AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

ಪುನೀತ್​ ಅಂತಿಮ ದರ್ಶನ ಪಡೆದು ಬಂದಿದ್ದಾರೆ ಕಿಚ್ಚ. ಇದು ಅವರನ್ನು ತುಂಬಾನೇ ಘಾಸಿಗೊಳಿಸಿದೆ. ಈ ಕುರಿತು ಅವರು ಭಾವುಕ ಸಾಲುಗಳನ್ನು ಬರೆದು, ನುಡಿ ನಮನ ಸಲ್ಲಿಸಿದ್ದಾರೆ.

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ
ಸುದೀಪ್​-ಪುನೀತ್​
TV9 Web
| Edited By: |

Updated on:Oct 30, 2021 | 3:08 PM

Share

ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಕಿಚ್ಚ ಸುದೀಪ್​ ಕೂಡ ಈ ಬಗ್ಗೆ ಕಂಬನಿ ಮಿಡಿದಿದ್ದಾರೆ. ಪುನೀತ್​ ಅಂತಿಮ ದರ್ಶನ ಪಡೆದು ಬಂದಿದ್ದಾರೆ ಕಿಚ್ಚ. ಇದು ಅವರನ್ನು ತುಂಬಾನೇ ಘಾಸಿಗೊಳಿಸಿದೆ. ಈ ಕುರಿತು ಅವರು ಭಾವುಕ ಸಾಲುಗಳನ್ನು ಬರೆದು, ನುಡಿ ನಮನ ಸಲ್ಲಿಸಿದ್ದಾರೆ.

‘ಚಿತ್ರೋದ್ಯಮ ಇಂದು ಅಪೂರ್ಣವಾಗಿ ಕಾಣುತ್ತಿದೆ. ಸಮಯ ಕ್ರೂರಿ. ನಿನ್ನೆ ಪ್ರಕೃತಿಯೂ ದುಃಖಿಸಿ ಅಳುತ್ತಿರುವಂತೆ ಕಂಡಿತು. ಕಪ್ಪು ಮೋಡಗಳು ತುಂಬಿತ್ತು. ನಿಜಕ್ಕೂ ಅದು ಬೇಸರದ ದಿನ. ನಾನು ಬೆಂಗಳೂರಿಗೆ ಬಂದಿಳಿದು ಅವರ ಶವವನ್ನು ಇರಿಸಿದ್ದ ಕಡೆಗೆ ಹೊರಟೆ. ಇನ್ನೂ ಒಪ್ಪಿಕೊಳ್ಳದ ಸತ್ಯಕ್ಕೆ ಹತ್ತಿರವಾಗುತ್ತಿದ್ದಂತೆ ನನ್ನ ಉಸಿರು ಭಾರವಾಗತೊಡಗಿತು’ ಎಂದು ಸುದೀಪ್​ ಪತ್ರ ಆರಂಭಿಸಿದ್ದಾರೆ.

‘ಪುನೀತ್​ ಮಲಗಿದ್ದನ್ನು ನೋಡಿದಾಗ ಎಲ್ಲರೂ ಮನಸ್ಸಿನ ಮೇಲೆ ಪರ್ವತ ಹೊತ್ತು ನಿಂತಿದ್ದಾರೆ ಎನಿಸುತ್ತಿತ್ತು. ಹೇಗೆ, ಏಕೆ ಎನ್ನುವ ಪ್ರಶ್ನೆಗಳು ಮೂಡಲು ಆರಂಭವಾದವು.  ಮೊದಲ ಬಾರಿಗೆ ನನಗೆ ಸರಿಯಾಗಿ ಉಸಿರಾಡಲು ಆಗಲಿಲ್ಲ. ಅವರು ನನ್ನ ಸಹೋದ್ಯೋಗಿ, ಗೆಳೆಯ. ಅವರು ಇರಬಾರದ ಜಾಗದಲ್ಲಿ ಇದ್ದರು. ನನಗೆ ಅಲ್ಲಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲೇ ಇಲ್ಲ. ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’ ಎಂದಿದ್ದಾರೆ ಸುದೀಪ್​.

‘ಶಿವಣ್ಣನನ್ನು ಆ ಸ್ಥಿತಿಯಲ್ಲಿ ನೋಡಿ ನನಗೆ ಮತ್ತಷ್ಟು ನೋವಾಯಿತು. ‘ಅವನು (ಪುನೀತ್) ನನಗಿಂತ 13 ವರ್ಷ ಚಿಕ್ಕವನು. ನಾನು ಅವನನ್ನು ಈ ತೋಳುಗಳಲ್ಲಿ ಹಿಡಿದಿದ್ದೇನೆ’ ಎಂದು ಶಿವಣ್ಣ ಹೇಳಿದರು. ಪ್ರತಿಯೊಬ್ಬರೂ ಆಘಾತಕ್ಕೊಳಗಾಗಿದ್ದಾರೆ. ಇದನ್ನು ಎಲ್ಲರೂ ಒಪ್ಪಿಕೊಳ್ಳಲು ಬಹಳ ಸಮಯ ಹಿಡಿಯುತ್ತದೆ.  ಅದನ್ನು ನಾವು ಒಪ್ಪಿಕೊಂಡರೂ ಅವರು ಬಿಟ್ಟು ಹೋದ ಸ್ಥಾನ ಖಾಲಿಯಾಗೇ ಇರುತ್ತದೆ. ಅದನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅದು ಓರ್ವ ಮಹಾನ್​ ವ್ಯಕ್ತಿಗೆ ಸೇರಿದ ಜಾಗ, ಪುನೀತ್​ ನಮ್ಮ ಪ್ರೀತಿಯ ‘ಅಪ್ಪು’ ಎಂಬ ಒಬ್ಬ ಮಹಾನ್ ಮಾನವನಿಗೆ ಸೇರಿದ ಸ್ಥಳ. Go in Peace, REST IN POWER my friend’ ಎಂದು ಸುದೀಪ್​ ಭಾವುಕವಾಗಿ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 3:07 pm, Sat, 30 October 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು