AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kotigobba 3 | ಕೋಟಿಗೊಬ್ಬನ ಎಂಟ್ರಿಗೆ ಮುಹೂರ್ತ ಫಿಕ್ಸ್.. ಇಂದು ಚಿತ್ರದ ಮೇಕಿಂಗ್ ರಿಲೀಸ್

ಲಾಕ್​ಡೌನ್​ನ ನಂತರ ಬಿಗ್ ಸ್ಟಾರ್​ಗಳ ಬಿಗ್ ಬಜೆಟ್ ಚಿತ್ರಗಳು ಅಭಿಮಾನಿಗಳಲ್ಲಿ ದೊಡ್ಡ ಕುತೂಹಲ ಹುಟ್ಟಿಸ್ತಿವೆ. ಹೀಗಾಗಿ ಸ್ಟಾರ್​ಗಳು ಕೂಡ ಟೈಂ ನೋಡ್ತಾನೇ, ಸಿನಿಮಾದ ಅಪ್​ಡೇಟ್​​ಗಳನ್ನ ನೀಡ್ತಾ ಫ್ಯಾನ್ಸ್ ಫಿದಾ ಮಾಡೋದಕ್ಕೆ ರೆಡಿಯಾಗಿದ್ದಾರೆ. ಸದ್ಯ ಕಿಚ್ಚ ಸುದೀಪ್ ಕೋಟಿಗೊಬ್ಬನಾಗಿ ಮತ್ತೆ ಕಮಾಲ್ ಮಾಡೋಕೆ ಸಿದ್ಧರಾಗಿದ್ದಾರೆ.

kotigobba 3 | ಕೋಟಿಗೊಬ್ಬನ ಎಂಟ್ರಿಗೆ ಮುಹೂರ್ತ ಫಿಕ್ಸ್.. ಇಂದು ಚಿತ್ರದ ಮೇಕಿಂಗ್ ರಿಲೀಸ್
ನಟ ಸುದೀಪ್
ಆಯೇಷಾ ಬಾನು
|

Updated on:Mar 07, 2021 | 7:26 AM

Share

ಗಾಂಧಿನಗರದಲ್ಲಿ ಬಿಗ್​ಸ್ಟಾರ್​ಗಳ ಸಾಲುಸಾಲು ಸಿನಿಮಾಗಳು ರಿಲೀಸ್​ಗೆ ರೆಡಿಯಾಗಿವೆ. ಲಾಕ್​ಡೌನ್ ನಂತರ ಥಿಯೇಟರ್​ಗಳಿಗೆ ಪ್ರೇಕ್ಷಕರನ್ನ ಕರೆತರೋಕೆ ಸ್ಟಾರ್ಸ್ ತಮ್ಮತಮ್ಮ ಚಿತ್ರಗಳ ಕುರಿತು ಕುತೂಹಲ ಹೆಚ್ಚಿಸೋ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈಗಾಗಲೇ ಪೊಗರು ರಿಲೀಸ್ ಆಗಿ ಶುಭಾರಂಭ ಮಾಡಿದೆ. ನಂತರ ರಾಬರ್ಟ್ ಕೂಡ ಬೆಳ್ಳಿ ಪರದೆ ಮೇಲೆ ಅಬ್ಬರಿಸೋಕೆ ಕೌಂಟ್​ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ಕೋಟಿಗೊಬ್ಬನ ಅವತಾರದಲ್ಲಿ ಬೆಳ್ಳಿ ಪರದೆ ಮೇಲೆ ಅಬ್ಬರಿಸಿ ಬೊಬ್ಬಿರಿಯೋಕೆ ಏಪ್ರಿಲ್ 29ರ ಮುಹೂರ್ತ ಫಿಕ್ಸ್ ಆಗಿದೆ.

ಅಂದಹಾಗೆ ಕಿಚ್ಚ ಸುದೀಪ್ ಕೋಟಿಗೊಬ್ಬನ ಅವತಾರದಲ್ಲಿ ಮತ್ತೆ ಎಂಟ್ರಿ ಆಗ್ತಿರೋದನ್ನ ಕಣ್ತುಂಬಿಕೊಳ್ಳೋದಕ್ಕೆ ಕೋಟ್ಯಂತರ ಅಭಿಮಾನಿ ಬಳಗ ಸಿದ್ಧವಾಗಿದೆ. ಈಗಾಗಲೇ ಕೋಟಿಗೊಬ್ಬನ 2 ಅವತಾರಗಳನ್ನು ಕಣ್ತುಂಬಿಕೊಂಡಿರೋ ಅಭಿಮಾನಿಗಳಿಗೆ ಏಪ್ರಿಲ್ 29 ಮತ್ತಷ್ಟು ಸ್ಪೆಷಲ್ ಆಗಿರಲಿದೆ. ಹಲವಾರು ವಿಶೇಷತೆಗಳ ಜತೆಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರೋ ಕೋಟಿಗೊಬ್ಬ-3 ಚಿತ್ರದ ಮೇಕಿಂಗ್ ಇಂದು ರಿಲೀಸ್ ಮಾಡ್ತಿದೆ ಚಿತ್ರತಂಡ. ಬೆಳಗ್ಗೆ 11 ಗಂಟೆಗೆ ಕೋಟಿಗೊಬ್ಬ ಸಿನಿಮಾದ ಮೇಕಿಂಗ್ ರಿಲೀಸ್ ಆಗಲಿದೆ. ಹೀಗಾಗಿ ಕಿಚ್ಚ ಸುದೀಪ್ ಅಭಿಮಾನಿಗಳು ಸಂಭ್ರಮಿಸೋಕೆ ಕೌಂಟ್​ಡೌನ್ ಶುರುವಾಗಿದೆ.

‘ಕೋಟಿಗೊಬ್ಬ-3’ ಚಿತ್ರದಲ್ಲಿ ನಟಿಸಿರೋ ಸುದೀಪ್, ಮತ್ತೊಮ್ಮೆ ಬಿಗ್ ಸ್ಕ್ರೀನ್​ನಲ್ಲಿ ಅಬ್ಬರಿಸಿ ಬೊಬ್ಬಿರಿಯಲು ಸಿದ್ಧರಾಗಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿ, ಸೂರಪ್ಪ ಬಾಬು ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿರೋ ಸಿನಿಮಾ ಇದಾಗಿದೆ. ಹೀಗಾಗಿ ಚಿತ್ರದ ಬಗ್ಗೆ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಾಗ್ತಿದೆ.

kotigobba 3

ನಟ ಸುದೀಪ್

ಇದನ್ನೂ ಓದಿ: Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ

Published On - 6:55 am, Sun, 7 March 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ