Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಅನೇಕ ಊರುಗಳ ದೇವಸ್ಥಾನದಲ್ಲಿ ಕಿಚ್ಚ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಎಲ್ಲರ ಪ್ರಾರ್ಥನೆಯ ಫಲವಾಗಿ ಅವರು​ ಚೇತರಿಸಿಕೊಂಡಿದ್ದಾರೆ.

Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​
Follow us
|

Updated on: Apr 29, 2021 | 12:52 PM

ನಟ ಕಿಚ್ಚ ಸುದೀಪ್​ ಆರೋಗ್ಯದ ಬಗ್ಗೆ ಖುಷಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಸುದೀಪ್​ ಮಾಹಿತಿ ನೀಡಿದ್ದು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿವಂತಾಗಿದೆ. ಸುದೀಪ್​ ಅನಾರೋಗ್ಯದ ಕಾರಣದಿಂದ ಎರಡು ವಾರಗಳ ಕಾಲ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವಾರ ಸುದೀಪ್​ ಅವರ ನಿರೂಪಣೆಯಲ್ಲೇ ಬಿಗ್​ ಬಾಸ್​ ವೀಕೆಂಡ್​ ಎಪಿಸೋಡ್​ ನಡೆಯಲಿದೆ.

‘ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗೆ ಧನ್ಯವಾದಗಳು. ನಾನೀಗ ಉತ್ತಮವಾಗಿದ್ದೇನೆ. ಈ ವಾರ ಬಿಗ್​ ಬಾಸ್​ನಲ್ಲಿ ಭಾಗವಹಿಸಲು ಕಾಯುತ್ತಿದ್ದೇನೆ. ತುಂಬಾ ಕಾಳಜಿ ತೋರಿಸಿದ್ದಕ್ಕಾಗಿ ಡಾ. ವೆಂಕಟೇಶ್​, ಡಾ. ವಿನಯ್​ ಅವರಿಗೆ ಧನ್ಯವಾದಗಳು. ದೇವಸ್ಥಾನಗಳಲ್ಲಿ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಅನೇಕ ವಿಡಿಯೋಗಳನ್ನು ನೋಡಿದೆ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ ಎಂದಷ್ಟೇ ಹೇಳಬಲ್ಲೆ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸುದೀಪ್​ಗೆ ಅನಾರೋಗ್ಯ ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಆತಂಕಗೊಂಡಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಾವಿರಾರು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅನೇಕ ಊರುಗಳ ದೇವಸ್ಥಾನದಲ್ಲಿ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಆ ಎಲ್ಲ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ ಕೂಡ. ಎಲ್ಲರ ಪ್ರಾರ್ಥನೆಯ ಫಲವಾಗಿ ಕಿಚ್ಚ ಸುದೀಪ್​ ಚೇತರಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಜಪಾನಿನ ಮಹಿಳೆಯೊಬ್ಬರು ಸುದೀಪ್​ಗಾಗಿ ಪ್ರಾರ್ಥಿಸಿಕೊಂಡಿದ್ದರು. ಆ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ನಮಸ್ಕಾರ ಸುದೀಪ್​ ಸರ್​. ಈಗ ಹೇಗಿದ್ದೀರಿ? ನೀವು ಬೇಗ ಗುಣಮುಖರಾಗಿ ಎಂದು ಪ್ರಾರ್ಥನೆ ಮಾಡುತ್ತಿದ್ದೇನೆ. ನನ್ನ ಹೃದಯದಾಳದಿಂದ ಈ ಮಾತು ಹೇಳುತ್ತಿದ್ದೇನೆ. ದಯವಿಟ್ಟು ನಿಮ್ಮ ಕಾಳಜಿ ವಹಿಸಿ. ಜಪಾನ್​ನಿಂದ ನಿಮಗಿದು ಪ್ರೀತಿಯ ಸಂದೇಶ’ ಎಂದು ಆ​ ಮಹಿಳೆ ವಿಡಿಯೋದಲ್ಲಿ ಮಾತನಾಡಿದ್ದರು.

ಒಟ್ಟಿನಲ್ಲಿ ಸುದೀಪ್​ ಅವರು ಗುಣಮುಖರಾಗಿರುವ ಸುದ್ದಿ ಕೇಳಿ ಎಲ್ಲರಿಗೂ ಸಂತಸ ಆಗಿದೆ. ಕಿಚ್ಚನ ಟ್ವೀಟ್​ಗೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಎರಡು ವಾರಗಳ ಕಾಲ ಅವರನ್ನು ಮಿಸ್​ ಮಾಡಿಕೊಂಡಿದ್ದ ಬಿಗ್​ ಬಾಸ್​ ಪ್ರೇಕ್ಷಕರಿಗೆ ಈ ವಾರ ಸಂತಸ ಆಗಲಿದೆ. ಬಿಗ್​ ಬಾಸ್​ ಸ್ಪರ್ಧಿಗಳು ಕೂಡ ಸುದೀಪ್​ ಆಗಮನಕ್ಕಾಗಿ ಕಾಯುತ್ತಿದ್ದರು. ಅವರಿಗೂ ಈ ವೀಕೆಂಡ್​ನಲ್ಲಿ ಕಿಚ್ಚ ಅಚ್ಚರಿ ನೀಡಲಿದ್ದಾರೆ.

ಇದನ್ನೂ ಓದಿ: Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ