AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ನೋಡಿ ತಾಯಿಗೆ ಸುದೀಪ್ ಕೊಡಿಸಿದ್ದ ಮೊದಲ ಸೀರೆ..

ಅಮ್ಮನಿಗೆ ಸೀರೆ ಕೊಡಿಸೋ ಆಸೆ ಎಲ್ಲರಿಗೂ ಇರುತ್ತದೆ. ಕಿಚ್ಚ ಸುದೀಪ್ ಅವರು ಏಳನೇ ತರಗತಿಯಲ್ಲೇ ಅಮ್ಮನಿಗೆ ಸೀರೆ ಕೊಡಿಸಿದ್ದರು. ಬಿಳಿ ಬಣ್ಣದ ಸೀರೆ ಇದಾಗಿತ್ತು. ಈ ಬಗ್ಗೆ ಅವರು ಮಾತನಾಡಿದ್ದರು. ಈ ಬಗ್ಗೆ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮಾತನಾಡಿದ್ದರು.

ಇದೇ ನೋಡಿ ತಾಯಿಗೆ ಸುದೀಪ್ ಕೊಡಿಸಿದ್ದ ಮೊದಲ ಸೀರೆ..
ಸುದೀಪ್ (PC: ವೀಕೆಂಡ್ ವಿತ್ ರಮೇಶ್)
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 21, 2024 | 8:14 AM

Share

ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡರು. ಅಕ್ಟೋಬರ್ 20ರ ಬೆಳಿಗ್ಗೆ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ನಿಧನ ಹೊಂದಿದರು. ಅವರಿಗೆ ಸಾಕಷ್ಟು ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುದೀಪ್ ಅವರು ‘ವೀಕೆಂಡ್ ವಿತ್ ರಮೇಶ್’ಗೆ ಬಂದಾಗ ಅವರು ತಾಯಿ ಬಗ್ಗೆ ವಿಶೇಷವಾಗಿ ಮಾತನಾಡಿದ್ದರು. ಅವರ ತೋರಿದ ಪ್ರೀತಿ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ, ಅಮ್ಮನಿಗೆ ಕೊಡಿಸಿದ ಸೀರೆಯನ್ನು ಕೊಡಿಸಲಾಗಿತ್ತು.

ಅಮ್ಮನಿಗೆ ಸೀರೆ ಕೊಡಿಸೋ ಆಸೆ ಎಲ್ಲರಿಗೂ ಇರುತ್ತದೆ. ಕಿಚ್ಚ ಸುದೀಪ್ ಅವರು ಏಳನೇ ತರಗತಿಯಲ್ಲೇ ಅಮ್ಮನಿಗೆ ಸೀರೆ ಕೊಡಿಸಿದ್ದರು. ಬಿಳಿ ಬಣ್ಣದ ಸೀರೆ ಇದಾಗಿತ್ತು. ಈ ಬಗ್ಗೆ ಅವರು ಮಾತನಾಡಿದ್ದರು. ‘ಕೇಂಬ್ರೀಡ್ಜ್​ ಸ್ಕೂಲ್​ನಲ್ಲಿ ಓದುತ್ತಿದ್ದೆ. ನಾನು ಆಗ ಏಳನೇ ತರಗತಿ ನನ್ನ ಅವರು ಆಗ್ರಾಗೆ ಕರೆದುಕೊಂಡು ಹೋಗಿದ್ದರು. ಆಗ ನಾನು ಈ ಸೀರೆ ಕೊಡಿಸಿದ್ದೆ’ ಎಂದರು ಅವರು.

ಹಾಗಂತ ಇದು ಅಪ್ಪ ಕೊಡಿಸಿದ ಹಣದಿಂದ ಈ ಸೀರೆಯನ್ನು ಅವರು ಕೊಡಿಸಿರಲಿಲ್ಲ. ಇದನ್ನು ಅವರು ಕೊಡಿಸಿದ್ದು ತಮ್ಮದೇ ಸೇವಿಂಗ್ಸ್ ಹಣದಿಂದ ಅನ್ನೋದು ವಿಶೇಷ. ಇದನ್ನು ಅವರು ಸೇಫ್ ಆಗಿ ಈಗಲೂ ಇಟ್ಟುಕೊಂಡಿದ್ದಾರೆ ಅನ್ನೋದು ವಿಶೇಷ. ‘ನನ್ನ ಅಮ್ಮಂದು ಅನ್ ಕಂಡೀಷನಲ್ ಲವ್’ ಎಂದಿದ್ದರು ಸುದೀಪ್.

ಸುದೀಪ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಬರುತ್ತಾರೆ ಎಂದಾಗ ಅವರಿಗೆ ಬೆಂಬಲ ನೀಡಿದ್ದು ಅಪ್ಪ ಹಾಗೂ ಅಮ್ಮ. ಅವರು ಸಿನಿಮಾ ಶೂಟಿಂಗ್​ಗೆ ಹೊರ ರಾಜ್ಯಗಳಿಗೆ ಹೋದಾಗ ಅವರು ಬಿಗ್ ಬಾಸ್​ ಶೂಟ್​ಗಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರು ಬೆಂಗಳೂರಿಗೆ ಬಂದು, ನಂತರ ಮನೆಗೆ ತೆರಳಿ ತಂದೆ-ತಾಯಿ ಆಶೀರ್ವಾದ ಪಡೆದು ಸಾಗುತ್ತಿದ್ದರು.

ಇದನ್ನೂ ಓದಿ: ‘ಸುದೀಪ್ ತೆಗೆದುಕೊಂಡ ನಿಲುವು ತಪ್ಪು’; ಕಿಚ್ಚನ ವಿರುದ್ಧ ಅಪಸ್ವರ ತೆಗೆದ ಚೈತ್ರಾ ಕುಂದಾಪುರ

ಸುದೀಪ್ ಅವರು ಬಿಗ್ ಬಾಸ್​ನ ನಡೆಸಿಕೊಡುತ್ತಿದ್ದಾರೆ. ಶನಿವಾರ ಅವರು ಕೇವಲ ಒಂದು ಎಪಿಸೋಡ್​ನ ಶೂಟ್ ಕೂಡ ಮಾಡಿದ್ದರು. ಇದು ಪ್ರಸಾರ ಕಂಡಿದೆ. ಸದ್ಯ ಅವರು ಹಲವು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್