AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಅನೇಕ ಊರುಗಳ ದೇವಸ್ಥಾನದಲ್ಲಿ ಕಿಚ್ಚ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಎಲ್ಲರ ಪ್ರಾರ್ಥನೆಯ ಫಲವಾಗಿ ಅವರು​ ಚೇತರಿಸಿಕೊಂಡಿದ್ದಾರೆ.

Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Apr 29, 2021 | 12:52 PM

Share

ನಟ ಕಿಚ್ಚ ಸುದೀಪ್​ ಆರೋಗ್ಯದ ಬಗ್ಗೆ ಖುಷಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಸುದೀಪ್​ ಮಾಹಿತಿ ನೀಡಿದ್ದು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿವಂತಾಗಿದೆ. ಸುದೀಪ್​ ಅನಾರೋಗ್ಯದ ಕಾರಣದಿಂದ ಎರಡು ವಾರಗಳ ಕಾಲ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವಾರ ಸುದೀಪ್​ ಅವರ ನಿರೂಪಣೆಯಲ್ಲೇ ಬಿಗ್​ ಬಾಸ್​ ವೀಕೆಂಡ್​ ಎಪಿಸೋಡ್​ ನಡೆಯಲಿದೆ.

‘ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗೆ ಧನ್ಯವಾದಗಳು. ನಾನೀಗ ಉತ್ತಮವಾಗಿದ್ದೇನೆ. ಈ ವಾರ ಬಿಗ್​ ಬಾಸ್​ನಲ್ಲಿ ಭಾಗವಹಿಸಲು ಕಾಯುತ್ತಿದ್ದೇನೆ. ತುಂಬಾ ಕಾಳಜಿ ತೋರಿಸಿದ್ದಕ್ಕಾಗಿ ಡಾ. ವೆಂಕಟೇಶ್​, ಡಾ. ವಿನಯ್​ ಅವರಿಗೆ ಧನ್ಯವಾದಗಳು. ದೇವಸ್ಥಾನಗಳಲ್ಲಿ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಅನೇಕ ವಿಡಿಯೋಗಳನ್ನು ನೋಡಿದೆ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ ಎಂದಷ್ಟೇ ಹೇಳಬಲ್ಲೆ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸುದೀಪ್​ಗೆ ಅನಾರೋಗ್ಯ ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಆತಂಕಗೊಂಡಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಾವಿರಾರು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅನೇಕ ಊರುಗಳ ದೇವಸ್ಥಾನದಲ್ಲಿ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಆ ಎಲ್ಲ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ ಕೂಡ. ಎಲ್ಲರ ಪ್ರಾರ್ಥನೆಯ ಫಲವಾಗಿ ಕಿಚ್ಚ ಸುದೀಪ್​ ಚೇತರಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಜಪಾನಿನ ಮಹಿಳೆಯೊಬ್ಬರು ಸುದೀಪ್​ಗಾಗಿ ಪ್ರಾರ್ಥಿಸಿಕೊಂಡಿದ್ದರು. ಆ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ನಮಸ್ಕಾರ ಸುದೀಪ್​ ಸರ್​. ಈಗ ಹೇಗಿದ್ದೀರಿ? ನೀವು ಬೇಗ ಗುಣಮುಖರಾಗಿ ಎಂದು ಪ್ರಾರ್ಥನೆ ಮಾಡುತ್ತಿದ್ದೇನೆ. ನನ್ನ ಹೃದಯದಾಳದಿಂದ ಈ ಮಾತು ಹೇಳುತ್ತಿದ್ದೇನೆ. ದಯವಿಟ್ಟು ನಿಮ್ಮ ಕಾಳಜಿ ವಹಿಸಿ. ಜಪಾನ್​ನಿಂದ ನಿಮಗಿದು ಪ್ರೀತಿಯ ಸಂದೇಶ’ ಎಂದು ಆ​ ಮಹಿಳೆ ವಿಡಿಯೋದಲ್ಲಿ ಮಾತನಾಡಿದ್ದರು.

ಒಟ್ಟಿನಲ್ಲಿ ಸುದೀಪ್​ ಅವರು ಗುಣಮುಖರಾಗಿರುವ ಸುದ್ದಿ ಕೇಳಿ ಎಲ್ಲರಿಗೂ ಸಂತಸ ಆಗಿದೆ. ಕಿಚ್ಚನ ಟ್ವೀಟ್​ಗೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಎರಡು ವಾರಗಳ ಕಾಲ ಅವರನ್ನು ಮಿಸ್​ ಮಾಡಿಕೊಂಡಿದ್ದ ಬಿಗ್​ ಬಾಸ್​ ಪ್ರೇಕ್ಷಕರಿಗೆ ಈ ವಾರ ಸಂತಸ ಆಗಲಿದೆ. ಬಿಗ್​ ಬಾಸ್​ ಸ್ಪರ್ಧಿಗಳು ಕೂಡ ಸುದೀಪ್​ ಆಗಮನಕ್ಕಾಗಿ ಕಾಯುತ್ತಿದ್ದರು. ಅವರಿಗೂ ಈ ವೀಕೆಂಡ್​ನಲ್ಲಿ ಕಿಚ್ಚ ಅಚ್ಚರಿ ನೀಡಲಿದ್ದಾರೆ.

ಇದನ್ನೂ ಓದಿ: Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ