AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗೊಂದಲದಲ್ಲಿದೆಯಾ ಸುದೀಪ್ ಕ್ಯಾಂಪೇನ್ ಪ್ಲಾನ್? ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಇಳಿಯೋದು ಯಾವಾಗ?

ಏಪ್ರಿಲ್ 14ರಿಂದ ಸುದೀಪ್ ಪ್ರಚಾರಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಈವರೆಗೆ ಕ್ಯಾಂಪೇನ್​ಗೆ ಇಳಿದಿಲ್ಲ.

Kichcha Sudeep: ಗೊಂದಲದಲ್ಲಿದೆಯಾ ಸುದೀಪ್ ಕ್ಯಾಂಪೇನ್ ಪ್ಲಾನ್? ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಇಳಿಯೋದು ಯಾವಾಗ?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Apr 18, 2023 | 7:36 AM

Share

ಮುಖ್ಯಾಂಶಗಳು

  • ಸುದೀಪ್ ಚುನಾವಣಾ ಕ್ಯಾಂಪೇನ್​ ಬಗ್ಗೆ ಮೂಡಿದೆ ಗೊಂದಲ
  • ಇನ್ನೂ ಪ್ರಚಾರಕ್ಕೆ ಇಳಿದಿಲ್ಲ ಕಿಚ್ಚ ಸುದೀಪ್
  • ಚುನಾವಣೆ ಬಳಿಕ ಮೂರು ಸಿನಿಮಾ ಘೋಷಿಸಲಿದ್ದಾರೆ ಸುದೀಪ್

ಚುನಾವಣಾ ದಿನಾಂಕ ಘೋಷಣೆ ಆದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದವು. ರಾಜಕೀಯ ನಾಯಕರು ಸ್ಟಾರ್ ಹೀರೋಗಳನ್ನು ಕರೆತರಲು ಪ್ಲ್ಯಾನ್ ರೂಪಿಸಿದರು. ಕಿಚ್ಚ ಸುದೀಪ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಹೇಳಿದರು. ಆದರೆ, ಈವರೆಗೆ ಸುದೀಪ್ (Kichcha Sudeep) ಕಣಕ್ಕೆ ಇಳಿದಿಲ್ಲ. ಸುದೀಪ್ ಚುನಾವಣಾ ಕ್ಯಾಂಪೇನ್ ಗೊಂದಲದಲ್ಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಚುನಾವಣೆಗೆ ಇನ್ನು ಕೆಲವೇ ಕೆಲವು ದಿನ ಉಳಿದುಕೊಂಡಿದೆ. ಹೀಗಿದ್ದರೂ ಅವರು ಪ್ರಚಾರಕ್ಕೆ ಏಕೆ ಇಳಿದಿಲ್ಲ ಎನ್ನುವ ಪ್ರಶ್ನೆ ಮೂಡಿದೆ.

ಏ.14ರಿಂದ ಪ್ರಚಾರ ಮಾಡ್ತಾರೆ ಎನ್ನಲಾಗಿತ್ತು..

ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ ಬೆನ್ನಲ್ಲೇ ಕಮಲ ಪಾಳಯಕ್ಕೆ ಬಲ ಸಿಕ್ಕಂತೆ ಆಗಿದೆ. ‘ಸಿಎಂ ಹೇಳಿದವರ ಪರವಾಗಿ ನಾನು ಪ್ರಚಾರ ಮಾಡ್ತೀನಿ’ ಎಂದು ಸುದೀಪ್ ಭರವಸೆ ನೀಡಿದ್ದಾರೆ. ಏಪ್ರಿಲ್ 14ರಿಂದ ಸುದೀಪ್ ಪ್ರಚಾರಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಈವರೆಗೆ ಕ್ಯಾಂಪೇನ್​ಗೆ ಇಳಿದಿಲ್ಲ.

ಇಂದಿನಿಂದ ಪ್ರಚಾರ?

ಸುದೀಪ್ ಅವರು ಇಂದಿನಿಂದ (ಏಪ್ರಿಲ್ 18) ನಿರಂತರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಧೋಳ ಹಾಗು ಬೀಳಗಿ ಕ್ಷೇತ್ರಗಳಲ್ಲಿ ಸುದೀಪ್ ಮತಬೇಟೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಸುದೀಪ್, ಅಪಪ್ರಚಾರದ ವಿರುದ್ಧ ಮುನ್ನೆಚ್ಚರಿಕೆ ಎಂದ ನಟ

ಇನ್ನೂ ಗೊಂದಲದಲ್ಲಿದ್ದಾರೆ ಸುದೀಪ್​?

ಕೆಲ ಮೂಲಗಳ ಮಾಹಿತಿ ಪ್ರಕಾರ ಸುದೀಪ್ ಕೊಂಚ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯಲ್ಲಿ ಪ್ರಚಾರ ಮಾಡಬೇಕು ಎಂಬುದಕ್ಕೆ ಇನ್ನೂ ರೂಟ್ ಮ್ಯಾಪ್ ಫಿಕ್ಸ್ ಆಗಿಲ್ಲ ಎಂಬುದು ಕೆಲವು ಮೂಲಗಳು ಮಾಹಿತಿ. ಪ್ರಚಾರಕ್ಕೆ ತೆರಳಿದಾಗ ಸುದೀಪ್ ರೋಡ್ ಶೋ ಮಾಡುತ್ತಾರಾ ಅಥವಾ ಮಾತಿನ ಮೂಲಕ ಮತಯಾಚನೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಚುನಾವಣೆ ಬಳಿಕ 3 ಸಿನಿಮಾ ಘೋಷಣೆ

ಈಗಾಗಲೇ ಸುದೀಪ್ ಮೂರು ಸಿನಿಮಾ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಸದ್ಯ ಇದರ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಚುನಾವಣೆಯ ಅಬ್ಬರ ಮುಗಿದ ಬಳಿಕ ಅವರು ಈ ಸಿನಿಮಾಗಳನ್ನು ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಬ್ರೇಕ್ ಪಡೆದಿದ್ದಾರೆ. ವೃತ್ತಿಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!