AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha 46: ಸುದೀಪ್ ಮನೆಯಲ್ಲಿರೋ ಹೋಮ್ ಥಿಯೇಟರ್ ಹೆಬ್ಬಾಗಿಲು ಹೇಗಿದೆ ನೋಡಿ

ಕಿಚ್ಚ ಸುದೀಪ್ ಅವರು ಇತ್ತೀಗೆ ‘Kichcha46’ ಘೋಷಣೆ ಮಾಡಿದರು. ಈ ಚಿತ್ರವನ್ನು ಕಲೈಪುಲಿ ಎಸ್​. ಧಾನು ಅವರು ಬಂಡವಾಳ ಹೂಡಲಿದ್ದಾರೆ. ಸುದೀಪ್ ಮನೆಯಲ್ಲಿಇದರ ಕೆಲಸ ನಡೆಯುತ್ತಿದೆ.

Kichcha 46: ಸುದೀಪ್ ಮನೆಯಲ್ಲಿರೋ ಹೋಮ್ ಥಿಯೇಟರ್ ಹೆಬ್ಬಾಗಿಲು ಹೇಗಿದೆ ನೋಡಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jun 07, 2023 | 11:11 AM

Share

‘ವಿಕ್ರಾಂತ್ ರೋಣ’ ಚಿತ್ರ ತೆರೆಕಂಡ ನಂತರ ಸುದೀಪ್ (Sudeep) ಅವರು ದೀರ್ಘ ಗ್ಯಾಪ್ ತೆಗೆದುಕೊಂಡರು. ಈಗ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಮಧ್ಯೆ ಸುದೀಪ್ ನಟನೆಯ ‘Kichcha46’ ಚಿತ್ರದ ಬಗ್ಗೆ ಒಂದಾದರ ಮೇಲೆ ಒಂದರಂತೆ ಅಪ್​​ಡೇಟ್ ಸಿಗುತ್ತಲೇ ಇದೆ. ಸದ್ಯ ಟೀಸರ್ ಲಾಂಚ್ ಮಾಡಲು ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಇದರ ಕೆಲಸ ಸುದೀಪ್​ ಮನೆಯಲ್ಲೇ ನಡೆಯುತ್ತಿದೆ ಎನ್ನಲಾಗಿದೆ. ಈಗ ಸುದೀಪ್ ಹೋಮ್ ಥಿಯೇಟರ್ ಬಾಗಿಲ ಫೋಟೋ ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ಇತ್ತೀಗೆ ‘Kichcha46’ ಘೋಷಣೆ ಮಾಡಿದರು. ಈ ಚಿತ್ರವನ್ನು ಕಲೈಪುಲಿ ಎಸ್​. ಧಾನು ಅವರು ಬಂಡವಾಳ ಹೂಡಲಿದ್ದಾರೆ. ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಕಲೈಪುಲಿ ಅವರ ಮಾಲೀಕತ್ವದ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ.  ಈ ಚಿತ್ರದ ಟೈಟಲ್ ಇನ್ನು ಕೆಲವೇ ದಿನಗಳಲ್ಲಿ ಅನೌನ್ಸ್ ಆಗೋ ಸಾಧ್ಯತೆ ಇದೆ. ಸುದೀಪ್ ಮನೆಯಲ್ಲಿ ಕೆಲಸಗಳು ನಡೆಯುತ್ತಿವೆ.

ವೀರಕಪುತ್ರ ಶ್ರೀನಿವಾಸ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸುದೀಪ್ ಹೋಮ್​ ಥಿಯೇಟರ್​ ಬಾಗಿಲ ಫೋಟೋ ಅನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ‘ನಿನ್ನೆ ರಾತ್ರಿ ಚಿಕ್ಕೆಜಮಾನರನ್ನು ಭೇಟಿ ಆದೆ. ಮನೆಯಲ್ಲಿ  #kichcha46 ಸಿನಿಮಾಗಾಗಿ ಹತ್ತಾರು ಜನ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದನ್ನು ನೋಡಿದೆ. ಆ ದೃಶ್ಯ ಕಂಡ ಮೇಲೆ ಮುಂದಿನವಾರ ಘೋಷಣೆ ಆಗುತ್ತಿರುವ ಆ ಸಿನೆಮಾ ಬಗ್ಗೆ ನಿರೀಕ್ಷೆಗಳು ನೂರ್ಮಡಿಯಾದವು. ಅಂದ ಹಾಗೆ ಇದು ಅವರ ಹೋಮ್ ಥೀಯೇಟರ್​​ನ ಬಾಗಿಲು, ಹೇಗಿದೆ ಸಿಂಹದ್ವಾರ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 2018 Movie: ‘ಈ ಮಲಯಾಳಂ ಸಿನಿಮಾ ಕನ್ನಡಿಗರ ಹೃದಯ ಗೆದ್ದಿದೆ’: ‘2018’ ಚಿತ್ರಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ

ಇತ್ತೀಚೆಗೆ ‘ಕಿಚ್ಚ 46’ ಚಿತ್ರಕ್ಕೆ ನಾಯಕಿ ಯಾರು ಅನ್ನೋ ಬಗ್ಗೆ ಸುದ್ದಿ ಹರಿದಾಡಿತ್ತು. ಪಂಜಾಬಿ ನಾಯಕಿ ಸಿಮ್ರನ್ ಕೌರ್ ಅವರು ಕಿಚ್ಚನಿಗೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನವು ಸುದ್ದಿ ಹರಿದಾಡಿತ್ತು. ಪಂಜಾಬಿ, ಹಿಂದಿ ಚಿತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:40 am, Wed, 7 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ