AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಕೊರೊನಾ ಪಾಸಿಟಿವ್ ಅಲ್ಲ; ‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

ಸುದೀಪ್​ ಅವರು ಹೊರ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡಬೇಕಿತ್ತು. ಆದರೆ, ಅವರಿಗೆ ಜ್ವರ ಬಂದಿದೆ. ಈ ಬೆನ್ನಲ್ಲೇ ‘ಸುದೀಪ್​ಗೆ ಕೊರೊನಾ ಪಾಸಿಟಿವ್​’ ಎಂದು ಸುದ್ದಿ ಬಿತ್ತರ ಆಗಿತ್ತು. ಇದಕ್ಕೆ ನಿರ್ಮಾಪಕ ಮಂಜು ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಸುದೀಪ್​ಗೆ ಕೊರೊನಾ ಪಾಸಿಟಿವ್ ಅಲ್ಲ; ‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ
ಸುದೀಪ್​-ಮಂಜು
TV9 Web
| Edited By: |

Updated on:Jul 20, 2022 | 7:12 PM

Share

ಕಿಚ್ಚ ಸುದೀಪ್ (Kichcha Sudeep) ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರೋಕೆ ಒಂದು ವಾರ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬ ಸುದ್ದಿ ಹರಿದಾಡಿತ್ತು. ಈಗ ಇದಕ್ಕೆ ‘ವಿಕ್ರಾಂತ್​ ರೋಣ’ ಚಿತ್ರದ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ನೀಡಿದ್ದಾರೆ. ‘ಅವರಿಗೆ ಕೊವಿಡ್ ಪಾಸಿಟಿವ್ ಬಂದಿಲ್ಲ, ಜ್ವರ ಅಷ್ಟೇ’ ಎಂದಿದ್ದಾರೆ ಜಾಕ್ ಮಂಜು.

‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅಬ್ಬರದ ಪ್ರಚಾರ ಮಾಡಲಾಗುತ್ತಿದೆ. ಇತ್ತೀಚೆಗೆ ಸುದೀಪ್ ಅವರು ದೆಹಲಿಗೆ ತೆರಳಿ ಸಿನಿಮಾ ಪ್ರಚಾರ ಮಾಡಿದ್ದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದರು. ಈಗಲೂ ಅವರು ಹೊರ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡಬೇಕಿತ್ತು. ಆದರೆ, ಅವರಿಗೆ ಜ್ವರ ಬಂದಿದೆ. ಈ ಬೆನ್ನಲ್ಲೇ ಕೆಲ ಮಾಧ್ಯಮಗಳು ‘ಸುದೀಪ್​ಗೆ ಕೊರೊನಾ ಪಾಸಿಟಿವ್​’ ಎಂದು ಸುದ್ದಿ ಬಿತ್ತರ ಮಾಡಿದ್ದವು. ಇದಕ್ಕೆ ನಿರ್ಮಾಪಕ ಮಂಜು ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

‘ಸುದೀಪ್ ಮಳೆಯಲ್ಲಿ ನೆನೆದರು. ಹೀಗಾಗಿ ಜ್ವರ ಬಂದಿದೆ. ಈ ಕಾರಣಕ್ಕೆ ಬೇರೆ ರಾಜ್ಯಗಳಲ್ಲಿ ಅವರು ಪ್ರಮೋಷನ್​ಗೆ ಹಾಜರಾಗಿಲ್ಲ. ಜುಲೈ 22ರಿಂದ ಸಿನಿಮಾ ಪ್ರಚಾರದಲ್ಲಿ ಕಿಚ್ಚ ಭಾಗಿ ಆಗಲಿದ್ದಾರೆ. ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ’ ಎಂದು ಮಂಜು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಸುದೀಪ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Jacqueline Fernandez: ಸೆನ್ಸೇಶನ್ ಸೃಷ್ಟಿಸಿದ ‘ರಾ ರಾ ರಕ್ಕಮ್ಮ’; ಕನ್ನಡದಲ್ಲೇ ಧನ್ಯವಾದ ಹೇಳಿದ ಜಾಕ್ವೆಲಿನ್​
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

ಜುಲೈ 25ಕ್ಕೆ ಪ್ರೀ-ರಿಲೀಸ್​ ಕಾರ್ಯಕ್ರಮ ಮಾಡಲು ‘ವಿಕ್ರಾಂತ್ ರೋಣ’ ಸಿನಿಮಾ ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಸುದೀಪ್ ಮಾತನಾಡಿದ್ದರು.‘ಜುಲೈ 25ಕ್ಕೆ ಪ್ರೀ-ರಿಲೀಸ್​ ಕಾರ್ಯಕ್ರಮ ಮಾಡಬೇಕು ಅಂತ ಅಂದುಕೊಂಡಿದ್ದೇವೆ. ಒಂದೆರಡು ದಿನ ಆಚೀಚೆ ಆಗಬಹುದು. ಆ ಸಮಯದಲ್ಲಿ ನೀವೆಲ್ಲರೂ ಬಿಡುವು ಮಾಡಿಕೊಂಡಿರಿ. ಬೇರೆ ಕಡೆಗಳಲ್ಲಿ ಪ್ರಚಾರ ಕಾರ್ಯ ಮುಗಿಸಿಕೊಂಡು ಮತ್ತೆ ನಮ್ಮ ಊರಿಗೆ, ನಮ್ಮ ಜನರ ಬಳಿ ಬರುತ್ತೇನೆ. ವಿಕ್ರಾಂತ್​ ರೋಣ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಎಲ್ಲರೂ ಭಾಗಿ ಆಗೋಣ’ ಎಂದು ಕಿಚ್ಚ ಸುದೀಪ್​ ಹೇಳಿದ್ದರು.

ಇದನ್ನೂ ಓದಿ: ಸುದೀಪ್​​ಗೆ ಉತ್ತರ ಭಾರತದವರು ‘ಬಾಜಿರಾವ್’ ಹೀರೋ ಎಂದು ಕರೆಯುತ್ತಿದ್ದುದು ಏಕೆ? ಕಿಚ್ಚ ಬಿಚ್ಚಿಟ್ರು ಅಚ್ಚರಿಯ ಮಾಹಿತಿ

ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 3ಡಿ ಅವತರಣಿಕೆಯಲ್ಲಿ ಸಿನಿಮಾ ಮೂಡಿ ಬರುತ್ತಿರುವುದು ವಿಶೇಷ.

Published On - 7:12 pm, Wed, 20 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ