AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?

ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 24, 2024 | 9:44 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗಷ್ಟೇ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಸುದೀಪ್ ಅವರು ಸಂದರ್ಶನಕ್ಕೆ ಕುಳಿತರೆ ಅನೇಕ ಕಿವಿಮಾತುಗಳನ್ನು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಹಲವು ಸಂದರ್ಶನಗಳಲ್ಲಿ ಕಿವಿಮಾತು ಹೇಳಿದ್ದರು. ಈಗ ಅವರು ಹೇಳಿದ ಜೀವನದ ಪಾಠದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುದೀಪ್ ಅಭಿಮಾನಿಗಳು ಇದನ್ನು ಶೇರ್ ಮಾಡಿಕೊಳ್ಳುತ್ತಾ ಇದ್ದಾರೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಆರಾಧಿಸುತ್ತಾರೆ. ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲೂ ಅವರಿಗೆ ಫ್ಯಾನ್ಸ್ ಇದ್ದಾರೆ. ಸುದೀಪ್ ಅವರ ಅಭಿಮಾನಿ ಬಳಗ ಹಿರಿದಾಗುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಅವರು ಆಗಾಗ ಅಭಿಮಾನಿಗಳಿಗಾಗಿ ಕಿವಿಮಾತು ಹೇಳುತ್ತಾ ಇರುತ್ತಾರೆ. ಈ ಮೊದಲು ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ನಾವು ಎಷ್ಟೇ ದೊಡ್ಡವರಾದರೂ ಜೀವನ ಅನ್ನೋದು ಬಂದಾಗ ಎಲ್ಲರೂ ಜೊತೆ ಸಾಗಬೇಕು ಎಂದಿದ್ದರು.

‘ನಿಮ್ಮತ್ರ ಫರಾರಿ, ಲ್ಯಾಂಬೋರ್ಗಿನಿ ಇರಲಿ, ರೋಲ್ಸ್ ರಾಯ್ಸ್ ಇರಲಿ ಪಾಯಿಂಟ್ ಅದಲ್ಲ. ಲೈಫ್ ಅನ್ನೋ ರೋಡ್​ಗೆ ಇಳಿದರೆ ಎಲ್ಲರೂ ಹೋಗೋ ಸ್ಪೀಡ್​ನಲ್ಲಿ ನೀವು ಹೋಗಬೇಕು. ಫೆರಾರಿ ಬಂತು ಬಿಡ್ರಪ್ಪ ಎಂದು ಯಾರೂ ಹೇಳಲ್ಲ. ಸಿಗ್ನಲ್ ಬಂದಾಗ ನಿಲ್ಲಲೇಬೇಕು. ಎಮರ್ಜೆನ್ಸಿಯಲ್ಲಿ ಆ್ಯಂಬುಲೆನ್ಸ್ ಬಂದಾಗ ನೀವು ಅವರಿಗೆ ದಾರಿ ಬಿಟ್ಟುಕೊಡಬೇಕು’ ಎಂದು ಸುದೀಪ್ ಅವರು ಹೇಳಿದ್ದರು.

ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲೇ 27 ವರ್ಷ ಕಳೆದಿದ್ದಾರೆ. ಅವರ ತಂದೆಗೆ ಚಿತ್ರರಂಗದವರ ಜೊತೆ ನಂಟು ಇದ್ದರೂ ಅದನ್ನು ಸುದೀಪ್ ಬಳಸಿಕೊಳ್ಳಲಿಲ್ಲ. ಅವರು ತಾವಾಗೇ ಮೇಲೆ ಬರೋಕೆ ಪ್ರಯತ್ನಿಸಿದರು. ಈ ಕಾರಣಕ್ಕೆ ಜೀವನದಲ್ಲಿ ಹಲವು ಪಾಠಗಳನ್ನು ಅವರು ಕಲಿತಿದ್ದಾರೆ. ಹೀಗಾಗಿ ಸುದೀಪ್ ಅವರು ಆಗಾಗ ಜೀವನದ ಪಾಠಗಳನ್ನು ಹೇಳಿಕೊಡುತ್ತಾ ಇರುತ್ತಾರೆ. ಇದನ್ನು ಅನೇಕರು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ತೆಲುಗು ನಟನಿಗೆ ಶುಭ ಕೋರಿದ ದರ್ಶನ್, ಕಿಚ್ಚ ಸುದೀಪ್, ಯಾರು ಈ ‘ರಾಕಿಂಗ್ ಸ್ಟಾರ್’

ಕಿಚ್ಚ ಸುದೀಪ್ ಜೊತೆ ‘ಮ್ಯಾಕ್ಸ್’ ಸಿನಿಮಾದಲ್ಲಿ ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡ್, ಸುನಿಲ್, ಇಳವರಸು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಎಸ್​. ಧನು ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:36 am, Fri, 24 May 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?