AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೊನೆಯ ಉಸಿರು ಇರೋವರೆಗೂ ನೀವು ಮಾಡಿದ ಸಹಾಯ ಮರೆಯಲ್ಲ’

ನಾನು ಇಂಡಸ್ಟ್ರಿಗೆ ಬಂದಾಗ ಮೊದಲ ಸಹಾಯ ಮಾಡಿದ್ದು ರಾಕ್​ಲೈನ್ ವೆಂಕಟೇಶ್​. ನಾನು ಸಿನಿಮಾಗಳಲ್ಲಿ ಹೀರೊ ಆಗಿದ್ದೆ, ಆದರೆ ದುಡ್ಡಿರಲಿಲ್ಲ. ಅವತ್ತು ಇಂಡಸ್ಟ್ರಿಯಲ್ಲಿ ಯಾರ ಹತ್ತಿರ ಹೋಗಬೇಕು ಎಂದು ಗೊತ್ತಾಗಲಿಲ್ಲ. ಆಗ ಸಿಕ್ಕಿದ್ದೇ ರಾಕ್​ಲೈನ್​ ವೆಂಕಟೇಶ್​ ಎಂದು ಹಳೆಯ ದಿನಗಳನ್ನು ನೆನೆದರು ಸುದೀಪ್​.

'ನನ್ನ ಕೊನೆಯ ಉಸಿರು ಇರೋವರೆಗೂ ನೀವು ಮಾಡಿದ ಸಹಾಯ ಮರೆಯಲ್ಲ'
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 15, 2021 | 10:04 PM

Share

ಸುದೀಪ್​ ಚಿತ್ರರಂಗಕ್ಕೆ ಬಂದು 25 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಲ್ಲಿ ಸುದೀಪ್​ ಅವರನ್ನು ಸನ್ಮಾನಿಸುವ ಕೆಲಸ ಕೂಡ ನಡೆಯಿತು. ಈ ವೇಳೆ ಸುದೀಪ್​ ತಮ್ಮ ಪಯಣವನ್ನು ನೆನಪಿಸಿಕೊಂಡರು. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸುದೀಪ್​ಗೆ ಸಹಾಯ ಒಂದನ್ನು ಮಾಡಿದ್ದರಂತೆ. ಇದನ್ನು ಸುದೀಪ್​ ಎಂದಿಗೂ ಮರೆಯುವುದಿಲ್ಲ ಎಂದರು.

ನಾನು ಇಂಡಸ್ಟ್ರಿಗೆ ಬಂದಾಗ ಮೊದಲ ಸಹಾಯ ಮಾಡಿದ್ದು ಎಂದರೆ ಅದು ರಾಕ್​ಲೈನ್ ವೆಂಕಟೇಶ್​. ನಾನು ಹೀರೋ ಆಗಿದ್ದೆ. ಆದರೆ, ದುಡ್ಡಿರಲಿಲ್ಲ. ಅವತ್ತು ಇಂಡಸ್ಟ್ರಿಯಲ್ಲಿ ಯಾರ ಹತ್ತಿರ ಹೋಗಬೇಕು ಎಂದು ಗೊತ್ತಾಗಲಿಲ್ಲ. ಕೆಲವರ ಹತ್ತಿರ ಹೋದರೆ ಮರ್ಯಾದೆ ಹೋಗುತ್ತದೆ ಎನ್ನುವ ಅಂಜಿಕೆ ಇತ್ತು. ಎಷ್ಟೊಂದು ಸಿನಿಮಾ ಮಾಡಿದ್ದಾರೆ. ಆದರೂ ದುಡ್ಡು ಕೇಳ್ತಾರಲ್ಲ ಎಂದು ಕೊಳ್ಳುತ್ತಿದ್ದರು. ಬಹಳ ಧೈರ್ಯ ಮಾಡಿ ಮಧ್ಯರಾತ್ರಿ ರಾಕ್​ಲೈನ್​ ಅವರಿಗೆ ಕರೆ ಮಾಡಿದ್ದೆ ಎಂದರು ಸುದೀಪ್​.

ಕರೆ ಮಾಡಿದಾಗ ಮಾತನಾಡೋಕೆ ಬರುತ್ತೇನೆ ಎಂದಿದ್ದೆ. ಮಧ್ಯರಾತ್ರಿ ಅವರ ಮನೆಗೆ ಹೋದೆ. ಏನೋ ತಪ್ಪಾಗಿದೆ ಎಂಬುದು ಅವರಿಗೆ ಮೊದಲೇ ಗೊತ್ತಿತ್ತು. ಅವಾಗ ನನಗೆ ತಲೆ ತಗ್ಗಿಸೋಕು ಸಮಯ ಕೊಟ್ಟಿಲ್ಲ. ಅವರು ನನಗೆ ಹಣ ನೀಡಿದ್ದರು. ನಾನು ಇಂದಿಗೂ ಅದನ್ನು ನೆನಪು ಇಟ್ಟುಕೊಂಡಿದ್ದೇನೆ ಎಂದರೆ ಅದಕ್ಕೆ ಕಾರಣ ಅವರು ನೀಡಿದ ಹಣ ಅಲ್ಲ. ಅವರು ಮಾಡಿದ ಮಾನವೀಯ ಸಹಾಯ. ಅವರು ನನಗೆ ಯಾವತ್ತಿದ್ದರೂ ಹಿರಿಯ ಅಣ್ಣನೇ. ನನ್ನ ಕೊನೆ ಉಸಿರು ಇರೋ ವರೆಗೂ ನಾನು ಆ ಸಹಾಯವನ್ನು ಎಂದಿಗೂ ಮರೆಯಲ್ಲ ಎಂದರು ಸುದೀಪ್​.

ಉಪೇಂದ್ರ ಅವರನ್ನು ನೆನೆದ ಸುದೀಪ್​ ಉಪೇಂದ್ರ ಅವರು ಕಾರಣಾಂತರಗಳಿಂದ ಇಂದು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಆದಾಗ್ಯೂ ಉಪೇಂದ್ರ ಅವರನ್ನು ನೆನೆಯೋಕೆ ಸುದೀಪ್​​ ಮರೆತಿಲ್ಲ. ಉಪೇಂದ್ರ ಅವರಿಂದ ನಾನು ತುಂಬಾ ಕದಿಯೋದಿದೆ. ಅದು ಗೊತ್ತಾಗಿಯೇ ಅವರು ಬಂದಿಲ್ಲ ಅನಿಸುತ್ತೆ. ನಾನು ಕಲಾವಿದ ಆಗಬಹುದು ಎಂದು ತೋರಿಸಿಕೊಟ್ಟಿದ್ದೇ ಅವರು. ಸಹ ನಿರ್ದೇಶಕ- ನಿರ್ದೇಶಕನಾಗಬೇಕು ಎಂದು ಓಡಾಡುವಾಗ ಉಪೇಂದ್ರ ನೀವು ಇಷ್ಟೆಲ್ಲ ಇಟ್ಟುಕೊಂಡು ನಿರ್ದೇಶಕನಾಗ್ತೀನಿ ಅಂತೀರಲ್ಲ. ಹೋಗಿ ಹೀರೋ ಆಗಿ ಅಂದಿದ್ರು. ಅವತ್ತಿಗೆ ಆ ಮಾತನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದೆ. ನಾನು ನಟನಾಗಬಹುದು ಎಂದು ಮೊದಲು ಗುರುತಿಸಿದ್ದೇ ಅವರು. ನಿರ್ದೇಶನ ಮಾಡೋದಕ್ಕೂ ಅವರ ಸ್ಫೂರ್ತಿ ಇದೆ ಎಂದರು.

ಇದನ್ನೂ ಓದಿ: Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್

Published On - 9:58 pm, Mon, 15 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು