AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಅದನ್ನು ಕಂಡು ಸುದೀಪ್​ ಅವರು ‘ಅದ್ಭುತವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ
ವಿಕ್ರಾಂತ್​ ರೋಣ, ಕಿಚ್ಚ ಸುದೀಪ್​
ಮದನ್​ ಕುಮಾರ್​
| Edited By: |

Updated on: May 30, 2021 | 4:30 PM

Share

ಕೊವಿಡ್​-19 ಹಾವಳಿ ಹೆಚ್ಚುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್​ ಅವರು ಅನೇಕ ಸಿನಿಮಾ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ವಿಕ್ರಾಂತ್​ ರೋಣ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಸಿನಿಮಾ ತಯಾರಾಗುತ್ತಿದೆ. ಸದ್ಯ ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಈ ನಡುವೆ ‘ವಿಕ್ರಾಂತ್ ರೋಣ’ ಸಿನಿಮಾದ ಒಂದು ಪೋಸ್ಟರ್​ ಗಮನ ಸೆಳೆದಿದೆ.

ಅರೆರೆ, ಹೇಳದೇ ಕೇಳದೇ ‘ವಿಕ್ರಾಂತ್​ ರೋಣ’ ಸಿನಿಮಾ ತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆಯೇ? ಹಾಗೇನೂ ಇಲ್ಲ. ಇದು ಫ್ಯಾನ್​ಮೇಡ್​ ಪೋಸ್ಟರ್​. ಅಂದರೆ, ಅಭಿಮಾನಿಗಳೇ ವಿನ್ಯಾಸಗೊಳಿಸಿರುವ ಪೋಸ್ಟರ್​. ಅದನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟರ್​ ಕಂಡು ಸ್ವತಃ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು ‘ಅದ್ಭುತವಾಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಹೈದರಾಬಾದ್​ನಲ್ಲಿ ದೊಡ್ಡ ಕಾಡಿನ ಸೆಟ್​ ಹಾಕಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಕಳೆದ ವರ್ಷ ಲಾಕ್​ಡೌನ್​ ಸಡಿಲವಾದಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ವಿಶ್ವದ ಅತಿ ಎತ್ತರದ ಕಟ್ಟಡ ‘ಭುರ್ಜ್​ ಖಲೀಫಾ’ ಮೇಲೆ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ಆಗಿದ್ದು, ಸ್ಯಾಂಡಲ್​ವುಡ್​ ಪಾಲಿಗೆ ಒಂದು ಮೈಲಿಗಲ್ಲಾಗಿತ್ತು.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ:

Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ