AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​

Vikrant Rona: ಸುದೀಪ್​ ಅವರ ಮಾತುಗಳಿಂದಾಗಿ ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಯಾವ ಹಂತದಲ್ಲಿದೆ ‘ವಿಕ್ರಾಂತ್ ರೋಣ’? ಕಿಚ್ಚನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಇಲ್ಲಿದೆ ಅಪ್​ಡೇಟ್​
ಅನೂಪ್​ ಭಂಡಾರಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 01, 2021 | 8:30 AM

Share

ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾದ ಕೆಲಸಗಳು ವಿಳಂಬ ಆಗಿವೆ. ಹಾಗಾದರೆ ವಿಕ್ರಾಂತ್​ ರೋಣ ಈಗ ಯಾವ ಹಂತದಲ್ಲಿದೆ? ಅದಕ್ಕೆ ಸ್ವತಃ ಸುದೀಪ್​ ಉತ್ತರ ನೀಡಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. 3ಡಿ ವರ್ಷನ್​ನಲ್ಲೂ ‘ವಿಕ್ರಾಂತ್​ ರೋಣ’ ಸಿದ್ಧವಾಗುತ್ತಿದೆ. ಅದರ ಕೆಲವು ದೃಶ್ಯಗಳನ್ನು ನೋಡಿ ಸುದೀಪ್​ ಖುಷಿಪಟ್ಟಿದ್ದಾರೆ.

ಬಹುತೇಕ ಶೂಟಿಂಗ್​ ಮುಗಿಸಿಕೊಂಡಿರುವ ವಿಕ್ರಾಂತ್​ ರೋಣ ತಂಡ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಲಾಕ್​ಡೌನ್​ ಸಡಿಲ ಆಗುತ್ತಿದ್ದಂತೆಯೇ ಸುದೀಪ್​ ಕೂಡ ಡಬ್ಬಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹಾಡುಗಳ ಚಿತ್ರೀಕರಣ ಮಾಡುವುದು ಬಾಕಿ ಇದೆ. ಈ ಬಗ್ಗೆ ಅವರು ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

‘ವಿಕ್ರಾಂತ್​ ರೋಣ ಚಿತ್ರಕ್ಕಾಗಿ ನಾನು ಧ್ವನಿ ನೀಡುವ ಕೆಲಸ ಪೂರ್ಣಗೊಳಿಸಿದ್ದೇನೆ. ಇದೊಂದು ಅದ್ಭುತ ಅನುಭವ. ಹೊಸ ಬಗೆಯಲ್ಲಿ ಪಾತ್ರವನ್ನು ಕಟ್ಟಿಕೊಡುತ್ತಿದ್ದೇವೆ. 3ಡಿ ವರ್ಷನ್​ನ ಕೆಲವು ಸ್ಯಾಂಪಲ್​ಗಳನ್ನು ನೋಡಿದೆ. ವಿಕ್ರಾಂತ್​ ರೋಣನ ಪ್ರಪಂಚಕ್ಕೆ ಜೀವ ಬರುವುದನ್ನು ನೋಡಿ ಥ್ರಿಲ್​ ಆಗುತ್ತದೆ. ಹಾಡುಗಳ ಶೂಟಿಂಗ್​ಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಕಿಚ್ಚ ಹೇಳಿದ್ದಾರೆ.

ಸುದೀಪ್​ ಅವರ ಈ ಮಾತುಗಳಿಂದಾಗಿ ಅಭಿಮಾನಿಗಳಿಗೆ ಚಿತ್ರದ ಮೇಲೆ ಇರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ದೊಡ್ಡ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬರುತ್ತಿದೆ. ಸುದೀಪ್ ಜೊತೆ ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ನಟಿಸುತ್ತಿದ್ದಾರೆ. ಶಾಲಿನಿ ಮಂಜುನಾಥ್​ ಹಾಗೂ ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಮೊದಲು ಫ್ಯಾಂಟಮ್​ ಎಂದಿದ್ದ ಚಿತ್ರದ ಶೀರ್ಷಿಕೆಯನ್ನು ವಿಕ್ರಾಂತ್​ ರೋಣ ಎಂದು ಬದಲಿಸಲಾಯಿತು. ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ಫೆ.1ರಂದು ಟೈಟಲ್​ ಮತ್ತು ಟೀಸರ್ ಅನಾವರಣ ಮಾಡಲಾಗಿತ್ತು. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ, ವಿಲಿಯಮ್ ಡೇವಿಡ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು