Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

Sudeep Fan Sakshi: ಸಾಕ್ಷಿಯನ್ನು ಕಿಚ್ಚ ಸುದೀಪ್​ ಅವರು ಭೇಟಿಯಾದ ವಿಡಿಯೋ ವೈರಲ್​ ಆಗಿದೆ. ಅವರ ಈ ಹೃದಯವಂತಿಕೆಗೆ ಅಭಿಮಾನಿಗಳು ಹ್ಯಾಟ್ಸಾಫ್​ ಹೇಳುತ್ತಿದ್ದಾರೆ.

Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​
ಸಾಕ್ಷಿ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಕಿಚ್ಚ ಸುದೀಪ್ ಅವರು ಮಾತನಾಡಿಸಿದ್ದಾರೆ
Follow us
|

Updated on: Jul 05, 2023 | 2:37 PM

ನಟ ಸುದೀಪ್​ (Kichcha Sudeep) ಅವರು ಸಿನಿಮಾದಲ್ಲಿ ಸಕ್ರಿಯವಾಗಿರುವುದು ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಾರೆ. ಅದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಈಗ ಮತ್ತೆ ಅಂಥದ್ದೇ ಘಟನೆ ನಡೆದಿದೆ. ಕ್ಯಾನ್ಸರ್​ನಿಂದ (Cancer) ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿಯನ್ನು ಸುದೀಪ್ ಅವರು ಭೇಟಿ ಮಾಡಿದ್ದಾರೆ. ಆಕೆಯ ಆರೋಗ್ಯ ವಿಚಾರಿಸಿದ್ದಾರೆ. ಉಡುಗೊರೆ ಮತ್ತು ಆಟೋಗ್ರಾಫ್​ ನೀಡುವ ಮೂಲಕ ಆ ಪುಟ್ಟ ಅಭಿಮಾನಿಯ (Sudeep Fan Sakshi) ಮುಖದಲ್ಲಿ ನಗು ಮೂಡುವಂತೆ ಮಾಡಿದ್ದಾರೆ ಕಿಚ್ಚ ಸುದೀಪ್​. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಿಚ್ಚ ಸುದೀಪ್ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ನಟನನ್ನು ಒಮ್ಮೆಯಾದರೂ ಭೇಟಿಯಾಗಬೇಕು ಎಂಬುದು ಎಲ್ಲ ಅಭಿಮಾನಿಗಳ ಆಸೆ. ಆದರೆ ಎಲ್ಲರಿಗೂ ಅಂಥ ಅವಕಾಶ ಸಿಗುವುದಿಲ್ಲ. ತಮ್ಮ ವಿಶೇಷ ಅಭಿಮಾನಿಗಳ ಬಗ್ಗೆ ಸುದೀಪ್​ ಅವರು ಯಾವಾಗಲೂ ಕಾಳಜಿ ವಹಿಸುತ್ತಾರೆ. ಬಾಲಕಿ ಸಾಕ್ಷಿ ಕೂಡ ಅಂಥ ಓರ್ವ ಅಭಿಮಾನಿ. ಆಕೆಯ ಬಯಕೆಯನ್ನು ತಿಳಿದುಕೊಂಡ ಸುದೀಪ್​ ಅವರು ಆಸ್ಪತ್ರೆಗೆ ತೆರಳಿ ಭೇಟಿ ಮಾಡಿದ್ದಾರೆ.

ಸಾಕ್ಷಿ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಕಿಚ್ಚ ಸುದೀಪ್ ಅವರು ಮಾತನಾಡಿಸಿದ್ದಾರೆ. ಬೆಂಗಳೂರಿನ ‘ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ’ದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಸಾಕ್ಷಿಯ ಜೊತೆ ಸುದೀಪ್​ ಅವರು ಸಮಯ ಕಳೆದಿದ್ದಾರೆ. ಆಕೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಒಂದಷ್ಟು ಗಿಫ್ಟ್​ಗಳ ಜೊತೆಗೆ ಆಟೋಗ್ರಾಫ್​ ನೀಡಿದ್ದಾರೆ. ಇದರಿಂದ ಸಾಕ್ಷಿ ಮುಖದಲ್ಲಿ ನಗು ಮೂಡಿದೆ. ಆಕೆಯ ಬಹುದಿನಗಳ ಕನಸು ನನಸಾಗಿದೆ.

ಇದನ್ನೂ ಓದಿ: Kichcha Sudeep: ‘ನನ್ನ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಬೇಡಿ’: ಖಡಕ್​ ಎಚ್ಚರಿಗೆ ನೀಡಿದ ಕಿಚ್ಚ ಸುದೀಪ್

‘ಸುದೀಪ್ ಸರ್ ಎಂದರೆ ನನಗೆ ಬಹಳ ಇಷ್ಟ. ‘ರನ್ನ’ ಚಿತ್ರದ ‘ಥಿತಲಿ..’ ಹಾಡು ನನ್ನ ಫೇವರಿಟ್​’ ಎಂದಿದ್ದಾಳೆ ಸಾಕ್ಷಿ. ತನ್ನ ನೆಚ್ಚಿನ ನಟನನ್ನು ಭೇಟಿಯಾಗಿದ್ದಕ್ಕೆ ಸಾಕ್ಷಿಗೆ ತುಂಬ ಖುಷಿ ಆಗಿದೆ. ಕಿಚ್ಚ ಸುದೀಪ್​ ಅವರ ಈ ಹೃದಯವಂತಿಕೆಗೆ ಅಭಿಮಾನಿಗಳು ಹ್ಯಾಟ್ಸಾಫ್​ ಹೇಳುತ್ತಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಸಿನಿಮಾ ವಿಚಾರಕ್ಕೆ ಬರೋದಾದರೆ ಸುದೀಪ್​ ನಟನೆಯ 46ನೇ ಚಿತ್ರದ ಕೆಲಸಗಳು ಆರಂಭ ಆಗಿವೆ. ಇತ್ತೀಚೆಗೆ ಈ ಚಿತ್ರದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ