AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮುಂದಿನ ಚಿತ್ರದ ಬಗ್ಗೆ ಸಿಕ್ತು ಅಪ್​ಡೇಟ್​; ಕೆಆರ್​ಜಿ ಜತೆ ಕಿಚ್ಚನ ಸಿನಿಮಾ?

Kichcha Sudeep Next Movie: ಸುದೀಪ್ ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ಸದ್ದು ಮಾಡಿತು. ಈ ಚಿತ್ರವನ್ನು ಫ್ಯಾನ್ಸ್ ಇಷ್ಟಪಟ್ಟರು. ಈಗ ಸುದೀಪ್ ಮತ್ತೊಂದು ಚಿತ್ರದ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

ಸುದೀಪ್ ಮುಂದಿನ ಚಿತ್ರದ ಬಗ್ಗೆ ಸಿಕ್ತು ಅಪ್​ಡೇಟ್​; ಕೆಆರ್​ಜಿ ಜತೆ ಕಿಚ್ಚನ ಸಿನಿಮಾ?
ಕೆಆರ್​ಜಿ ಸ್ಟುಡಿಯೋದವರ ಜತೆ ಸುದೀಪ್
TV9 Web
| Edited By: |

Updated on:Jan 17, 2023 | 10:17 AM

Share

ಕಳೆದ ವರ್ಷ ತೆರೆಗೆ ಬಂದ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie)  ಬಳಿಕ ಕಿಚ್ಚ ಸುದೀಪ್ ಅವರು ಯಾವುದೇ ಹೊಸ ಚಿತ್ರ ಘೋಷಣೆ ಮಾಡಿಲ್ಲ. ಬಿಗ್ ಬಾಸ್ ಆ್ಯಂಕರಿಂಗ್​​ನಲ್ಲಿ ಅವರು ಬ್ಯುಸಿ ಆದರು. ಉಪೇಂದ್ರ ನಟನೆಯ ‘ಕಬ್ಜ’ (Kabza Movie) ಹೊರತುಪಡಿಸಿ ಮತ್ತಾವುದೇ ಸಿನಿಮಾ ಅವರ ಕೈಯಲ್ಲಿ ಇಲ್ಲ. ಸುದೀಪ್ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಇತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಕೆಆರ್​ಜಿ ಸ್ಟುಡಿಯೋಸ್​’ ಜತೆ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಕೆಆರ್​ಜಿ ಸ್ಟುಡಿಯೋಸ್​​ನ ಕಾರ್ತಿಕ್ ಗೌಡ ಹಾಗೂ ಸುದೀಪ್ (Sudeep) ಒಟ್ಟಾಗಿ ಇರುವ ಫೋಟೋ ವೈರಲ್ ಆಗಿದೆ.

ಸುದೀಪ್ ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ಸದ್ದು ಮಾಡಿತು. ಈ ಚಿತ್ರವನ್ನು ಫ್ಯಾನ್ಸ್ ಇಷ್ಟಪಟ್ಟರು. ಈ ಸಿನಿಮಾ ಇತ್ತೀಚೆಗೆ ಸದ್ದು ಮಾಡಿದೆ. ಅದಕ್ಕೆ ಕಾರಣ ಈ ಚಿತ್ರ ಆಸ್ಕರ್​​ ಅರ್ಹತೆ ಸುತ್ತಿಗೆ ಆಯ್ಕೆ ಆಗಿದೆ. ಈ ಖುಷಿಯ ಬೆನ್ನಲ್ಲೇ ಸುದೀಪ್ ಮತ್ತೊಂದು ಚಿತ್ರದ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

‘ಕೆಆರ್​ಜಿ ಸ್ಟುಡಿಯೋಸ್​​’ 2017ರಲ್ಲಿ ಸ್ಥಾಪನೆ ಆಯಿತು. ಹಲವು ಸಿನಿಮಾಗಳನ್ನು ಕೆಆರ್​ಜಿ ಹಂಚಿಕೆ ಮಾಡಿದೆ. ‘ಆಪರೇಷನ್ ಅಲಮೇಲಮ್ಮ’, ‘ಕೆಜಿಎಫ್ ಚಾಪ್ಟರ್ 1’, ‘ಕೆಜಿಎಫ್ ಚಾಪ್ಟರ್ 2’ ಸೇರಿ ಅನೇಕ ಚಿತ್ರಗಳನ್ನು ಹಂಚಿಕೆ ಮಾಡಿದ ಖ್ಯಾತಿ ಈ ಸಂಸ್ಥೆಗೆ ಇದೆ. ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಇವರು ನಿರ್ಮಾಣಕ್ಕೂ ಇಳಿದಿದ್ದಾರೆ. ಈಗ ಸುದೀಪ್ ಚಿತ್ರಕ್ಕೆ ಬಂಡವಾಳ ಹೂಡಲು ಕಾರ್ತಿಕ್ ಗೌಡ ಮುಂದೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

ಇದನ್ನೂ ಓದಿ: Kichcha Sudeep: ಸುದೀಪ್​ ರಾಜಕೀಯ ಎಂಟ್ರಿ ಬಗ್ಗೆ ಗುಸುಗುಸು; ಯಾವುದೇ ಪ್ರತಿಕ್ರಿಯೆ ನೀಡದ ಕಿಚ್ಚ

ಹಾಗಾದರೆ ಈ ಚಿತ್ರಕ್ಕೆ ಡೈರೆಕ್ಷನ್ ಯಾರದ್ದು? ಆ ಪ್ರಶ್ನೆಗೂ ಉತ್ತರ ಇದೆ. ಕಿಚ್ಚನ ಚಿತ್ರಕ್ಕೆ ನಂದ ಕಿಶೋರ್ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಮೊದಲು ‘ರನ್ನ’ ಹಾಗೂ ‘ಮುಕುಂದ ಮುರಾರಿ’ ಸಿನಿಮಾದಲ್ಲಿ ಸುದೀಪ್ ಹಾಗೂ ನಂದಕಿಶೋರ್ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ ಮತ್ತೆ ಒಂದಾಗುತ್ತಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:16 am, Tue, 17 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು