AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​

Vikrant Rona: ಸುದೀಪ್​ ಅವರ ಮಾತುಗಳಿಂದಾಗಿ ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​
ಅನೂಪ್​ ಭಂಡಾರಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 01, 2021 | 8:30 AM

Share

ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾದ ಕೆಲಸಗಳು ವಿಳಂಬ ಆಗಿವೆ. ಹಾಗಾದರೆ ವಿಕ್ರಾಂತ್​ ರೋಣ ಈಗ ಯಾವ ಹಂತದಲ್ಲಿದೆ? ಅದಕ್ಕೆ ಸ್ವತಃ ಸುದೀಪ್​ ಉತ್ತರ ನೀಡಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. 3ಡಿ ವರ್ಷನ್​ನಲ್ಲೂ ‘ವಿಕ್ರಾಂತ್​ ರೋಣ’ ಸಿದ್ಧವಾಗುತ್ತಿದೆ. ಅದರ ಕೆಲವು ದೃಶ್ಯಗಳನ್ನು ನೋಡಿ ಸುದೀಪ್​ ಖುಷಿಪಟ್ಟಿದ್ದಾರೆ.

ಬಹುತೇಕ ಶೂಟಿಂಗ್​ ಮುಗಿಸಿಕೊಂಡಿರುವ ವಿಕ್ರಾಂತ್​ ರೋಣ ತಂಡ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಲಾಕ್​ಡೌನ್​ ಸಡಿಲ ಆಗುತ್ತಿದ್ದಂತೆಯೇ ಸುದೀಪ್​ ಕೂಡ ಡಬ್ಬಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹಾಡುಗಳ ಚಿತ್ರೀಕರಣ ಮಾಡುವುದು ಬಾಕಿ ಇದೆ. ಈ ಬಗ್ಗೆ ಅವರು ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

‘ವಿಕ್ರಾಂತ್​ ರೋಣ ಚಿತ್ರಕ್ಕಾಗಿ ನಾನು ಧ್ವನಿ ನೀಡುವ ಕೆಲಸ ಪೂರ್ಣಗೊಳಿಸಿದ್ದೇನೆ. ಇದೊಂದು ಅದ್ಭುತ ಅನುಭವ. ಹೊಸ ಬಗೆಯಲ್ಲಿ ಪಾತ್ರವನ್ನು ಕಟ್ಟಿಕೊಡುತ್ತಿದ್ದೇವೆ. 3ಡಿ ವರ್ಷನ್​ನ ಕೆಲವು ಸ್ಯಾಂಪಲ್​ಗಳನ್ನು ನೋಡಿದೆ. ವಿಕ್ರಾಂತ್​ ರೋಣನ ಪ್ರಪಂಚಕ್ಕೆ ಜೀವ ಬರುವುದನ್ನು ನೋಡಿ ಥ್ರಿಲ್​ ಆಗುತ್ತದೆ. ಹಾಡುಗಳ ಶೂಟಿಂಗ್​ಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಕಿಚ್ಚ ಹೇಳಿದ್ದಾರೆ.

ಸುದೀಪ್​ ಅವರ ಈ ಮಾತುಗಳಿಂದಾಗಿ ಅಭಿಮಾನಿಗಳಿಗೆ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬರುತ್ತಿದೆ. ಸುದೀಪ್ ಜೊತೆ ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ನಟಿಸುತ್ತಿದ್ದಾರೆ. ಶಾಲಿನಿ ಮಂಜುನಾಥ್​ ಹಾಗೂ ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಮೊದಲು ಫ್ಯಾಂಟಮ್​ ಎಂದಿದ್ದ ಚಿತ್ರದ ಶೀರ್ಷಿಕೆಯನ್ನು ವಿಕ್ರಾಂತ್​ ರೋಣ ಎಂದು ಬದಲಿಸಲಾಯಿತು. ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ಫೆ.1ರಂದು ಟೈಟಲ್​ ಮತ್ತು ಟೀಸರ್ ಅನಾವರಣ ಮಾಡಲಾಗಿತ್ತು. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ, ವಿಲಿಯಮ್ ಡೇವಿಡ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ