AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?

ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 24, 2024 | 9:44 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗಷ್ಟೇ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಸುದೀಪ್ ಅವರು ಸಂದರ್ಶನಕ್ಕೆ ಕುಳಿತರೆ ಅನೇಕ ಕಿವಿಮಾತುಗಳನ್ನು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಹಲವು ಸಂದರ್ಶನಗಳಲ್ಲಿ ಕಿವಿಮಾತು ಹೇಳಿದ್ದರು. ಈಗ ಅವರು ಹೇಳಿದ ಜೀವನದ ಪಾಠದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುದೀಪ್ ಅಭಿಮಾನಿಗಳು ಇದನ್ನು ಶೇರ್ ಮಾಡಿಕೊಳ್ಳುತ್ತಾ ಇದ್ದಾರೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಆರಾಧಿಸುತ್ತಾರೆ. ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲೂ ಅವರಿಗೆ ಫ್ಯಾನ್ಸ್ ಇದ್ದಾರೆ. ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಫರಾರಿ, ಲ್ಯಾಂಬೋರ್ಗಿನಿ ಇರಲಿ, ರೋಲ್ಸ್ ರಾಯ್ಸ್ ಇರಲಿ ಪಾಯಿಂಟ್ ಅದಲ್ಲ. ಲೈಫ್ ಅನ್ನೋ ರೋಡ್​ಗೆ ಇಳಿದರೆ ಎಲ್ಲರೂ ಹೋಗೋ ಸ್ಪೀಡ್​ನಲ್ಲಿ ನೀವು ಹೋಗಬೇಕು. ಫೆರಾರಿ ಬಂತು ಬಿಡ್ರಪ್ಪ ಎಂದು ಯಾರೂ ಹೇಳಲ್ಲ. ಸಿಗ್ನಲ್ ಬಂದಾಗ ನಿಲ್ಲಲೇಬೇಕು. ಎಮರ್ಜೆನ್ಸಿಯಲ್ಲಿ ಆ್ಯಂಬುಲೆನ್ಸ್ ಬಂದಾಗ ನೀವು ಅವರಿಗೆ ದಾರಿ ಬಿಟ್ಟುಕೊಡಬೇಕು’ ಎಂದು ಸುದೀಪ್ ಅವರು ಹೇಳಿದ್ದರು.

ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲೇ 27 ವರ್ಷ ಕಳೆದಿದ್ದಾರೆ. ಅವರ ತಂದೆಗೆ ಚಿತ್ರರಂಗದವರ ಜೊತೆ ನಂಟು ಇದ್ದರೂ ಅದನ್ನು ಸುದೀಪ್ ಬಳಸಿಕೊಳ್ಳಲಿಲ್ಲ. ಅವರು ತಾವಾಗೇ ಮೇಲೆ ಬರೋಕೆ ಪ್ರಯತ್ನಿಸಿದರು. ಈ ಕಾರಣಕ್ಕೆ ಜೀವನದಲ್ಲಿ ಹಲವು ಪಾಠಗಳನ್ನು ಅವರು ಕಲಿತಿದ್ದಾರೆ. ಹೀಗಾಗಿ ಸುದೀಪ್ ಅವರು ಆಗಾಗ ಜೀವನದ ಪಾಠಗಳನ್ನು ಹೇಳಿಕೊಡುತ್ತಾ ಇರುತ್ತಾರೆ. ಇದನ್ನು ಅನೇಕರು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ತೆಲುಗು ನಟನಿಗೆ ಶುಭ ಕೋರಿದ ದರ್ಶನ್, ಕಿಚ್ಚ ಸುದೀಪ್, ಯಾರು ಈ ‘ರಾಕಿಂಗ್ ಸ್ಟಾರ್’

ಕಿಚ್ಚ ಸುದೀಪ್ ಜೊತೆ ‘ಮ್ಯಾಕ್ಸ್’ ಸಿನಿಮಾದಲ್ಲಿ ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡ್, ಸುನಿಲ್, ಇಳವರಸು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಎಸ್​. ಧನು ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:36 am, Fri, 24 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?