AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​

Vikrant Rona: ಸುದೀಪ್​ ಅವರ ಮಾತುಗಳಿಂದಾಗಿ ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​
ಅನೂಪ್​ ಭಂಡಾರಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 01, 2021 | 8:30 AM

Share

ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾದ ಕೆಲಸಗಳು ವಿಳಂಬ ಆಗಿವೆ. ಹಾಗಾದರೆ ವಿಕ್ರಾಂತ್​ ರೋಣ ಈಗ ಯಾವ ಹಂತದಲ್ಲಿದೆ? ಅದಕ್ಕೆ ಸ್ವತಃ ಸುದೀಪ್​ ಉತ್ತರ ನೀಡಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. 3ಡಿ ವರ್ಷನ್​ನಲ್ಲೂ ‘ವಿಕ್ರಾಂತ್​ ರೋಣ’ ಸಿದ್ಧವಾಗುತ್ತಿದೆ. ಅದರ ಕೆಲವು ದೃಶ್ಯಗಳನ್ನು ನೋಡಿ ಸುದೀಪ್​ ಖುಷಿಪಟ್ಟಿದ್ದಾರೆ.

ಬಹುತೇಕ ಶೂಟಿಂಗ್​ ಮುಗಿಸಿಕೊಂಡಿರುವ ವಿಕ್ರಾಂತ್​ ರೋಣ ತಂಡ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಲಾಕ್​ಡೌನ್​ ಸಡಿಲ ಆಗುತ್ತಿದ್ದಂತೆಯೇ ಸುದೀಪ್​ ಕೂಡ ಡಬ್ಬಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹಾಡುಗಳ ಚಿತ್ರೀಕರಣ ಮಾಡುವುದು ಬಾಕಿ ಇದೆ. ಈ ಬಗ್ಗೆ ಅವರು ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

‘ವಿಕ್ರಾಂತ್​ ರೋಣ ಚಿತ್ರಕ್ಕಾಗಿ ನಾನು ಧ್ವನಿ ನೀಡುವ ಕೆಲಸ ಪೂರ್ಣಗೊಳಿಸಿದ್ದೇನೆ. ಇದೊಂದು ಅದ್ಭುತ ಅನುಭವ. ಹೊಸ ಬಗೆಯಲ್ಲಿ ಪಾತ್ರವನ್ನು ಕಟ್ಟಿಕೊಡುತ್ತಿದ್ದೇವೆ. 3ಡಿ ವರ್ಷನ್​ನ ಕೆಲವು ಸ್ಯಾಂಪಲ್​ಗಳನ್ನು ನೋಡಿದೆ. ವಿಕ್ರಾಂತ್​ ರೋಣನ ಪ್ರಪಂಚಕ್ಕೆ ಜೀವ ಬರುವುದನ್ನು ನೋಡಿ ಥ್ರಿಲ್​ ಆಗುತ್ತದೆ. ಹಾಡುಗಳ ಶೂಟಿಂಗ್​ಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಕಿಚ್ಚ ಹೇಳಿದ್ದಾರೆ.

ಸುದೀಪ್​ ಅವರ ಈ ಮಾತುಗಳಿಂದಾಗಿ ಅಭಿಮಾನಿಗಳಿಗೆ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬರುತ್ತಿದೆ. ಸುದೀಪ್ ಜೊತೆ ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ನಟಿಸುತ್ತಿದ್ದಾರೆ. ಶಾಲಿನಿ ಮಂಜುನಾಥ್​ ಹಾಗೂ ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಮೊದಲು ಫ್ಯಾಂಟಮ್​ ಎಂದಿದ್ದ ಚಿತ್ರದ ಶೀರ್ಷಿಕೆಯನ್ನು ವಿಕ್ರಾಂತ್​ ರೋಣ ಎಂದು ಬದಲಿಸಲಾಯಿತು. ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ಫೆ.1ರಂದು ಟೈಟಲ್​ ಮತ್ತು ಟೀಸರ್ ಅನಾವರಣ ಮಾಡಲಾಗಿತ್ತು. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ, ವಿಲಿಯಮ್ ಡೇವಿಡ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್​ಡಿಕೆ
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್​ಡಿಕೆ