AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಅನೇಕ ಊರುಗಳ ದೇವಸ್ಥಾನದಲ್ಲಿ ಕಿಚ್ಚ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಎಲ್ಲರ ಪ್ರಾರ್ಥನೆಯ ಫಲವಾಗಿ ಅವರು​ ಚೇತರಿಸಿಕೊಂಡಿದ್ದಾರೆ.

Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Apr 29, 2021 | 12:52 PM

Share

ನಟ ಕಿಚ್ಚ ಸುದೀಪ್​ ಆರೋಗ್ಯದ ಬಗ್ಗೆ ಖುಷಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಸುದೀಪ್​ ಮಾಹಿತಿ ನೀಡಿದ್ದು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿವಂತಾಗಿದೆ. ಸುದೀಪ್​ ಅನಾರೋಗ್ಯದ ಕಾರಣದಿಂದ ಎರಡು ವಾರಗಳ ಕಾಲ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವಾರ ಸುದೀಪ್​ ಅವರ ನಿರೂಪಣೆಯಲ್ಲೇ ಬಿಗ್​ ಬಾಸ್​ ವೀಕೆಂಡ್​ ಎಪಿಸೋಡ್​ ನಡೆಯಲಿದೆ.

‘ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗೆ ಧನ್ಯವಾದಗಳು. ನಾನೀಗ ಉತ್ತಮವಾಗಿದ್ದೇನೆ. ಈ ವಾರ ಬಿಗ್​ ಬಾಸ್​ನಲ್ಲಿ ಭಾಗವಹಿಸಲು ಕಾಯುತ್ತಿದ್ದೇನೆ. ತುಂಬಾ ಕಾಳಜಿ ತೋರಿಸಿದ್ದಕ್ಕಾಗಿ ಡಾ. ವೆಂಕಟೇಶ್​, ಡಾ. ವಿನಯ್​ ಅವರಿಗೆ ಧನ್ಯವಾದಗಳು. ದೇವಸ್ಥಾನಗಳಲ್ಲಿ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಅನೇಕ ವಿಡಿಯೋಗಳನ್ನು ನೋಡಿದೆ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ ಎಂದಷ್ಟೇ ಹೇಳಬಲ್ಲೆ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸುದೀಪ್​ಗೆ ಅನಾರೋಗ್ಯ ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಆತಂಕಗೊಂಡಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಾವಿರಾರು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅನೇಕ ಊರುಗಳ ದೇವಸ್ಥಾನದಲ್ಲಿ ಸುದೀಪ್​ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಆ ಎಲ್ಲ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ ಕೂಡ. ಎಲ್ಲರ ಪ್ರಾರ್ಥನೆಯ ಫಲವಾಗಿ ಕಿಚ್ಚ ಸುದೀಪ್​ ಚೇತರಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಜಪಾನಿನ ಮಹಿಳೆಯೊಬ್ಬರು ಸುದೀಪ್​ಗಾಗಿ ಪ್ರಾರ್ಥಿಸಿಕೊಂಡಿದ್ದರು. ಆ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ನಮಸ್ಕಾರ ಸುದೀಪ್​ ಸರ್​. ಈಗ ಹೇಗಿದ್ದೀರಿ? ನೀವು ಬೇಗ ಗುಣಮುಖರಾಗಿ ಎಂದು ಪ್ರಾರ್ಥನೆ ಮಾಡುತ್ತಿದ್ದೇನೆ. ನನ್ನ ಹೃದಯದಾಳದಿಂದ ಈ ಮಾತು ಹೇಳುತ್ತಿದ್ದೇನೆ. ದಯವಿಟ್ಟು ನಿಮ್ಮ ಕಾಳಜಿ ವಹಿಸಿ. ಜಪಾನ್​ನಿಂದ ನಿಮಗಿದು ಪ್ರೀತಿಯ ಸಂದೇಶ’ ಎಂದು ಆ​ ಮಹಿಳೆ ವಿಡಿಯೋದಲ್ಲಿ ಮಾತನಾಡಿದ್ದರು.

ಒಟ್ಟಿನಲ್ಲಿ ಸುದೀಪ್​ ಅವರು ಗುಣಮುಖರಾಗಿರುವ ಸುದ್ದಿ ಕೇಳಿ ಎಲ್ಲರಿಗೂ ಸಂತಸ ಆಗಿದೆ. ಕಿಚ್ಚನ ಟ್ವೀಟ್​ಗೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಎರಡು ವಾರಗಳ ಕಾಲ ಅವರನ್ನು ಮಿಸ್​ ಮಾಡಿಕೊಂಡಿದ್ದ ಬಿಗ್​ ಬಾಸ್​ ಪ್ರೇಕ್ಷಕರಿಗೆ ಈ ವಾರ ಸಂತಸ ಆಗಲಿದೆ. ಬಿಗ್​ ಬಾಸ್​ ಸ್ಪರ್ಧಿಗಳು ಕೂಡ ಸುದೀಪ್​ ಆಗಮನಕ್ಕಾಗಿ ಕಾಯುತ್ತಿದ್ದರು. ಅವರಿಗೂ ಈ ವೀಕೆಂಡ್​ನಲ್ಲಿ ಕಿಚ್ಚ ಅಚ್ಚರಿ ನೀಡಲಿದ್ದಾರೆ.

ಇದನ್ನೂ ಓದಿ: Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?