AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್ ಕೂಡ ಒಬ್ಬರು; ಕಿಚ್ಚನ ಒಟ್ಟೂ ಆಸ್ತಿ ಎಷ್ಟು?

ಕಿಚ್ಚ ಸುದೀಪ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಪ್ರತಿ ಚಿತ್ರಕ್ಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಸುದೀಪ್ ಅವರು ಕನ್ನಡದ ಶ್ರೀಮಂತರ ನಟರಲ್ಲಿ ಒಬ್ಬರು. ಅವರು ನೂರಾರು ಕೋಟಿ ರೂಪಾಯಿಯ ಒಡೆಯ. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ.

ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್ ಕೂಡ ಒಬ್ಬರು; ಕಿಚ್ಚನ ಒಟ್ಟೂ ಆಸ್ತಿ ಎಷ್ಟು?
ಸುದೀಪ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jul 10, 2024 | 11:46 AM

ಕಿಚ್ಚ ಸುದೀಪ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಿರ್ದೇಶಕರಾಗಬೇಕು ಎಂಬ ಕನಸಿನೊಂದಿಗೆ ಬಂದ ಅವರು ಆಗಿದ್ದು ಹೀರೋ. ಆ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟರು. ನಿರ್ಮಾಪಕ ಕೂಡ ಆದರು. ಈಗಲೂ ಕಿಚ್ಚನಿಗೆ ಡೈರೆಕ್ಷನ್ ಎಂದರೆ ಹೆಚ್ಚು ಇಷ್ಟ. ಸುದೀಪ್ ಅವರು ಕನ್ನಡದ ಶ್ರೀಮಂತರ ನಟರಲ್ಲಿ ಒಬ್ಬರು. ಹಾಗಾದರೆ ಸುದೀಪ್ ಅವರ ಒಟ್ಟು ಆಸ್ತಿ ಎಷ್ಟು? ವರದಿ ಏನು ಹೇಳುತ್ತದೆ? ನೋಡೋಣ

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ಸುದೀಪ್ ಅವರ ಒಟ್ಟೂ ಆಸ್ತಿ ಸರಿಸುಮಾರು 125 ಕೋಟಿ ರೂಪಾಯಿ. ಸಿನಿಮಾಗಳಿಂದ, ಬ್ರ್ಯಾಂಡ್​ಗಳ ಪ್ರಚಾರದಿಂದ ಸುದೀಪ್​ಗೆ ಹಣ ಬರುತ್ತಿದೆ. ಅವರು ಐಷಾರಾಮಿ ಜೀವನ ನಡೆಸುತ್ತಾ ಇದ್ದಾರೆ. ಅವರ ಬಳಿಕ ಹಲವು ಕಾರುಗಳು ಕೂಡ ಇವೆ. ಅವರು ಪ್ರತಿ ಚಿತ್ರಕ್ಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ.

ಸುದೀಪ್ ಅವರು ಬೆಂಗಳೂರಿನಲ್ಲಿ ಸ್ವಂತ ಬಂಗಲೆ ಹೊಂದಿದ್ದಾರೆ. ಇದರ ಬೆಲೆ 20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅವರು ಅನೇಕ ಕಡೆಗಳಲ್ಲಿ ಜಾಗ ಖರೀದಿ ಮಾಡಿದ್ದಾರೆ. ಮುಂಬೈನಲ್ಲಿ ಸುದೀಪ್ ಅವರು ಫಾರ್ಮ್​ಹೌಸ್ ಹೊಂದಿದ್ದಾರೆ ಎಂದು ಹೇಳಲಾಗಿದೆ. ಈ ಜಾಗಗಳ ಬೆಲೆ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ.

ಸುದೀಪ್ ಅವರು ನಿರ್ಮಾಪಕ ಕೂಡ ಹೌದು. ಸುದೀಪ್ ಅವರು ‘ಕಿಚ್ಚ ಕ್ರಿಯೇಷನ್ಸ್’ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಇದರ ಮೂಲಕ ಅವರು ಸಿನಿಮಾ ನಿರ್ಮಾಣ ಮಾಡುತ್ತಾರೆ. ಹಲವು ಚಿತ್ರಗಳಿಗೆ  ಅವರು ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ‘ನಾನು ಜೀವನದಲ್ಲಿ ಬಾಸ್ ಎಂದು ಕರೆಯೋದು ಇಬ್ಬರಿಗೆ ಮಾತ್ರ’; ಕಿಚ್ಚ ಸುದೀಪ್

ಸುದೀಪ್ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಾರೆ. ಅವರು ಪ್ರತಿ ಬ್ರ್ಯಾಂಡ್​ನ ಪ್ರಚಾರ ರಾಯಭಾರಿ ಆಗಲು ಬರೋಬ್ಬರಿ 5 ಕೋಟಿ ರೂಪಾಯಿ ಪಡೆಯುತ್ತಾರೆ. ಸುದೀಪ್ ಅವರಿಗೆ ಕಾರುಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಟೊಯೊಟಾ ವೆಲ್​ಫೈರ್, ಲ್ಯಾಂಬೋರ್ಗಿನಿ, ಸ್ಲೀಕ್ ಹಮ್ಮರ್ 3, ಸಲ್ಮಾನ್ ಖಾನ್ ಉಡುಗೆಯಾಗಿ ನೀಡಿದ ಬಿಎಂಡಬ್ಲ್ಯೂ, ಜೀಪ್ ಕಂಪಾಸ್ ಕಾರುಗಳನ್ನು ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:31 am, Wed, 10 July 24

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ