AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ

Hombale Films | Karthik Gowda: ಕಿಚ್ಚ ಸುದೀಪ್​ ಮತ್ತು ಕಾರ್ತಿಕ್​ ಗೌಡ ಅವರು ಜೊತೆಯಾಗಿ ಪೋಸ್​ ನೀಡಿದ್ದಾರೆ. ಸದ್ಯಕ್ಕಂತೂ ಈ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ
ಕಿಚ್ಚ ಸುದೀಪ್, ಕಾರ್ತಿಕ್ ಗೌಡ
TV9 Web
| Edited By: |

Updated on:Oct 06, 2022 | 12:31 PM

Share

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಸಾಕಷ್ಟು ಜನಪ್ರಿಯತೆ ಪಡೆದಿದೆ. ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ‘ಕಾಂತಾರ’ ರೀತಿಯ ಸಿನಿಮಾಗಳ ಮೂಲಕ ದೇಶಾದ್ಯಂತ ಈ ಸಂಸ್ಥೆಯ ಪ್ರತಿಷ್ಠೆ ಹೆಚ್ಚಿದೆ. ‘ಸಲಾರ್​’, ‘ಧೂಮಂ’ ಮುಂತಾದ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ. ಈಗ ಕಿಚ್ಚ ಸುದೀಪ್​ (Kichcha Sudeep) ನಟನೆಯ ಹೊಸ ಚಿತ್ರ ಕೂಡ ಇದೇ ಬ್ಯಾನರ್​ ಮೂಲಕ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ  (Karthik Gowda) ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸುದೀಪ್​ ಜೊತೆ ಪೋಸ್​ ನೀಡಿದ್ದಾರೆ. ‘ಹೊಸ ಆರಂಭಕ್ಕೆ ಕಿಚ್ಚ ಸುದೀಪ್​ ಸರ್​’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಚಿತ್ರರಂಗದಲ್ಲಿ ಇಂಥ ಫೋಟೋಗಳು ಕಾರಣ ಇಲ್ಲದೇ ಅಪ್​ಲೋಡ್​ ಆಗುವುದಿಲ್ಲ. ಹಾಗಾಗಿ, ಸುದೀಪ್​ ಅವರು ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಸದ್ಯಕ್ಕಂತೂ ಈ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
Image
Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಈ ವರ್ಷ ತೆರೆಕಂಡಿತು. ಆ ಬಳಿಕ ಅವರು ನಟಿಸುವ ಹೊಸ ಚಿತ್ರ ಯಾವುದು ಎಂಬ ಬಗ್ಗೆ ಇನ್ನೂ ಅಪ್​ಡೇಟ್​ ಸಿಕ್ಕಿಲ್ಲ. ಅದಕ್ಕೂ ಮುನ್ನವೇ ಕಾರ್ತಿಕ್​ ಗೌಡ ಜೊತೆ ಅವರು ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣ ಆಗಿದೆ.

ಈಗ ಪ್ಯಾನ್​ ಇಂಡಿಯಾ ಸಿನಿಮಾಗಳದ್ದೇ ಹವಾ. ಅಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕು ಎಂದರೆ ದೊಡ್ಡ ನಿರ್ಮಾಣ ಸಂಸ್ಥೆಗಳೇ ಮುಂದೆ ಬರಬೇಕು. ಕಿಚ್ಚ ಸುದೀಪ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಮುಂಬರುವ ಎಲ್ಲ ಸಿನಿಮಾಗಳೂ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ತಯಾರಾಗುವುದು ಗ್ಯಾರಂಟಿ. ಹಾಗಾಗಿ ‘ಹೊಂಬಾಳೆ ಫಿಲ್ಮ್ಸ್​’ ಜತೆ ಅವರು ಸಿನಿಮಾ ಮಾಡುತ್ತಾರೆ ಎಂದು ಎಲ್ಲರೂ ಊಹಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರು ಅನೌನ್ಸ್​ ಮಾಡಲಿರುವ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದಷ್ಟು ಬೇಗ ಸಿಹಿ ಸುದ್ದಿ ಸಿಗಲಿದೆ ಎಂಬ ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Thu, 6 October 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?