AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಹೊಸ ಸಿನಿಮಾ ಬಗ್ಗೆ ತೆಲುಗು ರಿಯಾಲಿಟಿ ಶೋನಲ್ಲಿ ಸುದ್ದಿ ಲೀಕ್

Kichcha Sudeep movies: ಕಿಚ್ಚ ಸುದೀಪ್ ಅವರು ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಮತ್ತು ‘ಮಾರ್ಕ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಸುದೀಪ್ ಅವರ ಮತ್ತೊಂದು ಹೊಸ ಸಿನಿಮಾದ ಬಗ್ಗೆ ತೆಲುಗು ರಿಯಾಲಿಟಿ ಶೋನಲ್ಲಿ ಸುದ್ದಿ ಲೀಕ್ ಆಗಿದೆ. ಯಾವುದು ಆ ಸಿನಿಮಾ? ಸುದೀಪ್ ಅವರ ಹೊಸ ಸಿನಿಮಾ ನಿರ್ದೇಶಿಸುತ್ತಿರುವುದು ಯಾವ ನಿರ್ದೇಶಕ? ಇಲ್ಲಿದೆ ಮಾಹಿತಿ...

ಸುದೀಪ್ ಹೊಸ ಸಿನಿಮಾ ಬಗ್ಗೆ ತೆಲುಗು ರಿಯಾಲಿಟಿ ಶೋನಲ್ಲಿ ಸುದ್ದಿ ಲೀಕ್
Sudeep
ಮಂಜುನಾಥ ಸಿ.
|

Updated on:Oct 21, 2025 | 7:15 PM

Share

ಕಿಚ್ಚ ಸುದೀಪ್ (Sudeep) ಪ್ರಸ್ತುತ ಬಿಗ್​​ಬಾಸ್ ಕನ್ನಡ ನಿರೂಪಣೆ ಜೊತೆಗೆ ಅನೂಪ್ ಭಂಡಾರಿ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅದರ ಜೊತೆಗೆ ‘ಮಾರ್ಕ್’ ಹೆಸರಿನ ಹೊಸ ಸಿನಿಮಾ ಸಹ ಪ್ರಾರಂಭಿಸಿದ್ದಾರೆ. ಸುದೀಪ್ ಅವರು ತಮ್ಮ ಸಿನಿಮಾಗಳ ಘೋಷಣೆಯನ್ನು ಸ್ವತಃ ತಾವೇ ಮಾಡುತ್ತಾರೆ. ಅದೂ ಸಿನಿಮಾದ ಚಿತ್ರೀಕರಣ ಶುರು ಆಗುವ ಸಮಯದಲ್ಲಿ ಮಾತ್ರವೇ ಸಿನಿಮಾದ ಬಗ್ಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಆದರೆ ಇದೀಗ ಸುದೀಪ್ ಅವರ ಹೊಸ ಸಿನಿಮಾದ ಸುದ್ದಿ ತೆಲುಗು ರಿಯಾಲಿಟಿ ಶೋ ಒಂದರಿಂದ ಲೀಕ್ ಆಗಿದೆ.

ತೆಲುಗಿನಲ್ಲಿ ಹಲವಾರು ಸಿಂಗಿಂಗ್ ರಿಯಾಲಿಟಿ ಶೋ ನಡೆಯುತ್ತವೆ. ಅದರಲ್ಲಿ ತೆಲುಗು ಇಂಡಿಯನ್ ಐಡಲ್ ಸಹ ಒಂದು. ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಅವರು ಈ ಶೋನ ಜಡ್ಜ್​​ಗಳಲ್ಲಿ ಒಬ್ಬರಾಗಿದ್ದಾರೆ. ತೆಲುಗು ಇಂಡಿಯನ್ ಐಡಲ್ ಶೋನಲ್ಲಿ ಕರ್ನಾಟಕದ ಯುವಕ ದರ್ಶನ್ ನಾರಾಯಣ್ ಸ್ಪರ್ಧಿ ಆಗಿದ್ದಾರೆ. ಇತ್ತೀಚೆಗೆ ಅವರು ವೇದಿಕೆ ಮೇಲೆ ‘ಕಿರಿಕ್ ಪಾರ್ಟಿ’ ತೆಲುಗು ಸಿನಿಮಾದ ಹಾಡೊಂದನ್ನು ಹಾಡಿದರು. ದರ್ಶನ್ ಹಾಡಿದ ರೀತಿ ಜಡ್ಜ್​​ಗಳಿಗೆ ಬಹಳ ಇಷ್ಟವಾಯ್ತು.

ಜಡ್ಜ್​​ಗಳಲ್ಲಿ ಒಬ್ಬರಾಗಿರುವ ಎಸ್ ತಮನ್, ದರ್ಶನ್ ಅವರ ಹಾಡುಗಾರಿಕೆಯನ್ನು ಕೊಂಡಾಡುತ್ತಾ, ‘ನಾನು ಮುಂದಿನ ಸಿನಿಮಾ ಕನ್ನಡದಲ್ಲಿ ಮಾಡುತ್ತಿದ್ದೇನೆ. ಸಂತೋಶ್ ಆನಂದ್​​ರಾಮ್ ನಿರ್ದೇಶನ, ಸುದೀಪ್ ಅವರು ನಾಯಕ. ನೀವು ಆ ಸಿನಿಮಾನಲ್ಲಿ ಒಂದು ಹಾಡು ಹಾಡಬೇಕು. ವಿಜಯ್​​ಪ್ರಕಾಶ್ ಅವರನ್ನು ಸಹ ನಾನು ರೆಕಾರ್ಡಿಂಗ್​​ಗೆ ಕರೆಯುತ್ತೀನಿ’ ಎಂದು ಹೇಳಿದ್ದಾರೆ. ಇದು ಸಹಜವಾಗಿಯೇ ದರ್ಶನ್ ನಾರಾಯಣ್​​ಗೆ ಖುಷಿ ತಂದಿದೆ. ಸುದೀಪ್ ಅಭಿಮಾನಿಗಳಿಗೆ ಇನ್ನಷ್ಟು ಖುಷಿ ತಂದಿದೆ.

ಅಸಲಿಗೆ ಸಂತೋಶ್ ಆನಂದ್​​ರಾಮ್ ಜೊತೆಗೆ ಸುದೀಪ್ ಸಿನಿಮಾ ಮಾಡುತ್ತಿರುವುದು ಗುಟ್ಟಾಗಿಯೇ ಇತ್ತು. ಇದೀಗ ತೆಲುಗು ರಿಯಾಲಿಟಿ ಶೋನಲ್ಲಿ ಸುದ್ದಿ ಹೊರಬಿದ್ದಿದೆ. ‘ರಾಮಾಚಾರಿ’, ‘ರಾಜಕುಮಾರ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಸಂತೋಶ್​​ ಆನಂದ್​​ರಾಮ್ ಇದೀಗ ಸುದೀಪ್ ಜೊತೆಗೆ ಕೈ ಜೋಡಿಸಿದ್ದಾರೆ. ಸುದೀಪ್ ಹಾಗೂ ಸಂತೋಶ್ ಆನಂದ್​​ರಾಮ್ ಸಿನಿಮಾಕ್ಕೆ ಹೊಂಬಾಳೆ ಬಂಡವಾಳ ಹೂಡುವ ಸಾಧ್ಯತೆ ಇದೆ.

ಸುದೀಪ್ ಅವರು ಪ್ರಸ್ತುತ ಅನೂಪ್ ಭಂಡಾರಿ ನಿರ್ದೇಶಿಸುತ್ತಿರುವ ‘ಬಿಲ್ಲ ರಂಗ ಭಾಷಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ‘ಮಾರ್ಕ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮ್ಯಾಕ್ಸ್’ ಚಿತ್ರತಂಡವೇ ಈಗ ‘ಮಾರ್ಕ್’ ಸಿನಿಮಾನಲ್ಲಿಯೂ ಇದೆ. ಇವೆರಡರ ಬಳಿಕ ಬಹುಷಃ ಸಂತೋಶ್ ಆನಂದ್​​ರಾಮ್ ಜೊತೆಗಿನ ಸಿನಿಮಾಕ್ಕೆ ಚಾಲನೆ ಸಿಗಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Tue, 21 October 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ