Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?

ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:May 24, 2024 | 9:44 AM

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗಷ್ಟೇ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಸುದೀಪ್ ಅವರು ಸಂದರ್ಶನಕ್ಕೆ ಕುಳಿತರೆ ಅನೇಕ ಕಿವಿಮಾತುಗಳನ್ನು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಹಲವು ಸಂದರ್ಶನಗಳಲ್ಲಿ ಕಿವಿಮಾತು ಹೇಳಿದ್ದರು. ಈಗ ಅವರು ಹೇಳಿದ ಜೀವನದ ಪಾಠದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುದೀಪ್ ಅಭಿಮಾನಿಗಳು ಇದನ್ನು ಶೇರ್ ಮಾಡಿಕೊಳ್ಳುತ್ತಾ ಇದ್ದಾರೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಆರಾಧಿಸುತ್ತಾರೆ. ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲೂ ಅವರಿಗೆ ಫ್ಯಾನ್ಸ್ ಇದ್ದಾರೆ. ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಫರಾರಿ, ಲ್ಯಾಂಬೋರ್ಗಿನಿ ಇರಲಿ, ರೋಲ್ಸ್ ರಾಯ್ಸ್ ಇರಲಿ ಪಾಯಿಂಟ್ ಅದಲ್ಲ. ಲೈಫ್ ಅನ್ನೋ ರೋಡ್​ಗೆ ಇಳಿದರೆ ಎಲ್ಲರೂ ಹೋಗೋ ಸ್ಪೀಡ್​ನಲ್ಲಿ ನೀವು ಹೋಗಬೇಕು. ಫೆರಾರಿ ಬಂತು ಬಿಡ್ರಪ್ಪ ಎಂದು ಯಾರೂ ಹೇಳಲ್ಲ. ಸಿಗ್ನಲ್ ಬಂದಾಗ ನಿಲ್ಲಲೇಬೇಕು. ಎಮರ್ಜೆನ್ಸಿಯಲ್ಲಿ ಆ್ಯಂಬುಲೆನ್ಸ್ ಬಂದಾಗ ನೀವು ಅವರಿಗೆ ದಾರಿ ಬಿಟ್ಟುಕೊಡಬೇಕು’ ಎಂದು ಸುದೀಪ್ ಅವರು ಹೇಳಿದ್ದರು.

ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲೇ 27 ವರ್ಷ ಕಳೆದಿದ್ದಾರೆ. ಅವರ ತಂದೆಗೆ ಚಿತ್ರರಂಗದವರ ಜೊತೆ ನಂಟು ಇದ್ದರೂ ಅದನ್ನು ಸುದೀಪ್ ಬಳಸಿಕೊಳ್ಳಲಿಲ್ಲ. ಅವರು ತಾವಾಗೇ ಮೇಲೆ ಬರೋಕೆ ಪ್ರಯತ್ನಿಸಿದರು. ಈ ಕಾರಣಕ್ಕೆ ಜೀವನದಲ್ಲಿ ಹಲವು ಪಾಠಗಳನ್ನು ಅವರು ಕಲಿತಿದ್ದಾರೆ. ಹೀಗಾಗಿ ಸುದೀಪ್ ಅವರು ಆಗಾಗ ಜೀವನದ ಪಾಠಗಳನ್ನು ಹೇಳಿಕೊಡುತ್ತಾ ಇರುತ್ತಾರೆ. ಇದನ್ನು ಅನೇಕರು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ತೆಲುಗು ನಟನಿಗೆ ಶುಭ ಕೋರಿದ ದರ್ಶನ್, ಕಿಚ್ಚ ಸುದೀಪ್, ಯಾರು ಈ ‘ರಾಕಿಂಗ್ ಸ್ಟಾರ್’

ಕಿಚ್ಚ ಸುದೀಪ್ ಜೊತೆ ‘ಮ್ಯಾಕ್ಸ್’ ಸಿನಿಮಾದಲ್ಲಿ ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡ್, ಸುನಿಲ್, ಇಳವರಸು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಎಸ್​. ಧನು ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:36 am, Fri, 24 May 24

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್