AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆರೆ ಬೇಟೆ’ ಚಿತ್ರತಂಡಕ್ಕೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

Kere Bete: ಪೋಸ್ಟರ್, ಟೀಸರ್​, ಟ್ರೈಲರ್​ಗಳಿಂದ ಗಮನ ಸೆಳೆದಿರುವ ‘ಕೆರೆ ಬೇಟೆ’ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದು, ಚಿತ್ರತಂಡಕ್ಕೆ ಕ್ಷಮೆ ಕೇಳಿದ್ದಾರೆ.

‘ಕೆರೆ ಬೇಟೆ’ ಚಿತ್ರತಂಡಕ್ಕೆ ಕ್ಷಮೆ ಕೇಳಿದ ಕಿಚ್ಚ ಸುದೀಪ್
Follow us
ಮಂಜುನಾಥ ಸಿ.
|

Updated on: Mar 06, 2024 | 2:27 PM

ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ ‘ಕೆರೆ ಬೇಟೆ’ (Kerebete). ಸಿನಿಮಾದ ಹೆಸರು, ಪೋಸ್ಟರ್, ಟೀಸರ್​ಗಳಿಂದಲೇ ಸಾಕಷ್ಟು ಗಮನವನ್ನು ಈ ಚಿತ್ರ ಸೆಳೆದಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು ಸಖತ್ ಟ್ರೆಂಡ್ ಆಗಿದೆ. ಬಹಳ ಭಿನ್ನವಾದ ಕತೆ, ನಿರೂಪಣೆಯನ್ನು ಈ ಸಿನಿಮಾ ಹೊಂದಿರುವುದನ್ನು ‘ಕೆರೆ ಬೇಟೆ’ ಟ್ರೈಲರ್ ಸಾರಿ ಹೇಳುತ್ತಿದೆ. ‘ಕೆರೆ ಬೇಟೆ’ ಸಿನಿಮಾದ ಟ್ರೈಲರ್​ಗೆ ಹಲವು ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೆ ನಟ ಕಿಚ್ಚ ಸುದೀಪ್, ‘ಕೆರೆ ಬೇಟೆ’ ಚಿತ್ರತಂಡದ ಬಳಿ ಕ್ಷಮೆ ಕೇಳಿದ್ದಾರೆ. ಅದಕ್ಕೆ ಕಾರಣವೂ ಇದೆ.

ವಿಡಿಯೋ ಮೂಲಕ ಮಾತನಾಡಿರುವ ನಟ ಕಿಚ್ಚ ಸುದೀಪ್, ‘ಕೆರೆ ಬೇಟೆ’ ಸಿನಿಮಾದ ಟ್ರೈಲರ್ ನೋಡಿದೆ ನಾನು. ನಮ್ಮ ದಿನಕರ್ ತೂಗುದೀಪ್ ಅವರ ಅರ್ಪಿಸುತ್ತಿರುವ, ಗೌರಿಶಂಕರ್ ನಟರಾಗಿ, ಜಯಶಂಕರ್ ನಿರ್ಮಾಣದ, ಜಯಣ್ಣ ಪಿಕ್ಚರ್ಸ್ ವಿತರಣೆ ಮಾಡಿ ರಾಜ್​ಗುರು ನಿರ್ದೇಶನ ಮಾಡಿರುವ ಈ ‘ಕೆರೆ ಬೇಟೆ’ ಸಿನಿಮಾವನ್ನು ತೆಗೆದಿರುವ ಶೈಲಿ ನನಗೆ ಬಹಳ ಇಷ್ಟವಾಯ್ತು. ಸಿನಿಮಾದ ಕತೆ, ಈ ಸಿನಿಮಾದ ಟ್ರೈಲರ್ ನೋಡುತ್ತಿದ್ದಂತೆ ಒಂದು ನಿರೀಕ್ಷೆ ಹುಟ್ಟುತ್ತದೆ ಆ ಅಂಶ ನನಗೆ ಬಹಳ ಹಿಡಿಸಿತು’ ಎಂದಿದ್ದಾರೆ.

ಇದನ್ನೂ ಓದಿ:ಕೆರೆ ಬೇಟೆ: ಮಲೆನಾಡ ಗೊಂಬೆಗೆ ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ

‘ನನ್ನ ಪ್ರಕಾರ ಟ್ರೈಲರ್ ಒಂದು ಈ ಹಂತಕ್ಕೆ ನಿರೀಕ್ಷೆಯನ್ನು ಮೂಡಿಸುತ್ತಿದೆ, ಭರವಸೆ ನೀಡುತ್ತಿದೆ ಎಂದರೆ ಆ ಸಿನಿಮಾ ಚೆನ್ನಾಗಿಯೇ ಇರುತ್ತದೆ. ಈ ಟ್ರೈಲರ್ ಅನ್ನು ನಾನು ಲಾಂಚ್ ಮಾಡಬೇಕಿತ್ತು. ಆದರೆ ನನಗೆ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನನಗೆ ಬರಲಾಗಲಿಲ್ಲ. ಈ ಕುರಿತು ಇಡೀ ತಂಡಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಸಿನಿಮಾ ತುಂಬಾ ಚೆನ್ನಾಗಿ ಪ್ರದರ್ಶನ ಕಾಣಲಿ, ದಿನಕರ್, ಜಯಣ್ಣ ನಿಮಗೆಲ್ಲ ಈ ಸಿನಿಮಾ ಲಾಭ ತಂದುಕೊಡಲಿ. ನಟರಾದ ಗೌರಿಶಂಕರ್, ನಿರ್ದೇಶಕ ರಾಜ್​ಗುರು ನಿಮಗೆಲ್ಲ ಈ ಸಿನಿಮಾ ದೊಡ್ಡ ಮಟ್ಟಿಗಿನ ಯಶಸ್ಸು ತಂದುಕೊಡಲಿ ಎಂದು ಹಾರೈಸುತ್ತೇನೆ. ‘ಗೌರಿ ಶಂಕರ್ ಅವರು ಚೆನ್ನಾಗಿ ನಟಿಸಿದ್ದಾರೆ. ಸ್ಕ್ರೀನ್​ ಮೇಲೆ ಚೆನ್ನಾಗಿ ಕಾಣುತ್ತಿದ್ದಾರೆ. ಇಡೀ ಚಿತ್ರತಂಡ ಬಹಳ ಚೆನ್ನಾಗಿ ಕೆಲಸ ಮಾಡಿರುವುದು ಟ್ರೈಲರ್​ನಲ್ಲಿ ಕಾಣುತ್ತಿದೆ. ಎಲ್ಲರಿಗೂ ಒಳ್ಳೆಯದಾಗಲಿ, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಲಿ’ ಎಂದು ಸುದೀಪ್ ಶುಭ ಹಾರೈಸಿದ್ದಾರೆ.

‘ಕೆರೆ ಬೇಟೆ’ ಸಿನಿಮಾ ತನ್ನ ಭಿನ್ನ ಕತೆ, ಭಿನ್ನ ನಿರೂಪಣೆ ಹಾಗೂ ಚಿತ್ರೀಕರಿಸಿರುವ ರೀತಿಯಿಂದ ಈಗಾಗಲೇ ಗಮನ ಸೆಳೆಯುತ್ತಿದೆ. ಮಲೆನಾಡ ಹಳ್ಳಿಯೊಂದರಲ್ಲಿ ನಡೆಯುವ ಕತೆ ಸಿನಿಮಾದಲ್ಲಿದೆ. ಒರಟು ನಾಯಕ, ಪ್ರೇಮಕಥೆ, ಮೇಲು-ಕೀಳು ಜಾತಿ ಸಂಘರ್ಷ, ಕಾಡಿನಲ್ಲಿ ನಡೆವ ಅಕ್ರಮಗಳು ಇನ್ನೂ ಹಲವು ವಿಷಯಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲುತ್ತಿದೆ. ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು