AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಬರ್ತ್​​ಡೇ ಅನೂಪ್ ಭಂಡಾರಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್

ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರು ಮತ್ತೆ ಒಂದಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಬರ್ತ್​​ಡೇ ಅನೂಪ್ ಭಂಡಾರಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Aug 29, 2024 | 10:49 AM

Share

ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸುದೀಪ್ ಬರ್ತ್​ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ‘ಬಿಲ್ಲ ರಂಗ ಭಾಷ’ ಸಿನಿಮಾ ಕುರಿತ ಅಪ್​ಡೇಟ್ ಇರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

ಅನೂಪ್ ಭಂಡಾರಿ ಅವರು ‘ರಂಗಿ ತರಂಗ’ ಸಿನಿಮಾ ಮೂಲಕ ಎಲ್ಲರ ಮೆಚ್ಚುಗೆ ಪಡೆದರು. ಆ ಬಳಿಕ ‘ರಾಜರಥ’ ಹೆಸರಿನ ಸಿನಿಮಾ ಮಾಡಿದರು. ಇದಾದ ಬಳಿಕ ಸುದೀಪ್ ಜೊತೆ ಸೇರಿ ಅವರು ‘ವಿಕ್ರಾಂತ್​ ರೋಣ’ ಸಿನಿಮಾ ಮಾಡಿದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಮತ್ತೊಮ್ಮೆ ಅವರು ಅನೂಪ್ ಜೊತೆ ಕೆಲಸ ಮಾಡಲು ಮುಂದಾಗಿದ್ದಾರೆ.

ಅನೂಪ್ ಹಾಗೂ ಸುದೀಪ್ ಮತ್ತೊಮ್ಮೆ ಒಂದಾಗುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿರಲಿಲ್ಲ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸುದೀಪ್ ಅವರಿಗೆ ಸೆಪ್ಟೆಂಬರ್ 2ರಂದು ಜನ್ಮದಿನ. ಈ ವಿಶೇಷ ದಿನದಂದು ಸುದೀಪ್ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ. ‘ಬಿಲ್ಲ ರಂಗ ಭಾಷಾ’ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ‘ಈಗ 2’ ಮಾಡೋದು ಯಾವಾಗ? ಸುದೀಪ್ ಇರ್ತಾರಾ? ನಾನಿ ಕೊಟ್ಟರು ಉತ್ತರ

ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆಯೂ ಏನಾದರೂ ಅಪ್​ಡೇಟ್ ಸಿಗಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:48 am, Thu, 29 August 24

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು