಸಲಾಯಿತು. ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ಫೆ.1ರಂದು ಟೈಟಲ್​ ಮತ್ತು ಟೀಸರ್ ಅನಾವರಣ ಮಾಡಲಾಗಿತ್ತು. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ, ವಿಲಿಯಮ್ ಡೇವಿಡ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ