AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೊನೆಯ ಉಸಿರು ಇರೋವರೆಗೂ ನೀವು ಮಾಡಿದ ಸಹಾಯ ಮರೆಯಲ್ಲ’

ನಾನು ಇಂಡಸ್ಟ್ರಿಗೆ ಬಂದಾಗ ಮೊದಲ ಸಹಾಯ ಮಾಡಿದ್ದು ರಾಕ್​ಲೈನ್ ವೆಂಕಟೇಶ್​. ನಾನು ಸಿನಿಮಾಗಳಲ್ಲಿ ಹೀರೊ ಆಗಿದ್ದೆ, ಆದರೆ ದುಡ್ಡಿರಲಿಲ್ಲ. ಅವತ್ತು ಇಂಡಸ್ಟ್ರಿಯಲ್ಲಿ ಯಾರ ಹತ್ತಿರ ಹೋಗಬೇಕು ಎಂದು ಗೊತ್ತಾಗಲಿಲ್ಲ. ಆಗ ಸಿಕ್ಕಿದ್ದೇ ರಾಕ್​ಲೈನ್​ ವೆಂಕಟೇಶ್​ ಎಂದು ಹಳೆಯ ದಿನಗಳನ್ನು ನೆನೆದರು ಸುದೀಪ್​.

'ನನ್ನ ಕೊನೆಯ ಉಸಿರು ಇರೋವರೆಗೂ ನೀವು ಮಾಡಿದ ಸಹಾಯ ಮರೆಯಲ್ಲ'
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 15, 2021 | 10:04 PM

Share

ಸುದೀಪ್​ ಚಿತ್ರರಂಗಕ್ಕೆ ಬಂದು 25 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಲ್ಲಿ ಸುದೀಪ್​ ಅವರನ್ನು ಸನ್ಮಾನಿಸುವ ಕೆಲಸ ಕೂಡ ನಡೆಯಿತು. ಈ ವೇಳೆ ಸುದೀಪ್​ ತಮ್ಮ ಪಯಣವನ್ನು ನೆನಪಿಸಿಕೊಂಡರು. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸುದೀಪ್​ಗೆ ಸಹಾಯ ಒಂದನ್ನು ಮಾಡಿದ್ದರಂತೆ. ಇದನ್ನು ಸುದೀಪ್​ ಎಂದಿಗೂ ಮರೆಯುವುದಿಲ್ಲ ಎಂದರು.

ನಾನು ಇಂಡಸ್ಟ್ರಿಗೆ ಬಂದಾಗ ಮೊದಲ ಸಹಾಯ ಮಾಡಿದ್ದು ಎಂದರೆ ಅದು ರಾಕ್​ಲೈನ್ ವೆಂಕಟೇಶ್​. ನಾನು ಹೀರೋ ಆಗಿದ್ದೆ. ಆದರೆ, ದುಡ್ಡಿರಲಿಲ್ಲ. ಅವತ್ತು ಇಂಡಸ್ಟ್ರಿಯಲ್ಲಿ ಯಾರ ಹತ್ತಿರ ಹೋಗಬೇಕು ಎಂದು ಗೊತ್ತಾಗಲಿಲ್ಲ. ಕೆಲವರ ಹತ್ತಿರ ಹೋದರೆ ಮರ್ಯಾದೆ ಹೋಗುತ್ತದೆ ಎನ್ನುವ ಅಂಜಿಕೆ ಇತ್ತು. ಎಷ್ಟೊಂದು ಸಿನಿಮಾ ಮಾಡಿದ್ದಾರೆ. ಆದರೂ ದುಡ್ಡು ಕೇಳ್ತಾರಲ್ಲ ಎಂದು ಕೊಳ್ಳುತ್ತಿದ್ದರು. ಬಹಳ ಧೈರ್ಯ ಮಾಡಿ ಮಧ್ಯರಾತ್ರಿ ರಾಕ್​ಲೈನ್​ ಅವರಿಗೆ ಕರೆ ಮಾಡಿದ್ದೆ ಎಂದರು ಸುದೀಪ್​.

ಕರೆ ಮಾಡಿದಾಗ ಮಾತನಾಡೋಕೆ ಬರುತ್ತೇನೆ ಎಂದಿದ್ದೆ. ಮಧ್ಯರಾತ್ರಿ ಅವರ ಮನೆಗೆ ಹೋದೆ. ಏನೋ ತಪ್ಪಾಗಿದೆ ಎಂಬುದು ಅವರಿಗೆ ಮೊದಲೇ ಗೊತ್ತಿತ್ತು. ಅವಾಗ ನನಗೆ ತಲೆ ತಗ್ಗಿಸೋಕು ಸಮಯ ಕೊಟ್ಟಿಲ್ಲ. ಅವರು ನನಗೆ ಹಣ ನೀಡಿದ್ದರು. ನಾನು ಇಂದಿಗೂ ಅದನ್ನು ನೆನಪು ಇಟ್ಟುಕೊಂಡಿದ್ದೇನೆ ಎಂದರೆ ಅದಕ್ಕೆ ಕಾರಣ ಅವರು ನೀಡಿದ ಹಣ ಅಲ್ಲ. ಅವರು ಮಾಡಿದ ಮಾನವೀಯ ಸಹಾಯ. ಅವರು ನನಗೆ ಯಾವತ್ತಿದ್ದರೂ ಹಿರಿಯ ಅಣ್ಣನೇ. ನನ್ನ ಕೊನೆ ಉಸಿರು ಇರೋ ವರೆಗೂ ನಾನು ಆ ಸಹಾಯವನ್ನು ಎಂದಿಗೂ ಮರೆಯಲ್ಲ ಎಂದರು ಸುದೀಪ್​.

ಉಪೇಂದ್ರ ಅವರನ್ನು ನೆನೆದ ಸುದೀಪ್​ ಉಪೇಂದ್ರ ಅವರು ಕಾರಣಾಂತರಗಳಿಂದ ಇಂದು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಆದಾಗ್ಯೂ ಉಪೇಂದ್ರ ಅವರನ್ನು ನೆನೆಯೋಕೆ ಸುದೀಪ್​​ ಮರೆತಿಲ್ಲ. ಉಪೇಂದ್ರ ಅವರಿಂದ ನಾನು ತುಂಬಾ ಕದಿಯೋದಿದೆ. ಅದು ಗೊತ್ತಾಗಿಯೇ ಅವರು ಬಂದಿಲ್ಲ ಅನಿಸುತ್ತೆ. ನಾನು ಕಲಾವಿದ ಆಗಬಹುದು ಎಂದು ತೋರಿಸಿಕೊಟ್ಟಿದ್ದೇ ಅವರು. ಸಹ ನಿರ್ದೇಶಕ- ನಿರ್ದೇಶಕನಾಗಬೇಕು ಎಂದು ಓಡಾಡುವಾಗ ಉಪೇಂದ್ರ ನೀವು ಇಷ್ಟೆಲ್ಲ ಇಟ್ಟುಕೊಂಡು ನಿರ್ದೇಶಕನಾಗ್ತೀನಿ ಅಂತೀರಲ್ಲ. ಹೋಗಿ ಹೀರೋ ಆಗಿ ಅಂದಿದ್ರು. ಅವತ್ತಿಗೆ ಆ ಮಾತನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದೆ. ನಾನು ನಟನಾಗಬಹುದು ಎಂದು ಮೊದಲು ಗುರುತಿಸಿದ್ದೇ ಅವರು. ನಿರ್ದೇಶನ ಮಾಡೋದಕ್ಕೂ ಅವರ ಸ್ಫೂರ್ತಿ ಇದೆ ಎಂದರು.

ಇದನ್ನೂ ಓದಿ: Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್

Published On - 9:58 pm, Mon, 15 March 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ