AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

ಇಂದು ಅನಾರೋಗ್ಯದ ಬಗ್ಗೆ  ಸುದೀಪ್​ ಟ್ವೀಟ್​ ಮಾಡಿದ್ದರು. ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ ಎಂದಿದ್ದರು.

Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Apr 17, 2021 | 9:15 AM

Share

ನಟ ಕಿಚ್ಚ ಸುದೀಪ್​ ಇಂದು ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ತಮಗೆ ಅನಾರೋಗ್ಯ ಇರುವ ಬಗ್ಗೆ ಹೇಳಿಕೊಂಡಿದ್ದರು. ಈ ಟ್ವೀಟ್​ ನೋಡಿ ಎಲ್ಲರೂ ಸುದೀಪ್​ಗೆ ಕೊರೊನಾ ಪಾಸಿಟಿವ್​ ಎಂದೇ ಭಾವಿಸಿದ್ದರು. ಆದರೆ, ಸುದೀಪ್​ಗೆ ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಅವರ ಮ್ಯಾನೇಜರ್​ ಜಾಕ್​ ಮಂಜು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. 

ಇಂದು ಅನಾರೋಗ್ಯದ ಬಗ್ಗೆ  ಸುದೀಪ್​ ಟ್ವೀಟ್​ ಮಾಡಿದ್ದರು. ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದಿದ್ದರು. ಈ ಟ್ವೀಟ್​ ಸಾಕಷ್ಟು ಕುತೂಹಲ ಸೃಷ್ಟಿ ಮಾಡಿತ್ತು. ಅಲ್ಲದೆ, ಸುದೀಪ್​ಗೆ ಕೊರೊನಾ ಇದೆ ಎಂದೇ ಎಲ್ಲರೂ ಭಾವಿಸಿದ್ದರು.

ಈ ಬಗ್ಗೆ ಸುದೀಪ್​ ಮ್ಯಾನೇಜರ್​ ಜಾಕ್ ಮಂಜು ಟಿವಿ9 ಜತೆ ಮಾತನಾಡಿದ್ದಾರೆ. ಸುದೀಪ್​ಗೆ ಕೊರೊನಾ ಪಾಸಿಟಿವ್​ ಇರುವ ವಿಚಾರ ದೃಢಪಟ್ಟಿಲ್ಲ. ಜ್ವರ ಹಿನ್ನೆಲೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಅಂದಹಾಗೆ, ಈ ವಾರ ಬಿಗ್​ ಬಾಸ್​ ಶೋ ಯಾರು ನಡೆಸಿಕೊಡುತ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ 

Covid-19 Karnataka Update: ಕರ್ನಾಟಕದಲ್ಲಿ 14,859 ಜನರಿಗೆ ಕೊರೊನಾ ಸೋಂಕು, 78 ಮಂದಿ ಸಾವು

Published On - 8:00 pm, Fri, 16 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ