AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ​ತಮಿಳು ನಿರ್ಮಾಪಕರ ಜೊತೆ ಕಿಚ್ಚ ಸುದೀಪ್​ ಸಿನಿಮಾ; ಕೇಳಿಬಂತು ಬಿಗ್​ ನ್ಯೂಸ್​

Kichcha Sudeep Next Movie: ಕಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆ ಜೊತೆಗೆ ಕಿಚ್ಚ ಸುದೀಪ್​ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಬಗ್ಗೆ ಇಲ್ಲಿದೆ ವಿವರ..

Kichcha Sudeep: ​ತಮಿಳು ನಿರ್ಮಾಪಕರ ಜೊತೆ ಕಿಚ್ಚ ಸುದೀಪ್​ ಸಿನಿಮಾ; ಕೇಳಿಬಂತು ಬಿಗ್​ ನ್ಯೂಸ್​
ಕಿಚ್ಚ ಸುದೀಪ್
TV9 Web
| Edited By: |

Updated on: Dec 06, 2022 | 11:49 AM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರ ಮುಂದಿನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಈ ವರ್ಷ ಅವರು ನಟಿಸಿದ ‘ವಿಕ್ರಾಂತ್​ ರೋಣ’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಯಿತು. ಆ ಬಳಿಕ ಅವರು ಹೊಸ ಸಿನಿಮಾ (Kichcha Sudeep New Movie) ಬಗ್ಗೆ ಯಾವುದೇ ಅನೌನ್ಸ್​ಮೆಂಟ್​ ಮಾಡಿಲ್ಲ. ಈಗ ಒಂದು ಸ್ಪೆಷಲ್​ ನ್ಯೂಸ್​ ಕೇಳಿಬಂದಿದೆ. ಕಿಚ್ಚ ಸುದೀಪ್​ ನಟಿಸಲಿರುವ ಹೊಸ ಚಿತ್ರಕ್ಕೆ ಕಾಲಿವುಡ್​ (Kollywood) ನಿರ್ಮಾಪಕರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಇದು ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗಲಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ತಮಿಳು ಚಿತ್ರರಂಗದ ದೊಡ್ಡ ನಿರ್ಮಾಣ ಸಂಸ್ಥೆ ಜೊತೆ ಕಿಚ್ಚ ಸುದೀಪ್​ ಕೈ ಜೋಡಿಸುವ ಸಾಧ್ಯತೆ ಕುರಿತು ‘ಟೈಮ್ಸ್ ಆಫ್​ ಇಂಡಿಯಾ’ ವರದಿ ಮಾಡಿದೆ.

ಇದು ಪ್ಯಾನ್​ ಇಂಡಿಯಾ ಸಿನಿಮಾಗಳ ಜಮಾನಾ. ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಬಹುಕೋಟಿ ರೂಪಾಯಿ ಬಂಡವಾಳ ಸುರಿದು ಹಲವು ಭಾಷೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತಿವೆ. ಎಲ್ಲ ಸ್ಟಾರ್ ನಟರ ಸಿನಿಮಾಗಳು ಇದೇ ಮಾದರಿಯಲ್ಲಿ ತಯಾರಾಗುತ್ತಿವೆ. ಇತ್ತೀಚೆಗೆ ತಮಿಳುನಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಯಿತು. ಆ ಚಿತ್ರದ ನಿರ್ಮಾಪಕರ ಜೊತೆ ಸುದೀಪ್​ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

ಇದನ್ನೂ ಓದಿ: Kichcha Sudeep: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುದೀಪ್​-ಪ್ರಿಯಾ ದಂಪತಿ

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​

ತಮಿಳಿನಲ್ಲಿ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಸಾಕಷ್ಟು ಖ್ಯಾತಿ ಹೊಂದಿದೆ. ರಜನಿಕಾಂತ್​ ನಟನೆಯ ‘2.0’, ದಳಪತಿ ವಿಜಯ್​ ನಟನೆಯ ‘ಕತ್ತಿ’, ಬಹುತಾರಾಗಣದ ‘ಪೊನ್ನಿಯಿನ್​ ಸೆಲ್ವನ್​’ ಮುಂತಾದ ಚಿತ್ರಗಳು ಈ ಬ್ಯಾನರ್​ನಿಂದ ನಿರ್ಮಾಣ ಆಗಿವೆ. ಕಮಲ್​ ಹಾಸನ್​ ನಟನೆಯ ‘ಇಂಡಿಯನ್​ 2’ ಸಿನಿಮಾ ಕೂಡ ಇದೇ ಸಂಸ್ಥೆಯಡಿಯಲ್ಲಿ ತಯಾರಾಗುತ್ತಿದೆ. ಕೆಲವು ತೆಲುಗು ಚಿತ್ರಗಳನ್ನೂ ಮಾಡಿರುವ ಈ ಸಂಸ್ಥೆ ಈಗ ಕನ್ನಡಕ್ಕೆ ಎಂಟ್ರಿ ನೀಡುತ್ತಿದೆ.

ಇದನ್ನೂ ಓದಿ: Kichcha Sudeep: ಪಿವಿಆರ್​ ಹೊಸ ಮಲ್ಟಿಪ್ಲೆಕ್ಸ್​ ಆವರಣದಲ್ಲಿ ಕನ್ನಡ ನಟರ ಫೋಟೋ ಇಲ್ಲ; ಸುದೀಪ್​ ಪ್ರತಿಕ್ರಿಯೆ ಏನು?

ಸುದೀಪ್​ ಅವರ ಹೊಸ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ? ನಿರ್ದೇಶನ ಮಾಡೋದು ಯಾರು? ತೆರೆ ಹಿಂದೆ ಕೆಲಸ ಮಾಡಲಿರುವ ತಂತ್ರಜ್ಞರು ಯಾರು? ಸದ್ಯ ಈ ಯಾವ ಪ್ರಶ್ನೆಗಳಿಗೂ ಉತ್ತರ ಸಿಕ್ಕಿಲ್ಲ. 2023ರ ಜನವರಿಯಲ್ಲಿ ಈ ಚಿತ್ರ ಸೆಟ್ಟೇರುವ ನಿರೀಕ್ಷೆ ಇದೆ ಎನ್ನಲಾಗಿದೆ. ಸುದೀಪ್​ ಅವರು ಸದ್ಯ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ನಡೆಸಿಕೊಡುತ್ತಿದ್ದಾರೆ. ಅದು ಜನವರಿಗೆ ವೇಳೆಗೆ ಮುಕ್ತಾಯ ಆಗಲಿದೆ. ಆ ಬಳಿಕ ಹೊಸ ಚಿತ್ರದ ಕೆಲಸಗಳಲ್ಲಿ ಸುದೀಪ್​ ತೊಡಗಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ