AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ವಿವಾದ ಮರೆತು ಪಾರ್ಟಿ ಮೂಡ್​ನಲ್ಲಿ ಕಿಚ್ಚ ಸುದೀಪ್

ಸುದೀಪ್ ಪಾರ್ಟಿ ಮೂಡ್​ನಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್​ ತಂಡದ ಸಂದೀಪ್ ಶರ್ಮಾ, ಕೆಸಿ ಕರಿಯಪ್ಪ, ನಿರ್ದೇಶಕ ಕೃಷ್ಣ ಮೊದಲಾದವರ ಜೊತೆ ಸುದೀಪ್ ಪಾರ್ಟಿ ಮಾಡಿದ್ದಾರೆ.

Kichcha Sudeep: ವಿವಾದ ಮರೆತು ಪಾರ್ಟಿ ಮೂಡ್​ನಲ್ಲಿ ಕಿಚ್ಚ ಸುದೀಪ್
ಕ್ರಿಕೆಟರ್​ಗಳ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 19, 2023 | 11:01 AM

Share

ಕಿಚ್ಚ ಸುದೀಪ್ (Kichcha Sudeep) ಅವರ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್​ ಕುಮಾರ್ ಅವರು ಸುದೀಪ್ ವಿರುದ್ಧ ಸಿಡಿದೆದ್ದಿದ್ದಾರೆ. ಅವರು ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ ಫಿಲ್ಮ್​ ಚೇಂಬರ್ ಎದುರು ಅವರು ಸತ್ಯಾಗ್ರಹ ಕೂಡ ಮಾಡಿದ್ದಾರೆ. ಇತ್ತ ಕಿಚ್ಚ ಸುದೀಪ್ ಅವರು ಪಾರ್ಟಿ ಮೂಡ್​ನಲ್ಲಿದ್ದಾರೆ. ಅವರು ಈ ವಿವಾದಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಕ್ರಿಕೆಟರ್​ಗಳ ಜೊತೆ ಸುದೀಪ್ ಪಾರ್ಟಿ ಮಾಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕುಮಾರ್ ಅವರ ಆರೋಪದಿಂದ ಅವರ ಫ್ಯಾನ್ಸ್​ಗೆ ಬೇಸರ ಆಗಿದೆ. ಕೆಲವರು ಕುಮಾರ್ ವಿರುದ್ಧ ಆಕ್ರೋಶ ಕೂಡ ಹೊರಹಾಕಿದ್ದಾರೆ. ಕುಮಾರ್ ವಿರುದ್ಧ ಸುದೀಪ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸುದೀಪ್ ಅವರು ಈ ಪ್ರಕರಣವನ್ನು ಕೋರ್ಟ್​​ನಲ್ಲೇ ಬಗೆಹರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ, ಅವರು ಈ ಪ್ರಕರಣದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜುಲೈ 18ರ ರಾತ್ರಿ ಸುದೀಪ್ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ರಾಜಸ್ಥಾನ್ ರಾಯಲ್ಸ್​ ತಂಡದ ಸಂದೀಪ್ ಶರ್ಮಾ, ಕೆಸಿ ಕರಿಯಪ್ಪ, ಡೆಲ್ಲಿ ಕ್ಯಾಪಿಟಲ್ಸ್ ಪೃಥ್ವಿ ಶಾ ನಿರ್ದೇಶಕ ಕೃಷ್ಣ ಸೇರಿ ಮೊದಲಾದವರ ಜೊತೆ ಸುದೀಪ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸುದೀಪ್ ಕೂಲ್ ಆಗಿರುವುದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಸುದೀಪ್ ವಿರುದ್ಧದ ಷಡ್ಯಂತ್ರದ ಹಿಂದೆ ಸೂರಪ್ಪ ಬಾಬು ಕೈವಾಡ? ಎಳೆಎಳೆಯಾಗಿ ಬಿಚ್ಚಿಟ್ಟ ವೀರಕಪುತ್ರ ಶ್ರೀನಿವಾಸ

ಸುದೀಪ್ ಅವರು ‘K46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮೊದಲ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದಲ್ಲದೆ ಸುದೀಪ್ ಅವರು ಇನ್ನೂ ಎರಡು ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗ ಹುಟ್ಟಿಕೊಂಡಿರುವ ವಿವಾದದಿಂದ ಸಿನಿಮಾ ಕೆಲಸ ಮತ್ತಷ್ಟು ವಿಳಂಬ ಆಗಬಹುದು ಎಂದು ಊಹಿಸಿದ್ದರು. ಆದರೆ, ಈ ಫೋಟೋಗಳನ್ನು ನೋಡಿದ ನಂತರದಲ್ಲಿ ಅಭಿಮಾನಿಗಳು ಚಿಂತೆ ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ