AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಅದನ್ನು ಕಂಡು ಸುದೀಪ್​ ಅವರು ‘ಅದ್ಭುತವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ
ವಿಕ್ರಾಂತ್​ ರೋಣ, ಕಿಚ್ಚ ಸುದೀಪ್​
ಮದನ್​ ಕುಮಾರ್​
| Edited By: |

Updated on: May 30, 2021 | 4:30 PM

Share

ಕೊವಿಡ್​-19 ಹಾವಳಿ ಹೆಚ್ಚುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್​ ಅವರು ಅನೇಕ ಸಿನಿಮಾ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ವಿಕ್ರಾಂತ್​ ರೋಣ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಸಿನಿಮಾ ತಯಾರಾಗುತ್ತಿದೆ. ಸದ್ಯ ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಈ ನಡುವೆ ‘ವಿಕ್ರಾಂತ್ ರೋಣ’ ಸಿನಿಮಾದ ಒಂದು ಪೋಸ್ಟರ್​ ಗಮನ ಸೆಳೆದಿದೆ.

ಅರೆರೆ, ಹೇಳದೇ ಕೇಳದೇ ‘ವಿಕ್ರಾಂತ್​ ರೋಣ’ ಸಿನಿಮಾ ತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆಯೇ? ಹಾಗೇನೂ ಇಲ್ಲ. ಇದು ಫ್ಯಾನ್​ಮೇಡ್​ ಪೋಸ್ಟರ್​. ಅಂದರೆ, ಅಭಿಮಾನಿಗಳೇ ವಿನ್ಯಾಸಗೊಳಿಸಿರುವ ಪೋಸ್ಟರ್​. ಅದನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟರ್​ ಕಂಡು ಸ್ವತಃ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು ‘ಅದ್ಭುತವಾಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಹೈದರಾಬಾದ್​ನಲ್ಲಿ ದೊಡ್ಡ ಕಾಡಿನ ಸೆಟ್​ ಹಾಕಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಕಳೆದ ವರ್ಷ ಲಾಕ್​ಡೌನ್​ ಸಡಿಲವಾದಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ವಿಶ್ವದ ಅತಿ ಎತ್ತರದ ಕಟ್ಟಡ ‘ಭುರ್ಜ್​ ಖಲೀಫಾ’ ಮೇಲೆ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ಆಗಿದ್ದು, ಸ್ಯಾಂಡಲ್​ವುಡ್​ ಪಾಲಿಗೆ ಒಂದು ಮೈಲಿಗಲ್ಲಾಗಿತ್ತು.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ:

Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್